AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃತಿಕಾ ರೆಡ್ಡಿ ಕೊಲೆ ಬಳಿಕ ಆರೋಪಿ ಮಹೇಂದ್ರ ರೆಡ್ಡಿ ಮಾಡಿದ್ದೇನು ಗೊತ್ತಾ? ಪೊಲೀಸ್ ವಿಚಾರಣೆ ವೇಳೆ ಅಚ್ಚರಿಯ ಸಂಗತಿ ಬಯಲು

ಡಾ ಕೃತಿಕಾ ರೆಡ್ಡಿ ಕೊಲೆ ಪ್ರಕರಣ ಎಲ್ಲೆಡೆ ಸುದ್ದಿ ಮಾಡಿದೆ. ಪ್ರಕರಣಕ್ಕೆ ದಿನಕ್ಕೊಂದು ಆಯಾಮ ಸಿಗುತ್ತಲೇ ಇದೆ. ಈ ನಡುವೆ ತನಿಖೆಯ ವೆಳೆ ಆರೋಪಿ ಮಹೇಂದ್ರ ರೆಡ್ಡಿ ಮತ್ತೊಂದು ಸತ್ಯ ಬಿಚ್ಚಿಟ್ಟಿದ್ದಾನೆ. ಕೊಲೆ ಮಾಡಿದ ನಂತರ ಆರೊಪಿ ತನ್ನ ಪಾಪ ಕಳೆದುಕೊಳ್ಳಲು 15 ದೇವಸ್ಥಾನಗಳಿಗೆ ಭೇಟಿ ನೀಡಿರುವ ವಿಚಾರವನ್ನು ತನಿಖೆ ವೇಳೆ ತಿಳಿಸಿದ್ದಾನೆ.

ಕೃತಿಕಾ ರೆಡ್ಡಿ ಕೊಲೆ ಬಳಿಕ ಆರೋಪಿ ಮಹೇಂದ್ರ ರೆಡ್ಡಿ ಮಾಡಿದ್ದೇನು ಗೊತ್ತಾ? ಪೊಲೀಸ್ ವಿಚಾರಣೆ ವೇಳೆ ಅಚ್ಚರಿಯ ಸಂಗತಿ ಬಯಲು
ಕೃತಿಕಾ ರೆಡ್ಡಿ ಕೊಲೆ ಬಳಿಕ ಆರೋಪಿ ಮಹೇಂದ್ರ ರೆಡ್ಡಿ ಮಾಡಿದ್ದೇನು ಗೊತ್ತಾ?
Shivaprasad B
| Updated By: ಭಾವನಾ ಹೆಗಡೆ|

Updated on: Oct 24, 2025 | 10:43 AM

Share

ಬೆಂಗಳೂರು, ಅಕ್ಟೋಬರ್ 24: ಇತ್ತೀಚೆಗೆ ಡಾ.ಕೃತಿಕಾ ರೆಡ್ಡಿ (Dr. Kruthika Reddy case)  ಕೊಲೆ ಪ್ರಕರಣ ಎಲ್ಲೆಡೆ ಸಂಚಲನ ಮೂಡಿಸಿದೆ. ಈ ಪ್ರಕರಣಕ್ಕೆ ದಿನಕ್ಕೊಂದು ತಿರುವು ಸಿಗುತ್ತಲೇ ಬಂದಿದೆ. ಇದೀಗ ಪೊಲೀಸ್ ವಿಚಾರಣೆ ವೇಳೆ ಮತ್ತೊಮ್ಮೆ ಅಚ್ಚರಿಯ ಸಂಗತಿಯೊಂದು ಬೆಳಕಿಗೆ ಬಂದಿದೆ. ಕೊಲೆ ಆರೋಪಿಯಾದ ಡಾ. ಮಹೇಂದ್ರ ರೆಡ್ಡಿ, ಪಶ್ಚಾತ್ತಾಪದಿಂದ ದೇವಸ್ಥಾನಗಳನ್ನು ಸುತ್ತಿ ಬಂದಿದ್ದ ಎಂಬ ವಿಷಯ ಬಯಲಾಗಿದೆ.

ಪೊಲೀಸ್ ತನಿಖೆಯ ವೇಳೆ ಮಹತ್ವದ ಸಂಗತಿ ಬಿಚ್ಚಿಟ್ಟ ಆರೋಪಿ

ಡಾ. ಕೃತಿಕಾ ರೆಡ್ಡಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾದ ಪತಿ ಡಾ. ಮಹೇಂದ್ರ ರೆಡ್ಡಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡು ತನಿಖೆ ವೇಳೆ ಹಲವಾರು ಸತ್ಯಗಳನ್ನು ಬಿಚ್ಚಿಟ್ಟಿದ್ದಾನೆ. ಮಹೇಂದ್ರ ತನ್ನ ಪತ್ನಿಯ ಆರೋಗ್ಯ ಸಮಸ್ಯೆಯಿಂದ ಬೇಸತ್ತು ಆಕೆಯನ್ನು ಕೊಂದು ಸಹಜ ಸಾವು ಎಂದು ಬಿಂಬಿಸಲು ಯತ್ನಿಸಿದ್ದ. ಮರಣೋತ್ತರ ಪರೀಕ್ಷೆ ನಡೆಸಿದಾಗ ಆರೋಪಿ ಕೃತಿಕಾಗೆ ಮಿತಿ ಮೀರಿ ಅನಸ್ತೇಶಿಯಾ ನೀಡಿರುವ ವಿಚಾರ ಬಹಿರಂಗವಾಗಿತ್ತು. ಇದೀಗ ಪೊಲೀಸರ ಮುಂದೆ ಆರೋಪಿ ಮತ್ತೊಂದು ಸತ್ಯ ಬಿಚ್ಚಿಟ್ಟಿದ್ದಾನೆ.

ಇದನ್ನೂ ಓದಿ ಡಾ.ಕೃತಿಕಾರೆಡ್ಡಿ ಕೊಲೆ ಕೇಸ್​: ತಪ್ಪೊಪ್ಪಿಕೊಂಡ ಪತಿ; ಮಹೇಂದ್ರರೆಡ್ಡಿ ಪ್ಲ್ಯಾನ್​ ಹೇಗಿತ್ತು?

ಹತ್ಯೆಯ ಪ್ರಾಯಶ್ಚಿತ್ತಕ್ಕಾಗಿ 6 ತಿಂಗಳು ಟೆಂಪಲ್ ರನ್ ಮಾಡಿದ್ದ ಮಹೇಂದ್ರ

ಕೊಲೆ ಮಾಡಿ ಪಾಪಪ್ರಜ್ಞೆಯಿಂದ ಬಳಲುತ್ತಿದ್ದ ಆರೋಪಿ ದೇವಸ್ಥಾನಗಳ ಮೊರೆಹೋಗಿದ್ದ ಎನ್ನುವುದು ತನಿಖೆಯ ವೇಳೆ ತಿಳಿದುಬಂದಿದೆ. ಪತ್ನಿ ಸಾವಿನಿಂದ ತೀವ್ರ ಆತಂಕಕ್ಕೊಳಗಾಗಿದ್ದ ಮಹೇಂದ್ರ ರೆಡ್ಡಿ, ಆರು ತಿಂಗಳ ಕಾಲರಾಜ್ಯದ ಪ್ರಮುಖ ತೀರ್ಥ ಕ್ಷೇತ್ರಗಳಿಗೆ ಭೇಟಿ ನೀಡಿದ್ದ . ಆರೋಪಿ ತಾನು ಮಾಡಿದ ಹೇಯ ಕೃತ್ಯದಿಂದ ಎಲ್ಲಿ ಪೊಲೀಸರ ಕೈಗೆ ಸಿಕ್ಕಿ ಬೀಳುತ್ತೀನೋ ಎಂಬ ಭಯದಿಂದ ಹಾಗೂ ಮಾನಸಿಕ ನೆಮ್ಮದಿಗೋಸ್ಕರ ಸುಮಾರು 15 ಕ್ಕೂ ಹೆಚ್ಚು ದೇವಸ್ಥಾನಗಳನ್ನು ಸುತ್ತಿ ಬಂದಿದ್ದ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ