AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ರಾಜಭವನದ ಅಂಗಳದಲ್ಲಿ ಅಂಬೇಡ್ಕರ ಪುತ್ಥಳಿ ಅನಾವರಣಗೊಳಿಸಿ, ಸಾಮಾಜಿಕ ನ್ಯಾಯದ ಸಂದೇಶ ರವಾನಿಸಿದ ರಾಜಭವನ

Dr Ambedkar Statue: ಡಾ.ಬಿ.ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಕರ್ನಾಟಕ ವಿಧಾನಸಭೆಯ ಸನ್ಮಾನ್ಯ ಸಭಾಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಸನ್ಮಾನ್ಯ ವಿಧಾನಪರಿಷತ್ ಸಭಾಪತಿ ಶ್ರೀ ರಘುನಾಥ್‌ರಾವ್ ಮಲ್ಕಾಪೂರೆ, ಸನ್ಮಾನ್ಯ ಮುಖ್ಯಮಂತ್ರಿಗಳು, ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು. ರಾಜಭವನದ ಅಂಗಳದಲ್ಲಿರುವ ಗಾಂಧಿ ಪುತ್ಥಳಿಗೂ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

ಬೆಂಗಳೂರು: ರಾಜಭವನದ ಅಂಗಳದಲ್ಲಿ ಅಂಬೇಡ್ಕರ ಪುತ್ಥಳಿ ಅನಾವರಣಗೊಳಿಸಿ, ಸಾಮಾಜಿಕ ನ್ಯಾಯದ ಸಂದೇಶ ರವಾನಿಸಿದ ರಾಜಭವನ
ರಾಜಭವನದ ಅಂಗಳದಲ್ಲಿ ಅಂಬೇಡ್ಕರ ಪುತ್ಥಳಿ ಅನಾವರಣಗೊಳಿಸಿ, ಸಾಮಾಜಿಕ ನ್ಯಾಯದ ಸಂದೇಶ ರವಾನಿಸಿದ ರಾಜಭವನ
TV9 Web
| Edited By: |

Updated on:May 30, 2022 | 7:27 PM

Share

ಬೆಂಗಳೂರು: ‘ಸಂವಿಧಾನಾತ್ಮಕ ಮಾರ್ಗಗಳ ಹಾದಿಯಲ್ಲಿ ಹೆಜ್ಜೆ ಹಾಕಿದಾಗಲೇ ಸಾಮಾಜಿಕ ಮತ್ತು ಆರ್ಥಿಕ ಧ್ಯೇಯಗಳ ಸಾಧನೆ ಸಾಧ್ಯ’ ಎನ್ನುವಂತಹ ಅನೇಕ ಮಹತ್ತರ ಸಮಾಜಮುಖಿ ಆಶಯಗಳನ್ನು ನಾಡಿನ ಜನರೆದೆಯಲ್ಲಿ ಬಿತ್ತಿದ ಡಾ.ಬಿ.ಆರ್.ಅಂಬೇಡ್ಕರ ಅವರು ಬರೀ ವ್ಯಕ್ತಿಯಲ್ಲ, ಒಂದು ಶಕ್ತಿ. ಅನೇಕ ರಾಷ್ಟ್ರಗಳ ಕಾನೂನು ಅಧ್ಯಯನ ನಡೆಸಿ ಸಮಾನತೆಯ ಸಂದೇಶದ ಸಂವಿಧಾನ ನಿರ್ಮಿಸಿದ ಕಾರಣಕ್ಕೆ ಡಾ.ಅಂಬೇಡ್ಕರ ಇಡೀ ಜಾಗತಿಕ ಮಟ್ಟದಲ್ಲಿ ವಿಶೇಷ ಗೌರವಕ್ಕೆ ಪಾತ್ರರಾಗಿದ್ದಾರೆ. ಏಪ್ರಿಲ್ 14ರಂದು ಆಚರಿಸಲ್ಪಡುವ ಡಾ.ಬಿ.ಆರ್.ಅಂಬೇಡ್ಕರ ಅವರ ಜಯಂತಿಯನ್ನು ವಿಶ್ವ ಜ್ಞಾನದ ದಿನವನ್ನಾಗಿ ಆಚರಿಸಲು ಅವರ 125ನೇ ಜನ್ಮದಿನದ ಮುನ್ನಾ ದಿನದಂದು ಯುನೈಟೆಡ್ ನೇಷನ್ ಘೋಷಿಸಿದ್ದು ಈ ವೇಳೆ ಸ್ಮರಣೀಯ.

ಇಂತಹ ಮಹಾನ್‌ ಮಾನವತಾವಾದಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಅವರ ಪುತ್ಥಳಿಯು ಈಗ ರಾಜಧಾನಿ ಬೆಂಗಳೂರಿನ ರಾಜಭವನ ಅಂಗಳದಲ್ಲೂ ನಿರ್ಮಾಣಗೊಂಡಿದೆ.

ಇದನ್ನೂ ಓದಿ:

PSI Recruitment Scam: ಪಿಎಸ್ಐ ‌ನೇಮಕಾತಿ -ಅಕ್ರಮವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದ ಶಾಂತಿಬಾಯಿ ಮತ್ತು ಆಕೆಯ ಪತಿ ಬಸ್ಯಾ ನಾಯಕ್ ಹೈದ್ರಾಬಾದ್ ನಲ್ಲಿ ಬಂಧನ!

ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಉಪಸ್ಥಿತಿಯಲ್ಲಿ ಸೋಮವಾರ ಸಾಮಾಜಿಕ ನ್ಯಾಯದ ಹರಿಕಾರ ಡಾ.ಅಂಬೇಡ್ಕರ ಅವರ ಕಂಚಿನ ಪುತ್ಥಳಿಯನ್ನು ಅನಾವರಣಗೊಳಿಸಿ, ಪುಷ್ಪನಮನ ಸಲ್ಲಿಸಿ ನಾಡಿನ ಜನತೆಗೆ ಸಮರ್ಪಿಸಿದರು.

ಡಾ.ಬಿ.ಆರ್.ಅಂಬೇಡ್ಕರ ಅವರ 125ನೇ ಜಯಂತಿ ವರ್ಷಾಚರಣೆಯ ಸಂದರ್ಭದಿಂದಲೇ ದೇಶದೆಲ್ಲೆಡೆ ಡಾ.ಅಂಬೇಡ್ಕರ ಅವರ ಬದುಕು-ಸಾಧನೆ ಸ್ಮರಣೆಯ ಕಾರ್ಯಕ್ರಮಗಳು ವಿಭಿನ್ನವಾಗಿ ನಡೆಯುತ್ತಲೇ ಇವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅಂತೆಯೇ ರಾಜಧಾನಿ ಬೆಂಗಳೂರಿನ ರಾಜಭವನ ಅಂಗಳದಲ್ಲಿಯೂ ಡಾ.ಅಂಬೇಡ್ಕರ ಪುತ್ಥಳಿ ಅನಾವರಣಗೊಳಿಸುವ ಮೂಲಕ ರಾಜಭವನವು ಈ ನಾಡಿಗೆ ಸಾಮಾಜಿಕ ನ್ಯಾಯದ ಸಂದೇಶವನ್ನು ರವಾನಿಸಿ, ಭಾರತ ರತ್ನಕ್ಕೆ ತನ್ನ ಗೌರವವನ್ನು ಸಮರ್ಪಿಸಿದೆ.

ಡಾ.ಬಿ.ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಕರ್ನಾಟಕ ವಿಧಾನಸಭೆಯ ಸನ್ಮಾನ್ಯ ಸಭಾಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಸನ್ಮಾನ್ಯ ವಿಧಾನಪರಿಷತ್ ಸಭಾಪತಿ ಶ್ರೀ ರಘುನಾಥ್‌ರಾವ್ ಮಲ್ಕಾಪೂರೆ, ಸನ್ಮಾನ್ಯ ಮುಖ್ಯಮಂತ್ರಿಗಳು, ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು. ರಾಜಭವನದ ಅಂಗಳದಲ್ಲಿರುವ ಗಾಂಧಿ ಪುತ್ಥಳಿಗೂ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

ಇದನ್ನೂ ಓದಿ:

ಶಾಸಕ ಜಮೀರ್ ಅಹಮದ್ ಮನೆ ಖರೀದಿಗೆ, ಮೂರೂವರೆ ಕೋಟಿ ಸಾಲ ಕೊಟ್ಟಿದ್ದು ಉರುಳಾಯ್ತಾ? ಇಡಿ ದಾಳಿ ಬಗ್ಗೆ ಕೆಜಿಎಫ್ ಬಾಬು ಹೇಳಿದ್ದೇನು?

Published On - 7:21 pm, Mon, 30 May 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?