AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಷಿಗಳು ಅನುಮಾನಾಸ್ಪದವಾಗಿ ಸತ್ತಿದ್ರೆ ಅದನ್ನು ಕೈಯಿಂದ ಮುಟ್ಟಬೇಡಿ: ಸಚಿವ ಡಾ.ಕೆ. ಸುಧಾಕರ್

ಹಕ್ಕಿಗಳು ಅನುಮಾನಾಸ್ಪದವಾಗಿ ಸತ್ತಿದ್ರೆ ಅದನ್ನು ಕೈಯಿಂದ ಮುಟ್ಟಬೇಡಿ. ಮಾಂಸಹಾರಿಗಳು ಕೋಳಿ ಮೊಟ್ಟೆ, ಮಾಂಸವನ್ನು ಹೆಚ್ಚು ಬೇಯಿಸಿ ಆಹಾರ ಸೇವಿಸಿ. ಅದಕ್ಕಾಗಿ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಸಚಿವ ಸುಧಾಕರ ಹೇಳಿದ್ದಾರೆ.

ಪಕ್ಷಿಗಳು ಅನುಮಾನಾಸ್ಪದವಾಗಿ ಸತ್ತಿದ್ರೆ ಅದನ್ನು ಕೈಯಿಂದ ಮುಟ್ಟಬೇಡಿ: ಸಚಿವ ಡಾ.ಕೆ. ಸುಧಾಕರ್
ಆರೋಗ್ಯ ಸಚಿವ ಡಾ.ಕೆ.ಸುಧಾಕರ್
shruti hegde
| Edited By: |

Updated on: Jan 08, 2021 | 10:59 AM

Share

ಬೆಂಗಳೂರು: ದಕ್ಷಿಣ ಕನ್ನಡ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಗೆಗಳು ಸತ್ತಿರುವುದು ಬೇರೆ ಕಾರಣದಿಂದಾಗಿ. ಅದು ಹಕ್ಕಿ ಜ್ವರದಿಂದ ಅಲ್ಲ.  ಹಕ್ಕಿಗಳು ಅನುಮಾನಾಸ್ಪದವಾಗಿ ಸತ್ತಿದ್ರೆ ಅದನ್ನು ಕೈಯಿಂದ ಮುಟ್ಟಬೇಡಿ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಸಿದ್ದಾರೆ.

ಹಕ್ಕಿ ಜ್ವರದ ಕುರಿತಂತೆ ಮಾತನಾಡಿದ ಡಾ.ಕೆ.ಸುಧಾಕರ್ ಅವರು ಮಾಂಸಹಾರಿಗಳು ಕೋಳಿ ಮೊಟ್ಟೆ, ಮಾಂಸವನ್ನು ಹೆಚ್ಚು ಬೇಯಿಸಿ ಆಹಾರ ಸೇವಿಸಿ. ಅದಕ್ಕಾಗಿ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಸಲಹೆ ನೀಡಿದರು.

ಸಂಕ್ರಾಂತಿಗೆ ಯಾವುದೇ ವಿಶೇಷ ಮಾರ್ಗಸೂಚಿ ಇರುವುದಿಲ್ಲ.. ಎಚ್ಚರಿಕೆಯೊಂದೇ ಪಾಲಿಸಿ ಇನ್ನೇನು ಸಂಕ್ರಾಂತಿ ಹಬ್ಬ ಎದುರಿಗೆ ಇದೆ. ಈ ಬಾರಿಯ ಹಬ್ಬದಂದು ಜನಜಂಗುಳಿ ಇಲ್ಲದೆ ಸರಳವಾಗಿ ಸಂಕ್ರಾಂತಿ ಹಬ್ಬ ಆಚರಿಸಿ. ಸಂಕ್ರಾಂತಿಗೆ ಯಾವುದೇ ವಿಶೇಷ ಮಾರ್ಗಸೂಚಿ ಇರುವುದಿಲ್ಲ. ಇರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಸೂಚಿಸಿದರು.

ಹೆಚ್ಚಾಯ್ತು ಹಕ್ಕಿಜ್ವರ ಆತಂಕ.. ಮೈಸೂರು-ಕೇರಳ ಗಡಿಯಲ್ಲಿ DC ಸಿಂಧೂರಿಯಿಂದ ಕಟ್ಟೆಚ್ಚರದ ಆದೇಶ