AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಡಾ.ಬಿ.ಆರ್​. ಅಂಬೇಡ್ಕರ್​ ಜೀವನ ಚರಿತ್ರೆ ಆಧಾರಿತ ಆಲ್ಬಮ್ ಸಾಂಗ್​ ಬಿಡುಗಡೆ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಿಕೆಆರ್ ಯೂಟ್ಯೂಬ್​ ಚಾನಲ್​ನಲ್ಲಿ ಇವರೇ ಮಹಾನಾಯಕ ಬಿಡುಗಡೆಯಾಗಿದೆ. ಅಂಬೇಡ್ಕರ್ ಜಯಂತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಸಂಭ್ರಮಿಸಲು ಸೋಮಶೇಖರ್ ಜಿಗಣಿ ಮತ್ತು ತಂಡದವರು ಉತ್ಸಕರಾಗಿದ್ದಾರೆ.

ಮೈಸೂರಿನಲ್ಲಿ ಡಾ.ಬಿ.ಆರ್​. ಅಂಬೇಡ್ಕರ್​ ಜೀವನ ಚರಿತ್ರೆ ಆಧಾರಿತ ಆಲ್ಬಮ್ ಸಾಂಗ್​ ಬಿಡುಗಡೆ
ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್
preethi shettigar
|

Updated on: Apr 14, 2021 | 9:31 AM

Share

ಮೈಸೂರು: ಇಂದು ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ. ಈ ಹಿನ್ನೆಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಚರಿತ್ರೆ ಕುರಿತು ಆಲ್ಬಮ್ ಸಾಂಗ್ ಒಂದು ಸಿದ್ಧವಾಗಿದೆ. ಕೇವಲ ಐದು ನಿಮಿಷಗಳಲ್ಲೇ ಅಂಬೇಡ್ಕರ್ ಜೀವನದ ಪ್ರಮುಖ ಘಟನೆಗಳನ್ನು ಸೃಷ್ಟಿಸಲಾಗಿದ್ದು, ಈ ಹಾಡನ್ನು ಕೆ.ಎ.ಎಸ್ ಅಧಿಕಾರಿಯೊಬ್ಬರು ಸಂಯೋಜಿಸಿದ್ದಾರೆ ಎನ್ನುವುದು ವಿಶೇಷ.

ಕಾರ್ಮೋಡ ಕವಿದಿದೆ, ಕತ್ತಲೆ ಆವರಿಸಿದೆ, ಕೋಲ್ಮಿಂಚಿನ ವೇಗದಲ್ಲಿ ಬೆಳಕಾಗಿ ಹರಿದಿದೆ.. ಇವರೇ ನಮ್ಮ ನಾಯಕ.. ಹೀಗೆ ಶುರುವಾಗುವ ಹಾಡು ಎಂತವರಿಗೂ ಮೈನವಿರೇಳಿಸುತ್ತದೆ. ಒಂದೂವರೆ ತಿಂಗಳ ಪರಿಶ್ರಮದ ಫಲವಾಗಿ ಸಿದ್ಧವಾಗಿರುವ ಆಲ್ಬಮ್ ಸಾಂಗ್ ಅನ್ನು ಅಂಬೇಡ್ಕರ್ ಜಯಂತಿಗೆ ಡೆಡಿಕೇಟ್ ಮಾಡಲಾಗಿದೆ. ಸುಮಾರು 40 ದಿನಗಳ ಪ್ರರಿಶ್ರಮದಿಂದ ಈ‌ ಹಾಡನ್ನು ಮಾಡಲಾಗಿದೆ ಎಂದು ಮಂಡ್ಯದ ಬಿಸಿಎಂ ಉಪನಿರ್ದೇಶಕರಾದ ಸೋಮಶೇಖರ್ ಜಿಗಣಿ ಹೇಳಿದ್ದಾರೆ.

ಅಂಬೇಡ್ಕರ್ ಜೀವನ ಚರಿತ್ರೆಯನ್ನು ಆಲ್ಬಮ್ ಸಾಂಗ್ ಮಾಡಬೇಕು ಎನ್ನುವುದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಂಡ್ಯ ಜಿಲ್ಲೆಯ ಉಪನಿರ್ದೇಶಕ ಸೋಮಶೇಖರ್ ಜಿಗಣಿ ಅವರ ಪರಿಕಲ್ಪನೆ. ಮೈಸೂರಿನ ಯುವ ಕೊಳಲುವಾದಕ ನೀತು ನಿನಾದ್ ಈ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಪ್ರಯತ್ನವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ನೆರವಾಗಿದ್ದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್. ಪುನೀತ್ ರಾಜ್ ಕುಮಾರ್ ಹಾಗೂ ಅಶ್ವಿನಿ ಪುನೀತ್ ರಾಜ್ ಕುಮಾರ್ ಒಡೆಯತದ ಪಿಆರ್​ಕೆ ಸ್ಟುಡಿಯೋ, ಈ ಆಲ್ಬಂ ಸಾಂಗ್ ರಿಲೀಸ್ ಮಾಡಿದ್ದು, ಖ್ಯಾತ ಗಾಯಕ ವಿಜಯ ಪ್ರಕಾಶ್ ಅದ್ಭುತವಾಗಿ ಹಾಡಿದ್ದಾರೆ.

ಅಂಬೇಡ್ಕರ್ ಜೀವನ ಚರಿತ್ರೆ ಬಹುತೇಕರಿಗೆ ಗೊತ್ತಿದೆ. ಜೀವನ, ಸಾಧನೆ, ಐತಿಹಾಸಿಕ ಮೈಲುಗಲ್ಲುಗಳನ್ನು ಕೇವಲ ಐದು ನಿಮಿಷದಲ್ಲಿ ಇದೆಲ್ಲವನ್ನು ಕಟ್ಟಿಕೊಡುವುದು ಅಷ್ಟು ಸುಲಭದ ಮಾತಲ್ಲ. ಆತ್ಯಾಧುನಿಕ ಟೆಕ್ನಾಲಜಿ ಬಳಸಿಕೊಂಡು ರೋಹಿತ್ ಪಟೇಲ್ ಸಾರಥ್ಯದ ವಿದ್ವತ್ ಸಂಸ್ಥೆ ಗ್ರಾಫಿಕ್ಸ್ ಡಿಸೈನ್ ಮಾಡಿದೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಿಕೆಆರ್ ಯೂಟ್ಯೂಬ್​ ಚಾನಲ್​ನಲ್ಲಿ ಇವರೇ ಮಹಾನಾಯಕ ಬಿಡುಗಡೆಯಾಗಿದೆ. ಅಂಬೇಡ್ಕರ್ ಜಯಂತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಸಂಭ್ರಮಿಸಲು ಸೋಮಶೇಖರ್ ಜಿಗಣಿ ಮತ್ತು ತಂಡದವರು ಉತ್ಸಕರಾಗಿದ್ದಾರೆ.

ಇದನ್ನೂ ಓದಿ:

ಅಂಬೇಡ್ಕರ್ ಭವನ ನಿರ್ಮಾಣ ಸ್ಥಳದಲ್ಲಿ ಎರಡು ಗುಂಪುಗಳ ನಡುವೆ ದೊಣ್ಣೆಗಳಿಂದ ಮಾರಾಮಾರಿ; ಹಲವರಿಗೆ ಗಾಯ

ಸಂವಿಧಾನ ಓದು ಕಾರ್ಯಕ್ರಮದಲ್ಲಿ ಅಂಬೇಡ್ಕರ್​ ಕುರಿತು ಹಾಡುವಾಗ ಭಾವುಕರಾದ ಸಂಸದ ವಿ.ಶ್ರೀನಿವಾಸ ಪ್ರಸಾದ್

(Dr. BR Ambedkar Biography Audio Album song released on PRK Audio)

Follow Us
preethi shettigar
preethi shettigar
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ