AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಟ್ಸ್ ಇದ್ದಿದ್ದರೆ ರಾಜೀವ್​ಗೆ ಮುಂಚೆ, ಅಂಬೇಡ್ಕರ್​ಗೆ ಕೊಡಿಸ್ಬೇಕಿತ್ತು ಭಾರತ ರತ್ನ’

ಹುಬ್ಬಳ್ಳಿ: ಸಿದ್ದರಾಮಯ್ಯನವರು ವೀರ ಸಾವರ್ಕರ್​ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರಿಗೆ ಗಟ್ಸ್ ಇದ್ದರೆ ರಾಜೀವ್​ಗಾಂಧಿಗಿಂತ ಮೊದಲೇ ಅಂಬೇಡ್ಕರ್​ಗೆ ಭಾರತ ರತ್ನ ಕೊಡಿ ಅಂತಾ ಕೇಳಬೇಕಿತ್ತು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದ್ದಾರೆ. ಸಂವಿಧಾನ ಬರೆದ ಅಂಬೇಡ್ಕರ್​ಗೆ ಮೊದಲು ಭಾರತ ರತ್ನ ನೀಡಲಿಲ್ಲ. ಆದ್ರೆ, ರಾಜೀವ್ ಗಾಂಧಿಗೆ ಮೊದಲು ಭಾರತ ರತ್ನ ನೀಡಲಾಗಿದೆ. ರಾಜೀವ್ ಗಾಂಧಿ ತಾತ, ತಾಯಿ ಪ್ರಧಾನಿಯಾಗಿದ್ದಕ್ಕೆ ಅವರಿಗೆ ಬಳುವಳಿಯಾಗಿ ಕೊಡಲಾಯಿತು. ಅಲ್ಲದೆ, ದೇಶಕಂಡ ಅಪ್ರತಿಮ ವೀರ ಸಾವರ್ಕರ್​ ಬಗ್ಗೆ ಅಪಮಾನ ಮಾಡೋದು […]

‘ಗಟ್ಸ್ ಇದ್ದಿದ್ದರೆ ರಾಜೀವ್​ಗೆ ಮುಂಚೆ, ಅಂಬೇಡ್ಕರ್​ಗೆ ಕೊಡಿಸ್ಬೇಕಿತ್ತು ಭಾರತ ರತ್ನ’
ಸಿದ್ದರಾಮಯ್ಯ-ಪ್ರಲ್ಹಾದ್​ ಜೋಶಿ
ಸಾಧು ಶ್ರೀನಾಥ್​
|

Updated on:Oct 19, 2019 | 2:17 PM

Share

ಹುಬ್ಬಳ್ಳಿ: ಸಿದ್ದರಾಮಯ್ಯನವರು ವೀರ ಸಾವರ್ಕರ್​ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರಿಗೆ ಗಟ್ಸ್ ಇದ್ದರೆ ರಾಜೀವ್​ಗಾಂಧಿಗಿಂತ ಮೊದಲೇ ಅಂಬೇಡ್ಕರ್​ಗೆ ಭಾರತ ರತ್ನ ಕೊಡಿ ಅಂತಾ ಕೇಳಬೇಕಿತ್ತು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದ್ದಾರೆ.

ಸಂವಿಧಾನ ಬರೆದ ಅಂಬೇಡ್ಕರ್​ಗೆ ಮೊದಲು ಭಾರತ ರತ್ನ ನೀಡಲಿಲ್ಲ. ಆದ್ರೆ, ರಾಜೀವ್ ಗಾಂಧಿಗೆ ಮೊದಲು ಭಾರತ ರತ್ನ ನೀಡಲಾಗಿದೆ. ರಾಜೀವ್ ಗಾಂಧಿ ತಾತ, ತಾಯಿ ಪ್ರಧಾನಿಯಾಗಿದ್ದಕ್ಕೆ ಅವರಿಗೆ ಬಳುವಳಿಯಾಗಿ ಕೊಡಲಾಯಿತು. ಅಲ್ಲದೆ, ದೇಶಕಂಡ ಅಪ್ರತಿಮ ವೀರ ಸಾವರ್ಕರ್​ ಬಗ್ಗೆ ಅಪಮಾನ ಮಾಡೋದು ಸರಿಯಲ್ಲ. ಮೊದಲು ಇತಿಹಾಸವನ್ನ ಸರಿಯಾಗಿ ಓದಿಕೊಂಡು ಮಾತನಾಡಲಿ ಎಂದ ಸಿದ್ದರಾಮಯ್ಯನವರ ನಡೆಯನ್ನು ಪ್ರಹ್ಲಾದ್ ಜೋಶಿ ಖಂಡಿಸಿದ್ದಾರೆ.

ಮುಂದೆ ದಾವುದ್ ಇಬ್ರಾಹಿಂಗೂ ಕಾಂಗ್ರೆಸ್​ನವರು ಭಾರತ ರತ್ನ ಕೊಡಲಿದ್ದಾರೆಂದು ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರಹ್ಲಾದ್ ಜೋಶಿ ಇದೇ ವೇಳೆ ವ್ಯಂಗ್ಯವಾಡಿದ್ದಾರೆ.

ವೀರ ಸಾವರ್ಕರ್​ಗೆ ಭಾರತ ರತ್ನ ನೀಡಬೇಕೆಂಬ ಪ್ರಸ್ತಾವನೆಗೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದರು. ಮಹಾತ್ಮ ಗಾಂಧಿ ಹತ್ಯೆಗೆ ಸ್ಕೆಚ್ ಹಾಕಿದ್ದವರಲ್ಲಿ ವೀರ ಸಾವರ್ಕರ್ ಕೂಡಾ ಒಬ್ಬರು ಎಂದು ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಸಿದ್ದರಾಮಯ್ಯ ವಿವಾದದ ಕಿಡಿ ಹೊತ್ತಿಸಿದ್ದರು.

Published On - 2:15 pm, Sat, 19 October 19

ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ