AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಲಿತ ಮಹಿಳೆಗೆ ಅವಹೇಳನ ಆರೋಪ: ಯತ್ನಾಳ್‌ಗೆ ರಿಲೀಫ್, ಒಂದು ಸಮುದಾಯ ಓಲೈಸಿದ್ರೆ ಹೀಗಾಗುತ್ತೆ ಎಂದ ಕೋರ್ಟ್

ದಲಿತ ಮಹಿಳೆಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ವಿಜಯಪುರ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ. ದಲಿತ ಸಂಘಟನೆಯ ಯುವ ಮುಖಂಡ ದೂರಿನನ್ವಯ ಕೊಪ್ಪಳ ನಗರ ಠಾಣೆಯಲ್ಲಿ SC/ST ಕಾಯ್ದೆಯಡಿ ಜಾತಿನಿಂದನೆ ಪ್ರಕರಣ ದಾಖಲಾಗಿದೆ. ಆದ್ರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಯತ್ನಾಳ್​​​ ಗೆ ಬಿಗ್ ರಿಲೀಫ್ ನೀಡಿದೆ.

ದಲಿತ ಮಹಿಳೆಗೆ ಅವಹೇಳನ ಆರೋಪ: ಯತ್ನಾಳ್‌ಗೆ ರಿಲೀಫ್, ಒಂದು ಸಮುದಾಯ ಓಲೈಸಿದ್ರೆ ಹೀಗಾಗುತ್ತೆ ಎಂದ ಕೋರ್ಟ್
Basanagouda Patil Yatnal
Ramesha M
| Edited By: |

Updated on:Sep 17, 2025 | 6:48 PM

Share

ಬೆಂಗಳೂರು/ಕೊಪ್ಪಳ, (ಸೆಪ್ಟೆಂಬರ್ 17): ದಲಿತ ಮಹಿಳೆಯ (Dalit Woman) ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​​ ಗೆ ((Basanagouda Patil Yatnal)) ಹೈಕೋರ್ಟ್ (Karnataka High Court) ಬಿಗ್ ರಿಲೀಫ್ ನೀಡಿದೆ. ಅಟ್ರಾಸಿಟಿ ಕಾಯ್ದೆಯಡಿ ಕೊಪ್ಪಳದಲ್ಲಿ (Koppal) ದಾಖಲಾಗಿರುವ FIR ಪ್ರಶ್ನಿಸಿ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​​, ಬಸನಗೌ ಪಾಟೀಲ್ ಯತ್ನಾಳ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ಹೊರಡಿಸಿದೆ. ಅಲ್ಲದೇ ಪೊಲೀಸರ ತನಿಖೆಗೆ ಸಹಕರಿಸಲು ಯತ್ನಾಳ್‌ಗೆ ಸೂಚಿಸಿದೆ. ಯಾವುದೇ ಪಕ್ಷದವರಿರಲಿ ಒಂದು ಸಮುದಾಯ ಓಲೈಸಿದರೆ ಹೀಗಾಗುತ್ತದೆ. ಭಾರತೀಯರನ್ನು ಭಾರತೀಯರಂತೆಯೇ ನೋಡಿದರೆ ಈ ಸಮಸ್ಯೆ ಇರುವುದಿಲ್ಲ ಎಂದು ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.

ಸನಾತನ ಧರ್ಮದ ಹೆಣ್ಣುಮಕ್ಕಳಿಗೆ ಚಾಮುಂಡಿ ತಾಯಿಗೆ ಪೂಜೆ ಹಕ್ಕಿದೆ. ದಲಿತ ಹೆಣ್ಣುಮಕ್ಕಳರಲಿ ಯಾವುದೇ ಸಮಾಜದವರಿರಲಿ ಹಕ್ಕಿದೆ ಎಂದು ಯತ್ನಾಳ್ ಅವರು ಹೇಳಿದ್ದಾರೆ. ಆದ್ರೆ, ಅವರ ಹೇಳಿಕೆ ತಿರುಚಿ ವಿವಾದ ಸೃಷ್ಟಿಸಿದ್ದಾರೆ ಎಂದು ಯತ್ನಾಳ್ ಪರ ವಕೀಲ ವೆಂಕಟೇಶ ದಳವಾಯಿ ವಾದ ಮಂಡಿಸಿದರು. ಸಾಲದಕ್ಕೆ ಯತ್ನಾಳ್​ ಹೇಳಿಕೆಯನ್ನು ಮೊಬೈಲ್‌ನಲ್ಲಿ ಜಡ್ಜ್​​ ಗೆ ಕೇಳಿಸಿರು. ಇದನ್ನು ಪರಿಗಣಿಸಿದ ಹೈಕೋರ್ಟ್, ಶಾಸಕ ಯತ್ನಾಳ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಿದ್ದು, ಯಾವುದೇ ಪಕ್ಷದವರಿರಲಿ ಒಂದು ಸಮುದಾಯ ಓಲೈಸಿದರೆ ಹೀಗಾಗುತ್ತದೆ. ಭಾರತೀಯರನ್ನು ಭಾರತೀಯರಂತೆಯೇ ನೋಡಿದರೆ ಈ ಸಮಸ್ಯೆ ಇರುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಎಫ್​ಐಆರ್​ಗಳಿಗೆ ಕ್ಯಾರೇ ಇಲ್ಲ! ದಿನಾ ಐದು ಸಲ ಕೂಗಿದ್ರೆ ನಮಗೂ ತೊಂದರೆಯಾಗುತ್ತೆ: ರಾಯಚೂರಿನಲ್ಲಿ ಮತ್ತೆ ಗುಡುಗಿದ ಯತ್ನಾಳ್

ಏನಿದು ಪ್ರಕರಣ?

ದಲಿತ ಮಹಿಳೆಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ (FIR) ದಾಖಲಾಗಿತ್ತು. ಕೊಪ್ಪಳ (Koppal) ನಗರದ ದಲಿತ ಸಂಘಟನೆಯ ಯುವ ಮುಖಂಡ ಮಲ್ಲಿಕಾರ್ಜುನ ಪೂಜಾರ ಅವರು ದೂರು ದಾಖಲಿಸಿದ್ದು, ಯತ್ನಾಳ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ. ದೂರಿನನ್ವಯ ಕೊಪ್ಪಳ ನಗರ ಠಾಣೆಯಲ್ಲಿ SC/ST ಕಾಯ್ದೆಯಡಿ ಜಾತಿನಿಂದನೆ ಪ್ರಕರಣ ದಾಖಲಾಗಿತ್ತು.

ದೂರಿನಲ್ಲೇನಿದೆ?

ಕಳೆದ ಎರಡು ದಿನಗಳ ಹಿಂದೆ ಯತ್ನಾಳ್ ಅವರು ಮಾಧ್ಯಮಗಳೊಂದಿಗೆ ಮಾತನಾಡುವ ಸಂದರ್ಭದಲ್ಲಿ, ಹಿಂದೂಗಳ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಮಾಡಲಿರುವ ಬಾನು ಮುಷ್ತಾಕ್ ವಿರುದ್ಧ ಮಾತನಾಡುವ ಭರಾಟೆಯಲ್ಲಿ ಸನಾತನ ಧರ್ಮದವರು ಮಾತ್ರ ತಾಯಿ ಚಾಮುಂಡಿಗೆ ಹೂ ಮುಡಿಸಬೇಕು ಹೊರತು ಒಬ್ಬ ದಲಿತ ಮಹಿಳೆಗೂ ಅವಕಾಶ ಕೊಡಲ್ಲ ಎಂದು ಹೇಳಿಕೆ ನೀಡಿ ದಲಿತ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ದಲಿತ ಹೆಣ್ಣುಮಕ್ಕಳ ಬಗ್ಗೆ ಕೀಳು ಮಟ್ಟದಲ್ಲಿ ಮಾತನಾಡಿರುವುದು ದಲಿತ ಸಮುದಾಯಕ್ಕೆ ನೋವಾಗಿದೆ. ಅವರು ಮಾತನಾಡಿರುವ ವಿಡಿಯೋ ಆಧಾರದಲ್ಲಿ ಅವರ ವಿರುದ್ಧ SC/ST ಜಾತಿನಿಂದನೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಮತ್ತು ಯತ್ನಾಳ್ ಅವರು ರಾಜ್ಯದ ಹಲವು ಜಿಲ್ಲೆಗಳಿಗೆ ತೆರಳಿ ಕೋಮು ಸಂಘರ್ಷ ಸೃಷ್ಟಿಸುವಂತಹ ಹೇಳಿಕೆ ನೀಡುತ್ತಿರುವುದಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:39 pm, Wed, 17 September 25

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ