AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಟ್ಸ್ ಇದ್ದಿದ್ದರೆ ರಾಜೀವ್​ಗೆ ಮುಂಚೆ, ಅಂಬೇಡ್ಕರ್​ಗೆ ಕೊಡಿಸ್ಬೇಕಿತ್ತು ಭಾರತ ರತ್ನ’

ಹುಬ್ಬಳ್ಳಿ: ಸಿದ್ದರಾಮಯ್ಯನವರು ವೀರ ಸಾವರ್ಕರ್​ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರಿಗೆ ಗಟ್ಸ್ ಇದ್ದರೆ ರಾಜೀವ್​ಗಾಂಧಿಗಿಂತ ಮೊದಲೇ ಅಂಬೇಡ್ಕರ್​ಗೆ ಭಾರತ ರತ್ನ ಕೊಡಿ ಅಂತಾ ಕೇಳಬೇಕಿತ್ತು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದ್ದಾರೆ. ಸಂವಿಧಾನ ಬರೆದ ಅಂಬೇಡ್ಕರ್​ಗೆ ಮೊದಲು ಭಾರತ ರತ್ನ ನೀಡಲಿಲ್ಲ. ಆದ್ರೆ, ರಾಜೀವ್ ಗಾಂಧಿಗೆ ಮೊದಲು ಭಾರತ ರತ್ನ ನೀಡಲಾಗಿದೆ. ರಾಜೀವ್ ಗಾಂಧಿ ತಾತ, ತಾಯಿ ಪ್ರಧಾನಿಯಾಗಿದ್ದಕ್ಕೆ ಅವರಿಗೆ ಬಳುವಳಿಯಾಗಿ ಕೊಡಲಾಯಿತು. ಅಲ್ಲದೆ, ದೇಶಕಂಡ ಅಪ್ರತಿಮ ವೀರ ಸಾವರ್ಕರ್​ ಬಗ್ಗೆ ಅಪಮಾನ ಮಾಡೋದು […]

‘ಗಟ್ಸ್ ಇದ್ದಿದ್ದರೆ ರಾಜೀವ್​ಗೆ ಮುಂಚೆ, ಅಂಬೇಡ್ಕರ್​ಗೆ ಕೊಡಿಸ್ಬೇಕಿತ್ತು ಭಾರತ ರತ್ನ’
ಸಿದ್ದರಾಮಯ್ಯ-ಪ್ರಲ್ಹಾದ್​ ಜೋಶಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 19, 2019 | 2:17 PM

Share

ಹುಬ್ಬಳ್ಳಿ: ಸಿದ್ದರಾಮಯ್ಯನವರು ವೀರ ಸಾವರ್ಕರ್​ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರಿಗೆ ಗಟ್ಸ್ ಇದ್ದರೆ ರಾಜೀವ್​ಗಾಂಧಿಗಿಂತ ಮೊದಲೇ ಅಂಬೇಡ್ಕರ್​ಗೆ ಭಾರತ ರತ್ನ ಕೊಡಿ ಅಂತಾ ಕೇಳಬೇಕಿತ್ತು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದ್ದಾರೆ.

ಸಂವಿಧಾನ ಬರೆದ ಅಂಬೇಡ್ಕರ್​ಗೆ ಮೊದಲು ಭಾರತ ರತ್ನ ನೀಡಲಿಲ್ಲ. ಆದ್ರೆ, ರಾಜೀವ್ ಗಾಂಧಿಗೆ ಮೊದಲು ಭಾರತ ರತ್ನ ನೀಡಲಾಗಿದೆ. ರಾಜೀವ್ ಗಾಂಧಿ ತಾತ, ತಾಯಿ ಪ್ರಧಾನಿಯಾಗಿದ್ದಕ್ಕೆ ಅವರಿಗೆ ಬಳುವಳಿಯಾಗಿ ಕೊಡಲಾಯಿತು. ಅಲ್ಲದೆ, ದೇಶಕಂಡ ಅಪ್ರತಿಮ ವೀರ ಸಾವರ್ಕರ್​ ಬಗ್ಗೆ ಅಪಮಾನ ಮಾಡೋದು ಸರಿಯಲ್ಲ. ಮೊದಲು ಇತಿಹಾಸವನ್ನ ಸರಿಯಾಗಿ ಓದಿಕೊಂಡು ಮಾತನಾಡಲಿ ಎಂದ ಸಿದ್ದರಾಮಯ್ಯನವರ ನಡೆಯನ್ನು ಪ್ರಹ್ಲಾದ್ ಜೋಶಿ ಖಂಡಿಸಿದ್ದಾರೆ.

ಮುಂದೆ ದಾವುದ್ ಇಬ್ರಾಹಿಂಗೂ ಕಾಂಗ್ರೆಸ್​ನವರು ಭಾರತ ರತ್ನ ಕೊಡಲಿದ್ದಾರೆಂದು ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರಹ್ಲಾದ್ ಜೋಶಿ ಇದೇ ವೇಳೆ ವ್ಯಂಗ್ಯವಾಡಿದ್ದಾರೆ.

ವೀರ ಸಾವರ್ಕರ್​ಗೆ ಭಾರತ ರತ್ನ ನೀಡಬೇಕೆಂಬ ಪ್ರಸ್ತಾವನೆಗೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದರು. ಮಹಾತ್ಮ ಗಾಂಧಿ ಹತ್ಯೆಗೆ ಸ್ಕೆಚ್ ಹಾಕಿದ್ದವರಲ್ಲಿ ವೀರ ಸಾವರ್ಕರ್ ಕೂಡಾ ಒಬ್ಬರು ಎಂದು ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಸಿದ್ದರಾಮಯ್ಯ ವಿವಾದದ ಕಿಡಿ ಹೊತ್ತಿಸಿದ್ದರು.

Published On - 2:15 pm, Sat, 19 October 19

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್