AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka High Court: 80ರ ಅಜ್ಜಿ ಸೇರಿದಂತೆ ಗಂಡನ ಮನೆಯ ಎಲ್ಲರ ವಿರುದ್ಧವೂ ವರದಕ್ಷಿಣೆ ಕೇಸ್: ಪ್ರಕರಣ ರದ್ದುಪಡಿಸಿದ ಹೈಕೋರ್ಟ್!

ಗಂಡನ ತಾಯಿ, ಅಜ್ಜಿ, ನಾದಿನಿ, ಮೈದುನ ಸೇರಿದಂತೆ ಎಲ್ಲರೂ ಹೀಯಾಳಿಸುತ್ತಿದ್ದರು. ಕುಳ್ಳಗಿದ್ದೀಯ, ಕೀಳು ಜಾತಿಗೆ ಸೇರಿದ್ದೀಯ ಎಂದೆಲ್ಲಾ ಮಾನಸಿಕ ಹಿಂಸೆ ನೀಡಿದರು. ಪತಿ ನನ್ನ ಶೀಲ ಶಂಕಿಸಿದ. ಕುಡಿತದ ಚಟಕ್ಕೆ ಬಿದ್ದು ಹಲ್ಲೆ ಮಾಡುತ್ತಿದ್ದ. ಕೊಲೆ ಮಾಡಲೂ ಯತ್ನಿಸಿದ ಎಂಬುದು ಸೇರಿದಂತೆ ಸಾಲು ಸಾಲು ಆರೋಪಗಳನ್ನು ಮಾಡಿ, ಪೊಲೀಸರಿಗೆ ದೂರು ನೀಡಿದ್ದರು.

Karnataka High Court: 80ರ ಅಜ್ಜಿ ಸೇರಿದಂತೆ ಗಂಡನ ಮನೆಯ ಎಲ್ಲರ ವಿರುದ್ಧವೂ ವರದಕ್ಷಿಣೆ ಕೇಸ್: ಪ್ರಕರಣ ರದ್ದುಪಡಿಸಿದ ಹೈಕೋರ್ಟ್!
80ರ ಅಜ್ಜಿ ಸೇರಿದಂತೆ ಗಂಡನ ಮನೆಯ ಎಲ್ಲರ ವಿರುದ್ಧವೂ ವರದಕ್ಷಿಣೆ ಕೇಸ್: ಪ್ರಕರಣ ರದ್ದುಪಡಿಸಿದ ಹೈಕೋರ್ಟ್!
TV9 Web
| Edited By: |

Updated on:May 30, 2022 | 8:01 PM

Share

ಬೆಂಗಳೂರು: ಯಾವುದೇ ಸೂಕ್ತ ಆಧಾರಗಳಿಲ್ಲದ್ದರೂ ಹಾಸಿಗೆ ಹಿಡಿದಿರುವ 80 ವರ್ಷದ ವೃದ್ಧೆ ಸೇರಿದಂತೆ ಗಂಡನ ಮನೆಯ ಎಲ್ಲರ ವಿರುದ್ಧವೂ ಪತ್ನಿ ದಾಖಲಿಸಿದ್ದ ವರದಕ್ಷಿಣೆ ಕಿರುಕುಳ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ದಾವಣಗೆರೆ ಕೋರ್ಟ್ ನಲ್ಲಿ ಪತ್ನಿ ದಾಖಲಿಸಿರುವ ಕ್ರಿಮಿನಲ್ ಪ್ರಕರಣದ ವಿಚಾರಣೆಯನ್ನು ರದ್ದುಪಡಿಸುವಂತೆ ಕೋರಿ ಚಿತ್ರದುರ್ಗ ನಿವಾಸಿಯಾಗಿರುವ ಪತಿ ಮತ್ತು ಆತನ 7 ಮಂದಿ ಕುಟುಂಬ ಸದಸ್ಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ಮಾಡಿದೆ.

ಪತ್ನಿ ನೀಡಿದ್ದ ದೂರಿನ ಮೇರೆಗೆ ದಾವಣಗೆರೆ ಮಹಿಳಾ ಠಾಣೆ ಪೊಲೀಸರು ಐಪಿಸಿ ಸೆಕ್ಷನ್ 498-ಎ, 323, 504, 506, 307, 313, 354, 114 , 34 Jo ತಡೆ ಕಾಯ್ದೆ-1961ರ ಸೆಕ್ಷನ್ 3, 4ರ ಅಡಿ ಎಫ್‌ಐಆರ್ ದಾಖಲಿಸಿದ್ದರು. ಬಳಿಕ, ತನಿಖೆ ನಡೆಸಿ ದಾವಣಗೆರೆಯ 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಪತಿ ಮತ್ತವರ ಕುಟುಂಬ ಸದಸ್ಯರು ಹೈಕೋರ್ಟ್ ಮೊರೆ ಹೋಗಿದ್ದರು.

ಪೀಠ ತನ್ನ ತೀರ್ಪಿನಲ್ಲಿ ಪತಿ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಪತ್ನಿ ದಾಖಲಿಸಿರುವ ಪ್ರಕರಣದಲ್ಲಿ ಬೋಳು ಆರೋಪಗಳನ್ನು ಬಿಟ್ಟರೆ ಯಾವುದೇ ಹುರುಳಿಲ್ಲ. ವರದಕ್ಷಿಣೆ ಕಿರುಕುಳಕ್ಕೆ ಸಾಕ್ಷ್ಯಗಳನ್ನೂ ನೀಡಿಲ್ಲ. ಈ ಪ್ರಕರಣದಲ್ಲಿ ನೋಟಿಸ್ ಜಾರಿ ಮಾಡಿದ್ದರೂ ಹೈಕೋರ್ಟ್ ವಿಚಾರಣೆಯಲ್ಲಿ ಪತ್ನಿ ಭಾಗಿಯಾಗಿಲ್ಲ. ವರದಕ್ಷಿಣೆ ತಡೆ ಕಾಯ್ದೆ-1961ರ ಕಲಂ 3 ಮತ್ತು 4ರ ಅಡಿ ದೂರು ಸಲ್ಲಿಸುವಾಗ ಮುಂದೇನಾಗುತ್ತದೆ ಎಂಬುದರ ಪರಿಣಾಮಗಳನ್ನು ದೂರುದಾರ ಮಹಿಳೆ ಅವಲೋಕಿಸಿಲ್ಲ. ಇಂತಹ ಪ್ರಕರಣಗಳನ್ನು ಮುಂದುವರೆಯಲು ಬಿಟ್ಟರೆ ಕಾನೂನಿನ ದುರ್ಬಳಕೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿರುವ ಪೀಠ, ವಿಚಾರಣಾ ನ್ಯಾಯಾಲಯದಲ್ಲಿದ್ದ ಪ್ರಕರಣವನ್ನು ರದ್ದುಪಡಿಸಿದೆ.

ಪ್ರಕರಣದ ಹಿನ್ನೆಲೆ: ದಾವಣಗೆರೆ ನಿವಾಸಿಯಾದ 25 ವರ್ಷದ ಮಹಿಳೆ 2020ರ ಅಕ್ಟೋಬರ್ 24ರಂದು 29 ವರ್ಷದ ವ್ಯಕ್ತಿಯನ್ನು ವಿವಾಹವಾಗಿದ್ದರು. ಮದುವೆಯ ಬಳಿಕ ದಂಪತಿ ನಡುವಿನ ಸಂಬಂಧ ಹಳಸಿತ್ತು. 2021ರ ಆಗಸ್ಟ್ 22ರಂದು ಪೊಲೀಸರಿಗೆ ಪತ್ನಿ ದೂರು ನೀಡಿದ್ದರು. ದೂರಿನಲ್ಲಿ ಮದುವೆ ಸಂದರ್ಭದಲ್ಲಿ ಪತಿಗೆ 5 ಲಕ್ಷ ಹಣ, ಒಡವೆ, ಇತರೆ ವಸ್ತುಗಳನ್ನು ತಮ್ಮ ಪೋಷಕರು ನೀಡಿದ್ದರು. ಅಷ್ಟು ಸಾಲದೆಂದು ಪತಿ ಕುಟುಂಬಸ್ಥರು ಮತ್ತಷ್ಟು ವರದಕ್ಷಿಣೆ ನೀಡುವಂತೆ ಕಿರುಕುಳ ನೀಡಿದ್ದರು. ಪೋಷಕರು ಸಾಲ ಮಾಡಿ ಹಣ ಕೊಟ್ಟ ನಂತರವೂ ಕಿರುಕುಳ ಮುಂದುವರೆಸಿದರು.

ಗಂಡನ ತಾಯಿ, ಅಜ್ಜಿ, ನಾದಿನಿ, ಮೈದುನ ಸೇರಿದಂತೆ ಎಲ್ಲರೂ ಹೀಯಾಳಿಸುತ್ತಿದ್ದರು. ಕುಳ್ಳಗಿದ್ದೀಯ, ಕೀಳು ಜಾತಿಗೆ ಸೇರಿದ್ದೀಯ ಎಂದೆಲ್ಲಾ ಮಾನಸಿಕ ಹಿಂಸೆ ನೀಡಿದರು. ಪತಿ ನನ್ನ ಶೀಲ ಶಂಕಿಸಿದ. ಕುಡಿತದ ಚಟಕ್ಕೆ ಬಿದ್ದು ಹಲ್ಲೆ ಮಾಡುತ್ತಿದ್ದ. ಕೊಲೆ ಮಾಡಲೂ ಯತ್ನಿಸಿದ ಎಂಬುದು ಸೇರಿದಂತೆ ಸಾಲು ಸಾಲು ಆರೋಪಗಳನ್ನು ಮಾಡಿ, ಪೊಲೀಸರಿಗೆ ದೂರು ನೀಡಿದ್ದರು.

ಪತ್ನಿ ನೀಡಿದ್ದ ದೂರಿನ ಮೇರೆಗೆ ದಾವಣಗೆರೆ ಮಹಿಳಾ ಠಾಣೆ ಪೊಲೀಸರು ಐಪಿಸಿ ಸೆಕ್ಷನ್ 498-ಎ, 323, 504, 506, 307, 313, 354, 114, 34 Jo ತಡೆ ಕಾಯ್ದೆ-1961ರ ಸೆಕ್ಷನ್ 3, 4ರ ಅಡಿ ಎಫ್‌ಐಆರ್ ದಾಖಲಿಸಿದ್ದರು. ಬಳಿಕ, ತನಿಖೆ ನಡೆಸಿ ದಾವಣಗೆರೆಯ 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಪತಿ ಮತ್ತವರ ಕುಟುಂಬ ಸದಸ್ಯರು ಹೈಕೋರ್ಟ್ ಮೊರೆ ಹೋಗಿದ್ದರು.  (Source)

Published On - 8:00 pm, Mon, 30 May 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?