AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ಕುರುಬರ ಸಂಘದಲ್ಲಿ ಕೈ ವಿರೋಧಿ ಭಾವನೆ ಇದೆ: ರಾಜಕೀಯವಾಗಿ ಬಳಸಿಕೊಳ್ಳಿ- ಕಾರ್ಯಕರ್ತರಿಗೆ ಬಿ ಎಲ್​ ಸಂತೋಷ್ ಸೂಚನೆ

ಕೋಲಾರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧಿಸುವ ಬಗ್ಗೆ ಹೆಚ್ಚಿನ ಒತ್ತಡ ಬೇಡ, ಯಾರೇ ಬಂದರೂ ನಮ್ಮ ಸಂಘಟನೆ ಗಟ್ಟಿ ಇದ್ದರೆ ಗೆಲುವು ನಮ್ಮದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹೇಳಿದ್ದಾರೆ.

ಕೋಲಾರ ಕುರುಬರ ಸಂಘದಲ್ಲಿ ಕೈ ವಿರೋಧಿ ಭಾವನೆ ಇದೆ: ರಾಜಕೀಯವಾಗಿ ಬಳಸಿಕೊಳ್ಳಿ- ಕಾರ್ಯಕರ್ತರಿಗೆ ಬಿ ಎಲ್​ ಸಂತೋಷ್ ಸೂಚನೆ
ಬಿ ಎಲ್ ಸಂತೋಷ್ Image Credit source: Deccan Herald
TV9 Web
| Updated By: ವಿವೇಕ ಬಿರಾದಾರ|

Updated on:Jan 20, 2023 | 12:55 PM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಬಿಜೆಪಿ (BJP) ರಾಷ್ಟ್ರೀಯ ನಾಯಕರು ಒಬ್ಬರ ಹಿಂದೆ ಒಬ್ಬರು ಕರ್ನಾಟಕ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಇದರ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ (BL Santosh) ರಾಜ್ಯದಲ್ಲಿ ಬೀಡು ಬಿಟ್ಟಿದ್ದು, ರಾಜ್ಯ ನಾಯಕರಿಗೆ ಮಹತ್ವದ ಸೂಚನೆ ನೀಡಿದ್ದಾರೆ. ಕೋಲಾರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಸ್ಪರ್ಧಿಸುವ ಬಗ್ಗೆ ಹೆಚ್ಚಿನ ಒತ್ತಡ ಬೇಡ ಎಂದು ಬಿ ಎಲ್ ಸಂತೋಷ್ ಹೇಳಿದ್ದಾರೆ.

ನಿನ್ನೆ (ಜ.19) ರಂದು ಕೋಲಾರದಲ್ಲಿ ನಡೆಸಿದ ಮಹತ್ವದ ಸಭೆಯಲ್ಲಿ ಮಾತನಾಡಿದ ಅವರು ಯಾರೇ ಬಂದರೂ ನಮ್ಮ ಸಂಘಟನೆ ಗಟ್ಟಿ ಇದ್ದರೆ ಗೆಲುವು ನಮ್ಮದೆ. ಮನೆ ಮನೆಗೂ ಪಕ್ಷದ ಕಾರ್ಯಕರ್ತರು ಹೋಗಬೇಕು. ಪ್ರತಿ ಮನೆಯ ಮೇಲೂ ಬಿಜೆಪಿ ಬಾವುಟ ನೆಟ್ಟಿ ಎಂದು ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಘೋಷಣೆ ಬೆನ್ನಲ್ಲೇ ಜಿಲ್ಲಾ ಕುರುಬ ಸಂಘದಲ್ಲಿ ಬಿರುಕೋ ಬಿರುಕು!

ಜಿಲ್ಲೆಯಲ್ಲಿ ಎಲ್ಲ ಸಮುದಾಯಗಳ ಸಭೆ ನಡೆಸಿ. ಸಮುದಾಯದ ಪ್ರಮುಖರನ್ನು ಭೇಟಿಯಾಗಿ ಚರ್ಚಿಸಿ. ಸಣ್ಣ ಸಮುದಾಯಗಳನ್ನೂ ಕಡೆಗಣಿಸವುದು ಬೇಡ. ಹೋಬಳಿ ಮಟ್ಟದಲ್ಲಿ ಜಾತಿ ಸಮಾವೇಶಗಳನ್ನು ಮಾಡಿ. ಕಾಂಗ್ರೆಸ್ ಹಾಗೂ ಜೆಡಿಎಸ್​ನ ಸ್ಥಳಿಯ ನಾಯಕರನ್ನು ಗುರುತಿಸಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಿ. ಈಗಾಗಲೇ ಜಿಲ್ಲಾ ಕುರುಬರ ಸಂಘ ಸೇರಿದಂತೆ ಸ್ಥಳಿಯವಾಗಿ ಸಂಘಗಳಲ್ಲಿ ಕಾಂಗ್ರೆಸ್ ವಿರೋಧಿ ಭಾವನೆ ಇದೆ. ಅದನ್ನು ಸೂಕ್ತ ರೀತಿಯಲ್ಲಿ ರಾಜಕೀಯವಾಗಿ ಬಳಸಿಕೊಳ್ಳಲು ಹೇಳಿದರು.

ಇದನ್ನೂ ಓದಿ: ಚುನಾವಣಾ ವಿಚಾರದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ: ಬಿಜೆಪಿ ವಿರುದ್ಧ ಕಿಡಿಕಾರಿದ ಡಿ ಕೆ ಶಿವಕುಮಾರ್

ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಘಟನಾ ಕಾರ್ಯದರ್ಶಿಗಳ ಸಭೆ

ಇಂದು ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ನೇತೃತ್ವದಲ್ಲಿ ಸಂಘಟನಾ ಕಾರ್ಯದರ್ಶಿಗಳ ಸಭೆ ಆರಂಭವಾಗಿದೆ. ಬೂತ್ ವಿಜಯ, ವಿಜಯ ಸಂಕಲ್ಪ ಅಭಿಯಾನಗಳ ಅನುಷ್ಠಾನ ಸಭೆಗು ಮುನ್ನ ಮಹತ್ವದ ಸಭೆ ನಡೆಸುತ್ತಿದ್ದಾರೆ. ವಿಜಯ ಸಂಕಲ್ಪ ಮಾದರಿ ಅಭಿಯಾನ ಗುಜರಾತ್ ಸೇರಿದಂತೆ ಇನ್ನಿತರ ರಾಜ್ಯಗಳಲ್ಲಿ ಯಶಸ್ವಿ ಹಿನ್ನಲೆ ರಾಜ್ಯದಲ್ಲೂ ಸಮರ್ಪಕವಾಗಿ ಜಾರಿಗೆ ತರಲು ಬಿಜೆಪಿ ಪ್ಲಾನ್ ಮಾಡಿಕೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:54 pm, Fri, 20 January 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ