AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮೂರನೇ ಅಲೆ ಬಗ್ಗೆ ಡಾ.ದೇವಿ ಪ್ರಸಾದ್ ಶೆಟ್ಟಿ ಹೇಳಿದ್ದು ಹೀಗೆ

ಮೊದಲ ಮತ್ತು ಎರಡನೇ ಅಲೆಗೆ ಆರು ತಿಂಗಳು ಸಮಯವಿತ್ತು. ಆಗ ವೇಗವಾಗಿ ಹರಡಿತ್ತು. ಆದರೆ ಇದು ಅದಕ್ಕಿಂತಲೂ ವೇಗವಾಗಿ ಹರಡುವ ಸಾಧ್ಯತೆ ಹೆಚ್ಚಿದೆ. ವ್ಯಕ್ತಿ ಸಾವನ್ನಪ್ಪಿದರೆ, ವೈರಸ್ ಕೂಡಾ ಸತ್ತೋಗುತ್ತದೆ.

ಕೊರೊನಾ ಮೂರನೇ ಅಲೆ ಬಗ್ಗೆ ಡಾ.ದೇವಿ ಪ್ರಸಾದ್ ಶೆಟ್ಟಿ ಹೇಳಿದ್ದು ಹೀಗೆ
ಪ್ರಾತಿನಿಧಿಕ ಚಿತ್ರ
TV9 Web
| Edited By: sandhya thejappa|

Updated on:Dec 01, 2021 | 8:49 AM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ (Coronavirus) ಮೂರನೇ ಅಲೆ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸರ್ಕಾರ ಕೂಡಾ ಹೆಚ್ಚು ನಿಗಾ ವಹಿಸಲು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಕೊರೊನಾ ಮೂರನೇ ಅಲೆ ಬಗ್ಗೆ ಉನ್ನತ ಮಟ್ಟದ ನುರಿತ ತಜ್ಞರ ಸಮಿತಿ ಅಧ್ಯಕ್ಷ ಡಾ.ದೇವಿ ಪ್ರಸಾದ್ ಶೆಟ್ಟಿ ಟಿವಿ9ಗೆ ಕೆಲ ಮಾಹಿತಿ ನೀಡಿದ್ದಾರೆ. ವೈರಸ್ ಮ್ಯೂಟೇಟ್ ಆಗ್ತಾ ಚೇಂಜ್ ಆಗ್ತಾ ಇರುತ್ತದೆ. ಇದನ್ನು ನಿಲ್ಲಿಸಲು ಆಗಲ್ಲ. ಕೊರೊನಾ ಹೊಸ ತಳಿ ಬಗ್ಗೆ ಹೆದರುವ ಅಗತ್ಯವಿಲ್ಲ. ಆದರೆ ಇದು ಭಾರಿ ವೇಗವಾಗಿ ಹರಡುತ್ತದೆ ಅಂತ ತಿಳಿಸಿದರು.

ಮೊದಲ ಮತ್ತು ಎರಡನೇ ಅಲೆಗೆ ಆರು ತಿಂಗಳು ಸಮಯವಿತ್ತು. ಆಗ ವೇಗವಾಗಿ ಹರಡಿತ್ತು. ಆದರೆ ಇದು ಅದಕ್ಕಿಂತಲೂ ವೇಗವಾಗಿ ಹರಡುವ ಸಾಧ್ಯತೆ ಹೆಚ್ಚಿದೆ. ವ್ಯಕ್ತಿ ಸಾವನ್ನಪ್ಪಿದರೆ, ವೈರಸ್ ಕೂಡಾ ಸತ್ತೋಗುತ್ತದೆ. ಸಮಯ ಆದಂತೆ ಹರಡುವಿಕೆ ಕಡಿಮೆಯಾಗುತ್ತಾ ಹೋಗುತ್ತದೆ ಎಂದು ಮಾಹಿತಿ ನೀಡಿದ ಡಾ.ದೇವಿ ಪ್ರಸಾದ್ ಶೆಟ್ಟಿ, ಮೊದಲ ಅಲೆಯಲ್ಲಿ ಎಲ್ಲರೂ ಹೆದರಿಕೊಂಡು ವ್ಯಾಕ್ಸಿನ್ ತೆಗೆದುಕೊಂಡರು. ನಂತರ ಎರಡನೇ ಅಲೆಯಲ್ಲಿ ಸೆಕೆಂಡ್ ಡೋಸ್ ಅನ್ನು ನಿರ್ಲಕ್ಷಿಸಿದರು. ಆದರೆ ಹೀಗೆ ಮಾಡಬಾರದು. ಎಲ್ಲರೂ ಕಡ್ಡಾಯವಾಗಿ ಸೆಕೆಂಡ್ ಡೋಸ್ ತೆಗೆದುಕೊಳ್ಳಬೇಕು ಅಂದರು.

ಮೊದಲ ಡೋಸ್ ಅಷ್ಟೊಂದು ರಕ್ಷಣೆ ನೀಡಲ್ಲ. ಎರಡನೇ ಡೋಸ್ ಹೆಚ್ಚು ಪರಿಣಾಮಕಾರಿಯಾಗಿದೆ. ಸರ್ಕಾರ ಬೂಸ್ಟರ್ ಡೋಸ್ ತೆಗೆದುಕೊಳ್ಳಲು ಅನುಮತಿಸಿದರೆ ತಕ್ಷಣ ತೆಗೆದುಕೊಳ್ಳಬೇಕು. ವಿದೇಶಗಳಲ್ಲಿ ವ್ಯಾಕ್ಸಿನ್ ತೆಗೆದುಕೊಂಡವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವ್ಯಾಕ್ಸಿನ್ ತೆಗೆದುಕೊಳ್ಳದವರು ಸಾವನ್ನಪ್ಪಿದ್ದಾರೆ. ಹೀಗಾಗಿ ಎಲ್ಲರೂ ವ್ಯಾಕ್ಸಿನ್ ತೆಗೆದುಕೊಳ್ಳಬೇಕು ಅಂತ ತಿಳಿಸಿದರು.

ವ್ಯಾಕ್ಸಿನ್ ಖಾಲಿ ಆದ ನಂತರ ಸರ್ಕಾರವನ್ನು ನಿಂದಿಸಬಾರದು. ವ್ಯಾಕ್ಸಿನ್​ನ ಎಲ್ಲರೂ ತೆಗೆದುಕೊಂಡರೆ, ವ್ಯಾಕ್ಸಿನ್ ಖಾಲಿಯಾದರೆ ಕಂಪನಿಗಳು ಉತ್ಪಾದಿಸುತ್ತವೆ. ವ್ಯಾಕ್ಸಿನ್ ಉಳಿದರೆ ಕಂಪನಿಗಳು ತಯಾರಿಕೆ ನಿಲ್ಲಿಸುತ್ತವೆ. ಹಾಗಾಗಿ ಎಲ್ಲರೂ ಸ್ಟಾಕ್ ಇದ್ದಾಗಲೇ ವ್ಯಾಕ್ಸಿನ್​ ತೆಗೆದುಕೊಳ್ಳಬೇಕು. ಇನ್ನು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಅಂತರ ಕಾಯ್ದುಕೊಳ್ಳಬೇಕು ಅಂತ ಪ್ರಸಾದ್ ಶೆಟ್ಟಿ ಹೇಳಿದರು.

ಇದನ್ನೂ ಓದಿ

ಪ್ರೇಮಿಗಳು ಇಬ್ಬರೂ ತಬ್ಬಿಕೊಂಡು ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿದರು! ಮುಂದೇನಾದರು?

ಅಮೆರಿಕದ ಹೈಸ್ಕೂಲ್​​​ನಲ್ಲಿ ಗುಂಡಿನ ದಾಳಿ ನಡೆಸಿದ 15ವರ್ಷದ ಬಾಲಕ; 3 ವಿದ್ಯಾರ್ಥಿಗಳು ಸಾವು, 8 ಮಂದಿಗೆ ಗಾಯ

Published On - 8:44 am, Wed, 1 December 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು