AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಸ್ನೇಹಿ ಆಡಳಿತ ನೀಡುವುದು ನನ್ನ ಉದ್ದೇಶ: ಮೈಸೂರು ನೂತನ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್

ಪತ್ನಿ ಮಂಡ್ಯದಲ್ಲಿ ಡಿಸಿಯಾಗಿರುವ ವಿಚಾರವಾಗಿಯೂ ಪ್ರತಿಕ್ರಿಯೆ ನೀಡಿದ ಅವರು, ಪತ್ನಿ ಮನೆ ಮೊದಲೂ ಸಹ ಹತ್ತಿರವೇ ಇತ್ತು. ಬೆಂಗಳೂರಿನಿಂದ ಮಂಡ್ಯ ದೂರವೇನಲ್ಲ. ಈಗ ಇನ್ನಷ್ಟು ಹತ್ತಿರಕ್ಕೆ ಬಂದಿದ್ದೇವೆ ಎಂದು ನಗುತ್ತಲೇ ಮೈಸೂರಿಗೆ ಬಂದಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು.

ಜನಸ್ನೇಹಿ ಆಡಳಿತ ನೀಡುವುದು ನನ್ನ ಉದ್ದೇಶ: ಮೈಸೂರು ನೂತನ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್
ಡಾ.ಗೌತಮ್ ಬಗಾದಿ
TV9 Web
| Edited By: |

Updated on: Jun 06, 2021 | 5:28 PM

Share

ಮೈಸೂರು: ಮೈಸೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ಬಗಾದಿ ಗೌತಮ್ ಅಧಿಕಾರ ಸ್ವೀಕರಿಸಿದರು. ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ನಿಕಟಪೂರ್ವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಗೈರಾದ ಕಾರಣ ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥ್ ಸ್ವಾಮಿ ನೂತನ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್​ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಮೈಸೂರು ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣ ದೊಡ್ಡ ಸವಾಲಾಗಿದೆ. ಜಿಲ್ಲಾಧಿಕಾರಿಯಾಗಿ ನನ್ನ ಕೆಲಸವನ್ನು ನಾನು ಮಾಡಿಕೊಂಡು ಹೋಗುತ್ತೇನೆ. ನನ್ನ ಜೀವನದಲ್ಲಿ ಎಂದೂ ವಿವಾದಕ್ಕೆ ಒಳಗಾಗಿಲ್ಲ. ಜನಸ್ನೇಹಿ ಆಡಳಿತ ನೀಡುವುದು ನನ್ನ ಉದ್ದೇಶ. ನಾನು ಲೋ ಫ್ರೋಫೈಲ್ ಅಧಿಕಾರಿ. ನನ್ನ 13 ವರ್ಷದ ಸರ್ವಿಸ್‌ನಲ್ಲಿ ಬಹುತೇಕರು ನನ್ನ ಹೆಸರು ಸಹ ಕೇಳಿಲ್ಲ. ನಾನು ಕೆಲಸ ಮಾಡಲು ಬಂದಿದ್ದೇನೆ. ವಿವಾದಿತ ಸ್ಥಳಕ್ಕೆ ಬಂದೆ ಅಂತ ಅನ್ನಿಸಿಲ್ಲ. ಒಳ್ಳೆಯ ಕೆಲಸ ಮಾಡಿದರೆ ಎಲ್ಲರೂ ಒಳ್ಳೆಯವರಾಗುತ್ತಾರೆ. ನಾನು ಮೈಸೂರಿನ ಜನ ಪ್ರತಿನಿಧಿಗಳು, ಅಧಿಕಾರಿಗಳು, ಪತ್ರಕರ್ತರು ಸಾರ್ವಜನಿಕರ ಸಲಹೆಗಳನ್ನ ಸಕಾರಾತ್ಮಕವಾಗಿ ತೆಗೆದುಕೊಳ್ಳುತ್ತೇನೆ ಎಂದು ಹುರುಪಿನಿಂದ ಉತ್ತರಿಸಿದರು.

ನಿಮಗೆ ಈ ವರ್ಗಾವಣೆ ಅನಿರೀಕ್ಷಿತವಾಗಿತ್ತೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,  ಈ ವರ್ಗಾವಣೆಯನ್ನು ನಾನು ನಿರೀಕ್ಷೆ ಮಾಡಿರಲಿಲ್ಲ. ಕೊವಿಡ್ ನಿರ್ವಹಣೆ ಜವಾಬ್ದಾರಿ ಇರುವ ಕಾರಣ ಜಿಲ್ಲಾಧಿಕಾರಿ ಕೆಲಸವು ಸವಾಲಾಗಿಯೇ ಇರುತ್ತದೆ. ಆದರೂ ಚಾಲೆಂಜಿಂಗ್ ಆಗಿ ತೆಗೆದುಕೊಂಡು ಕೆಲಸ ಮಾಡುತ್ತೇನೆ. ಒಳ್ಳೆ ಕೆಲಸ ಮಾಡಿದರೆ ಎಲ್ಲರೂ ಮುಂದೆ ಬಂದು ಸಹಕಾರ ಕೊಡುತ್ತಾರೆ ಎಂದು ಪ್ರತಿಕ್ರಿಯೆ ನೀಡಿದರು.

ಪತ್ನಿ ಮಂಡ್ಯದಲ್ಲಿ ಡಿಸಿಯಾಗಿರುವ ವಿಚಾರವಾಗಿಯೂ ಪ್ರತಿಕ್ರಿಯೆ ನೀಡಿದ ಅವರು, ಪತ್ನಿ ಮನೆ ಮೊದಲೂ ಸಹ ಹತ್ತಿರವೇ ಇತ್ತು. ಬೆಂಗಳೂರಿನಿಂದ ಮಂಡ್ಯ ದೂರವೇನಲ್ಲ. ಈಗ ಇನ್ನಷ್ಟು ಹತ್ತಿರಕ್ಕೆ ಬಂದಿದ್ದೇವೆ ಎಂದು ನಗುತ್ತಲೇ ಮೈಸೂರಿಗೆ ಬಂದಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು.

ಇದನ್ನೂ ಓದಿ: Mysuru: ರೋಹಿಣಿ ಸಿಂಧೂರಿ ಮತ್ತು ಶಿಲ್ಪಾ ನಾಗ್ ಇಬ್ಬರೂ ಮೈಸೂರಿನಿಂದ ವರ್ಗಾವಣೆ, ಹೊಸ ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರ ನೇಮಕ

ಚಾಮರಾಜನಗರ ಆಕ್ಸಿಜನ್ ಪ್ರಕರಣ; ವರ್ಗಾವಣೆ ಬೆನ್ನಲ್ಲೆ ರಿಲೀಸ್ ಆಯ್ತು ರೋಹಿಣಿ ಸಿಂಧೂರಿ ಅವರ ಶಾಕಿಂಗ್ ಆಡಿಯೋ

(Dr.Bagadi Gautam new District Collector of Mysuru says give people friendly governance is my intention)

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ