‘ಗಟ್ಸ್ ಇದ್ದಿದ್ದರೆ ರಾಜೀವ್​ಗೆ ಮುಂಚೆ, ಅಂಬೇಡ್ಕರ್​ಗೆ ಕೊಡಿಸ್ಬೇಕಿತ್ತು ಭಾರತ ರತ್ನ’

ಹುಬ್ಬಳ್ಳಿ: ಸಿದ್ದರಾಮಯ್ಯನವರು ವೀರ ಸಾವರ್ಕರ್​ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರಿಗೆ ಗಟ್ಸ್ ಇದ್ದರೆ ರಾಜೀವ್​ಗಾಂಧಿಗಿಂತ ಮೊದಲೇ ಅಂಬೇಡ್ಕರ್​ಗೆ ಭಾರತ ರತ್ನ ಕೊಡಿ ಅಂತಾ ಕೇಳಬೇಕಿತ್ತು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದ್ದಾರೆ. ಸಂವಿಧಾನ ಬರೆದ ಅಂಬೇಡ್ಕರ್​ಗೆ ಮೊದಲು ಭಾರತ ರತ್ನ ನೀಡಲಿಲ್ಲ. ಆದ್ರೆ, ರಾಜೀವ್ ಗಾಂಧಿಗೆ ಮೊದಲು ಭಾರತ ರತ್ನ ನೀಡಲಾಗಿದೆ. ರಾಜೀವ್ ಗಾಂಧಿ ತಾತ, ತಾಯಿ ಪ್ರಧಾನಿಯಾಗಿದ್ದಕ್ಕೆ ಅವರಿಗೆ ಬಳುವಳಿಯಾಗಿ ಕೊಡಲಾಯಿತು. ಅಲ್ಲದೆ, ದೇಶಕಂಡ ಅಪ್ರತಿಮ ವೀರ ಸಾವರ್ಕರ್​ ಬಗ್ಗೆ ಅಪಮಾನ ಮಾಡೋದು […]

‘ಗಟ್ಸ್ ಇದ್ದಿದ್ದರೆ ರಾಜೀವ್​ಗೆ ಮುಂಚೆ, ಅಂಬೇಡ್ಕರ್​ಗೆ ಕೊಡಿಸ್ಬೇಕಿತ್ತು ಭಾರತ ರತ್ನ’
ಸಿದ್ದರಾಮಯ್ಯ-ಪ್ರಲ್ಹಾದ್​ ಜೋಶಿ
ಸಾಧು ಶ್ರೀನಾಥ್​

Updated on: Oct 19, 2019 | 2:17 PM

ಹುಬ್ಬಳ್ಳಿ: ಸಿದ್ದರಾಮಯ್ಯನವರು ವೀರ ಸಾವರ್ಕರ್​ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರಿಗೆ ಗಟ್ಸ್ ಇದ್ದರೆ ರಾಜೀವ್​ಗಾಂಧಿಗಿಂತ ಮೊದಲೇ ಅಂಬೇಡ್ಕರ್​ಗೆ ಭಾರತ ರತ್ನ ಕೊಡಿ ಅಂತಾ ಕೇಳಬೇಕಿತ್ತು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದ್ದಾರೆ.

ಸಂವಿಧಾನ ಬರೆದ ಅಂಬೇಡ್ಕರ್​ಗೆ ಮೊದಲು ಭಾರತ ರತ್ನ ನೀಡಲಿಲ್ಲ. ಆದ್ರೆ, ರಾಜೀವ್ ಗಾಂಧಿಗೆ ಮೊದಲು ಭಾರತ ರತ್ನ ನೀಡಲಾಗಿದೆ. ರಾಜೀವ್ ಗಾಂಧಿ ತಾತ, ತಾಯಿ ಪ್ರಧಾನಿಯಾಗಿದ್ದಕ್ಕೆ ಅವರಿಗೆ ಬಳುವಳಿಯಾಗಿ ಕೊಡಲಾಯಿತು. ಅಲ್ಲದೆ, ದೇಶಕಂಡ ಅಪ್ರತಿಮ ವೀರ ಸಾವರ್ಕರ್​ ಬಗ್ಗೆ ಅಪಮಾನ ಮಾಡೋದು ಸರಿಯಲ್ಲ. ಮೊದಲು ಇತಿಹಾಸವನ್ನ ಸರಿಯಾಗಿ ಓದಿಕೊಂಡು ಮಾತನಾಡಲಿ ಎಂದ ಸಿದ್ದರಾಮಯ್ಯನವರ ನಡೆಯನ್ನು ಪ್ರಹ್ಲಾದ್ ಜೋಶಿ ಖಂಡಿಸಿದ್ದಾರೆ.

ಮುಂದೆ ದಾವುದ್ ಇಬ್ರಾಹಿಂಗೂ ಕಾಂಗ್ರೆಸ್​ನವರು ಭಾರತ ರತ್ನ ಕೊಡಲಿದ್ದಾರೆಂದು ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರಹ್ಲಾದ್ ಜೋಶಿ ಇದೇ ವೇಳೆ ವ್ಯಂಗ್ಯವಾಡಿದ್ದಾರೆ.

ವೀರ ಸಾವರ್ಕರ್​ಗೆ ಭಾರತ ರತ್ನ ನೀಡಬೇಕೆಂಬ ಪ್ರಸ್ತಾವನೆಗೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದರು. ಮಹಾತ್ಮ ಗಾಂಧಿ ಹತ್ಯೆಗೆ ಸ್ಕೆಚ್ ಹಾಕಿದ್ದವರಲ್ಲಿ ವೀರ ಸಾವರ್ಕರ್ ಕೂಡಾ ಒಬ್ಬರು ಎಂದು ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಸಿದ್ದರಾಮಯ್ಯ ವಿವಾದದ ಕಿಡಿ ಹೊತ್ತಿಸಿದ್ದರು.

Published On - 2:15 pm, Sat, 19 October 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us