AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Green Skill Training Centre: ಬಳಸಿದ ಹೂಗಳಿಂದ ರಂಗೋಲಿ, ಸಾವಯವ ಬಣ್ಣ ತಯಾರಿಸುತ್ತಿರುವ ನಿಮ್ಹಾನ್ಸ್​​​, ಇದು ವಿನೂತ ಪ್ರಯತ್ನ ಎಂದ ಶಾಸಕ

ಬಳಸಿದ ಹೂಗಳಿಂದ ನಿಮ್ಹಾನ್ಸ್ ಗ್ರೀನ್ ಸ್ಕಿಲ್ ಟ್ರೈನಿಂಗ್ ಸೆಂಟರ್ ರಂಗೋಲಿ ಮತ್ತು ಸಾವಯವ ಬಣ್ಣ ತಯಾರಿಸುತ್ತಿದ್ದಾರೆ, ಈ ಬಗ್ಗೆ ಶಾಸಕರು ಕೂಡ ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ.

Green Skill Training Centre: ಬಳಸಿದ ಹೂಗಳಿಂದ ರಂಗೋಲಿ, ಸಾವಯವ ಬಣ್ಣ ತಯಾರಿಸುತ್ತಿರುವ ನಿಮ್ಹಾನ್ಸ್​​​,  ಇದು ವಿನೂತ ಪ್ರಯತ್ನ ಎಂದ ಶಾಸಕ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: May 18, 2023 | 11:53 AM

Share

ರಾಜಕಾರಣಿಗಳಿಗೆ ನೀಡುವ ಹೂವಿನ ಹಾರ, ಹೂಗುಚ್ಛಗಳನ್ನು ಏನು? ಮಾಡುತ್ತಾರೆ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು, ಕೆಲವರು ಅದನ್ನು ಕಸದ ಬುಟ್ಟಿಗೆ ಅಥವಾ ಗಿಡಗಳಿಗೆ ಗೊಬ್ಬರ ಎಂದು ಹಾಕಿಕೊಳ್ಳಬಹುದು, ಆದರೆ ಇನ್ನೂ ಕೇಲವರು ಹೀಗೂ ಮಾಡುತ್ತಾರೆ. ಹೌದು ಇತ್ತೀಚೆಗೆ ಕರ್ನಾಟಕದ ಚುನಾವಣೆ ಮುಗಿದು, ಫಲಿತಾಂಶ ಬಂದು ಕಾಂಗ್ರೆಸ್​​​ ಸರ್ಕಾರ ರಚನೆಯಾಗಿದೆ. ಆದರೆ ಈ ಗೆಲುವಿನ ಸಂಭ್ರಮಕ್ಕೆ ಅನೇಕ ಅಭಿಮಾನಿಗಳು, ಹಿರಿಯರು, ಕಾರ್ಯಕರ್ತರು ಹೂವಿನ ಹಾರ, ಹೂಗುಚ್ಛಗಳನ್ನು ನೀಡಿದ್ದಾರೆ. ಆದರೆ ಈ ಹೂಗಳನ್ನು ವ್ಯರ್ಥವಾಗದಂತೆ ನೋಡಿಕೊಳ್ಳಲು ನಿಮ್ಹಾನ್ಸ್ ಗ್ರೀನ್ ಸ್ಕಿಲ್ ಟ್ರೈನಿಂಗ್ ಸೆಂಟರ್ ಹೊಸ ಪ್ರಯೋಗವನ್ನು ಮಾಡುತ್ತಿದೆ. ಹೌದು ರಾಜಕಾರಣಿಗಳು ಅಥವಾ ದೇವಾಲಯದಲ್ಲಿ ಉಪಯೋಗ ಮಾಡಿದ ಹೂಗಳನ್ನು ಸಂಗ್ರಹಿಸಿ, ಅದರಲ್ಲಿ ರಂಗೋಲಿ ಅಥವಾ ಸಾವಯವ ಬಣ್ಣವನ್ನು ಮಾಡಲು ಉಪಯೋಗ ಮಾಡುತ್ತಾರೆ.

ಈಗಾಗಲೇ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ಅವರ ಮನೆಯಲ್ಲಿ ಇಂತಹದೇ ಒಂದು ಘಟನೆ ನಡೆದಿದೆ, ಹೌದು ಶಾಸಕರಾಗಿ ಆಯ್ಕೆಯಾದ ನಂತರ ಅವರಿಗೆ ಅನೇಕರು ಹೂವಿನ ಹಾರ ಮತ್ತು ಹೂಗುಚ್ಛಗಳನ್ನು ತಂದಿದ್ದರು. ಹೂವಿನ ಹಾರ ಮತ್ತು ಹೂಗುಚ್ಛಗಳು ಒಂದು ಕಡೆ ಸಂಗ್ರಹ ಮಾಡಲಾಗಿತ್ತು. ಈ ಸಮಯದಲ್ಲಿ ಶಾಸಕ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ ಕೋರಮಂಗಲ 1ನೇ ಬ್ಲಾಕ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷೆ ಪದ್ಮಶ್ರೀ ಬಲರಾಮ್ ಅವರು ಕೊಠಡಿ ತುಂಬ ಹೂಮಾಲೆ, ಹೂಗುಚ್ಛಗಳನ್ನು ಕಂಡು, ಈ ಹೂಮಾಲೆ, ಹೂಗುಚ್ಛಗಳು ಇನ್ನೂ ಯಾವುದಕ್ಕೂ ಉಪಯೋಗವಿಲ್ಲ ಎಂದು ನಿಮ್ಹಾನ್ಸ್ ನಲ್ಲಿರುವ ಗ್ರೀನ್ ಸ್ಕಿಲ್ ಟ್ರೈನಿಂಗ್ ಸೆಂಟರ್​​ಗೆ​​​ ಕಳುಹಿಸಿದ್ದಾರೆ.

ರಾಜಕಾರಣಿಗಳು ಅಥವಾ ಮಂತ್ರಿಗಳಿಗೆ ನೀಡಿದ ಹೂಗಳನ್ನು ನಿಮ್ಹಾನ್ಸ್ ನಲ್ಲಿರುವ ಗ್ರೀನ್ ಸ್ಕಿಲ್ ಟ್ರೈನಿಂಗ್ ಸೆಂಟರ್​​ಗೆ ಕಳುಹಿಸಲಾಗುವುದು ಅಲ್ಲಿರುವ ಮಾನಸಿಕ ರೋಗಿಗಳು, ಇದನ್ನೂ ಪುಡಿ ಮಾಡಿ, ರಂಗೋಲಿ ಮತ್ತು ಸಾವಯವ ಬಣ್ಣವನ್ನು ಮಾಡುತ್ತಾರೆ, ಈ ಬಗ್ಗೆ ಮಾತನಾಡಿದ ಪದ್ಮಶ್ರೀ ಬಲರಾಮ್ ನಿಮ್ಹಾನ್ಸ್ ನಲ್ಲಿರುವ ಗ್ರೀನ್ ಸ್ಕಿಲ್ ಟ್ರೈನಿಂಗ್ ಸೆಂಟರ್​​ ಬಗ್ಗೆ ನನಗೆ ತಿಳಿದಿತ್ತು. ಹಾಗಾಗಿ ರೋಗಿಗಳಿಗೆ ಸಹಾಯ ಮಾಡಲು ಮತ್ತು ಹೂವುಗಳಿಂದ ಮಾಡಿದ ಹೂಮಾಲೆಗಳು ವ್ಯರ್ಥವಾಗದಂತೆ ನೋಡಿಕೊಳ್ಳಲು ಇದು ಅತ್ಯುತ್ತಮ ಮಾರ್ಗವೆಂದು ನಾನು ಭಾವಿಸಿ, ಇಂತಹ ಕೆಲಸವನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: Health Tips: ಧೂಮಪಾನಕ್ಕಿಂತಲೂ ಕುಳಿತುಕೊಳ್ಳುವ ಜೀವನಶೈಲಿ ಅಪಾಯಕಾರಿಯೇ? ಇಲ್ಲಿದೆ ತಜ್ಙರ ಎಚ್ಚರಿಕೆ

ಇನ್ನೂ ಗ್ರೀನ್ ಸ್ಕಿಲ್ ತರಬೇತಿ ಕೇಂದ್ರದ ಬೋಧಕರಾದ ಎನ್.ಬಿ.ಮೈತ್ರೇಯಿ ಮಾತನಾಡಿ, ನಿಮ್ಹಾನ್ಸ್ ನಲ್ಲಿರುವ ಗ್ರೀನ್ ಸ್ಕಿಲ್ ಟ್ರೈನಿಂಗ್ ಸೆಂಟರ್ ಸಾಮಾನ್ಯವಾಗಿ ದೇವಾಲಯಗಳು ಮತ್ತು ಇತರ ಸ್ಥಳಗಳಿಂದ ದಿನಕ್ಕೆ ಸುಮಾರು 10-15 ಕೆಜಿ ಬಳಸಿದ ಹೂವುಗಳು ಬರುತ್ತವೆ. ನಿಮ್ಹಾನ್ ಕ್ಯಾಂಪಸ್‌ನಲ್ಲಿ ಮಾನಸಿಕ ರೋಗಿಗಳು ಹೂವುಗಳನ್ನು ಬೇರ್ಪಡಿಸಲು ಕೇಳುತ್ತಾರೆ. ಹೋಳಿಗೆ ಸಾವಯವ ಬಣ್ಣ ಮತ್ತು ರಂಗೋಲಿಗಳನ್ನು ಬಿಡಿಸಲು ಬೇರ್ಪಡಿಸಿದ ಹೂವುಗಳನ್ನು ಒಣಗಿಸಿ ಪುಡಿ ಮಾಡಲಾಗುತ್ತದೆ. ಮಕ್ಕಳಿಗಾಗಿ ಆರ್ಟ್ ಕಿಟ್‌ಗಳನ್ನು ತಯಾರಿಸಲು ಹೂವುಗಳನ್ನು ಸಹ ಬಳಸಲಾಗುತ್ತದೆ ಎಂದು ಹೇಳಿದರು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ