AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ದೃಢಪಟ್ಟರೆ ಆತಂಕ ಪಡಬೇಡಿ, ಜನರು ಪ್ರಾಣಾಯಾಮ ಮಾಡಬೇಕು -ಡಾ. ಕೆ.ಸುಧಾಕರ್

ಜನರು ಪ್ರತಿ ದಿನ ಬೆಳಗ್ಗೆ 30 ನಿಮಿಷ ಲಘು ವ್ಯಾಯಾಮ ಮಾಡಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಲಹೆ ನೀಡಿದ್ದಾರೆ.

ಕೊರೊನಾ ದೃಢಪಟ್ಟರೆ ಆತಂಕ ಪಡಬೇಡಿ, ಜನರು ಪ್ರಾಣಾಯಾಮ ಮಾಡಬೇಕು -ಡಾ. ಕೆ.ಸುಧಾಕರ್
ಡಾ.ಕೆ. ಸುಧಾಕರ್​
ಆಯೇಷಾ ಬಾನು
|

Updated on: Apr 23, 2021 | 1:00 PM

Share

ಬೆಂಗಳೂರು: ಕೊರೊನಾ ದೃಢಪಟ್ಟರೆ ಆತಂಕಕ್ಕೊಳಗಾಗುವುದು ಬೇಡ. ಶೇ.90ರಷ್ಟು ಸೋಂಕಿತರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಅಗತ್ಯವಿಲ್ಲ. ಸೋಂಕಿತರು ತಮ್ಮ ಮನೆಯಲ್ಲೇ ಚಿಕಿತ್ಸೆ ಪಡೆಯಬಹುದು. ರೆಮ್​ಡೆಸಿವಿರ್ ಅಗತ್ಯದಷ್ಟು ಸಪ್ಲೈ ಇದೆ. ಮೈಲಾನ್ ಕಂಪನಿಯಿಂದ ತೆಗೆದುಕೊಂಡಿದ್ದಾರೆ. ಬಯೋಕಾನ್ ಅಧ್ಯಕ್ಷ ಮುಜುಂದಾರ್ ಷಾ ಅವರೊಂದಿಗೂ ಕೂಡ ಮಾತನಾಡಿದ್ದೇನೆ. ಈ ತಿಂಗಳಲ್ಲಿ ವಯಲ್ಸ್ ಕೊಡ್ತೇನೆ ಎಂದಿದ್ದಾರೆ. ಜನರು ಆತಂಕ, ಭಯ ಪಡುವ ಆವಶ್ಯಕತೆ ಇಲ್ಲ ಎಂದು ಡಾ ಕೆ.ಸುಧಾಕರ್ ತಿಳಿಸಿದ್ದಾರೆ.

ಯಾರಿಗೋ ಒಬ್ಬ ವ್ಯಕ್ತಿಗೆ ಆಕ್ಸಿಜನ್ ಕಡಿಮೆ‌ ಅಗ್ತಿದೆ. ಯುಕೆಯಲ್ಲಿ ಟೆಲಿ ಕಾಲರ್ ಮೂಲಕ ಔಷಧಿ ಪಡೆಯುತ್ತಿದ್ದಾರೆ. ಯಾರಿಗೆ ನಿಜವಾಗಿಯೂ ಅವಶ್ಯಕತೆ ಇದೆ ಅವ್ರು ಮಾತ್ರ ಆಸ್ಪತ್ರೆ ತೆರಳಿ, ದಯವಿಟ್ಟು ನಾನು‌ ಮನವಿ‌ಮಾಡುತ್ತೇನೆ. ಕೆಲವು ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದ್ದೇವೆ. ಬೆಂಗಳೂರಿನಲ್ಲಿ ಆಕ್ಸಿಜನ್, ವೆಂಟಿಲೇಟರ್ ಬೆಡ್ ಬೇಕಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ಹೊಸ ಕಟ್ಟಡದಲ್ಲಿ 500 ಬೆಡ್, 2500 ಬೆಡ್ಗಳಿರುವ ಮೇಕ್ ಶಿಫ್ಟ್ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಮಾಡ್ತೇವೆ. 800 ರಿಂದ 1000 ವೆಂಟಿಲೇಟರ್ ಮಾಡ್ತೇವೆ. ಅತಿ ಶೀಘ್ರದಲ್ಲಿ‌ ಮಾಡ್ತೇವೆ..

ಇಂತಹ ಸಾಂಕ್ರಾಮಿಕ ರೋಗ ಬಂದಾಗ ತೊಂದರೆ ಆಗೋದು ಸಹಜ. ಅಮೇರಿಕಾದ ಬಹುದೊಡ್ಡ ದೇಶದಲ್ಲೇ ಆರ್ಥಿಕತೆ ಕುಸಿದಿದೆ. ಅದ್ಕೆ ಹೊಲಿಸಿದ್ರೆ ನಮ್ಮಲ್ಲಿ ಪರಿಸ್ಥಿತಿ ಬೇರೆಯೇ ಇದೆ. ದಿನನಿತ್ಯ ಪ್ರಾಣಾಯಾಮ ಮಾಡಿ. ಇದು ಶ್ವಾಸಕೋಶಕ್ಕೆ ಉತ್ತಮ. ರೋಗನಿರೋಧಕ ಶಕ್ತಿ ಹೆಚ್ಚಾದಾಗ ಯಾವ ರೋಗ ಹತ್ತಿರ ಬರುವುದಿಲ್ಲ. ವೀಕೆಂಡ್ ಕರ್ಫ್ಯೂಗಳನ್ನು ತಪ್ಪದೇ ಪಾಲಿಸಬೇಕು. ನೈಟ್ ಕರ್ಫ್ಯೂ ಬಗ್ಗೆ ಕೆಲವರು ಟೀಕೆ ಮಾಡಿದ್ದಾರೆ. ಬೇರೆ ದೇಶಗಳಲ್ಲಿ ಎರಡನೇ ಅಲೆ, ಮೂರನೇ ಅಲೇ, ನಾಲ್ಕನೇ ಅಲೆ ಬಂದಿದೆ. ಎಲ್ಲ ರಾಜ್ಯಗಳಲ್ಲೂ ಈ ರೂಪಾಂತರ ಗೊಂಡಿರುವ ವೈರಣು ಇದೆ. ವೈದ್ಯಕೀಯ ಜಗತ್ತಿಗೆ ಸವಾಲು‌ ಆಗಿರೋ ವೈರಣು ಇದು. ಇಡೀ ದೇಶದಲ್ಲಿಯೇ ಆರೋಗ್ಯ ತುರ್ತು ಪರಿಸ್ಥಿತಿ ಇದೆ. ಇದು ಬರೀ ನಮ್ಮ ರಾಜ್ಯದಲ್ಲಿ ಮಾತ್ರಾನಾ? ಯಾವುದೇ ಸಂದರ್ಭದಲ್ಲಿ ಸರ್ಕಾರ ಹಿಂದೇಟು ಹಾಕುವುದಿಲ್ಲ, ಜನರನ್ನು ಕೈ ಬಿಡುವುದಿಲ್ಲ ಎಂದು ಸುಧಾಕರ್ ತಿಳಿಸಿದ್ದಾರೆ.

ಜನರು ಪ್ರತಿ ದಿನ ಬೆಳಗ್ಗೆ ಪ್ರಾಣಾಯಾಮ ಮಾಡಬೇಕು ಜನರು ಪ್ರತಿ ದಿನ ಬೆಳಗ್ಗೆ 30 ನಿಮಿಷ ಲಘು ವ್ಯಾಯಾಮ ಮಾಡಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಲಹೆ ನೀಡಿದ್ದಾರೆ. ಮುಂಜಾನೆ 5-6 ಗಂಟೆಗೆ ಒಳ್ಳೇ ಗಾಳಿ ಇರುವಲ್ಲಿ ಕುಳಿತು ಪ್ರಾಣಾಯಾಮ ಮಾಡಿ. ಇದರಿಂದ ಶ್ವಾಸಕೋಶದ ಉಸಿರಾಡುವ ಶಕ್ತಿ ಬಲವಾಗುತ್ತೆ. ಬೇರೆಯವರಿಗೆ ಆಕ್ಸಿಜನ್ ಸಿಗುತ್ತಿಲ್ಲವೆಂಬ ಸುದ್ದಿ ನೋಡಿ ಜನರು ಆತಂಕಕ್ಕೆ ಒಳಗಾಗುತ್ತಿದ್ದಾರೆ. ಕೊವಿಡ್ ಪಾಸಿಟಿವ್ ಬಂದ ತಕ್ಷಣ ಆಕ್ಸಿಜನ್ ಕೇಳ್ತಿದ್ದಾರೆ. ಶೇ.95ರಷ್ಟು ಸೋಂಕಿತರಿಗೆ ಆಸ್ಪತ್ರೆಯ ಅವಶ್ಯಕತೆ ಇಲ್ಲ ಎಂದು ಬೆಂಗಳೂರಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ವೈದ್ಯಕೀಯ ಪರೀಕ್ಷೆ ಮುಂದೂಡಿಕೆ, ಅಂತಿಮ ವರ್ಷದ ವಿದ್ಯಾರ್ಥಿಗಳನ್ನ ಕೊವಿಡ್ ಕೆಲಸಕ್ಕೆ ಬಳಸಿಕೊಳ್ಳಲಾಗುವುದು; ಡಾ.ಕೆ.ಸುಧಾಕರ್

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?