AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಕನ್ನಡಿಗ ಡಾ. ಎಂ ಎ ಸಲೀಂ ನೇಮಕ

ಕರ್ನಾಟಕ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ.ಎ. ಸಲೀಂ ಅವರನ್ನು ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕ ಮಾಡಿದೆ. ಡಾ. ಎಂ ಎ ಸಲೀಂ ಅವರು 1993ನೇ ಸಾಲಿನ ಕರ್ನಾಟಕ ಕೇಡರ್​ನ ಅಧಿಕಾರಿಯಾಗಿದ್ದಾರೆ. ಡಾ. ಎಂ. ಎ ಸಲೀಂ ಅವರು ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ ಕರ್ನಾಟಕದ ಪೊಲೀಸ್​ ಮಹಾನಿರ್ದೇಶಕರಾಗಿರುವ ಡಾ. ಅಲೋಕ ಮೋಹನ್​ ಅವರು ಬುಧವಾರವೇ ಸೇವೆಯಿಂದ ನಿವೃತ್ತರಾಗಲಿದ್ದಾರೆ.

ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಕನ್ನಡಿಗ ಡಾ. ಎಂ ಎ ಸಲೀಂ ನೇಮಕ
ಡಾ. ಎಂ ಎ ಸಲೀಂ
Shivaprasad B
| Edited By: |

Updated on:May 21, 2025 | 6:54 PM

Share

ಬೆಂಗಳೂರು, ಮೇ 21: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ (DG & IGP) ಹಿರಿಯ ಐಪಿಎಸ್​ ಅಧಿಕಾರಿ ಹಾಗೂ ಕನ್ನಡಿಗ ಡಾ. ಎಂ ಎ ಸಲೀಂ (MA Salim) ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ. ಎಂ ಎ ಸಲೀಂ ಅವರು ಬುಧವಾರವೇ (ಮೇ.21) ಅಧಿಕಾರಿ ವಹಿಸಿಕೊಂಡಿದ್ದಾರೆ. ಡಾ. ಎಂ. ಎ ಸಲೀಂ ಅವರು ಸದ್ಯ ಹಂಗಾಮಿ ಡಿಜಿ & ಐಜಿಯಾಗಿದ್ದಾರೆ. ಡಾ. ಅಲೋಕ್ ಮೋಹನ್​ ಅವರು ನೂತನ ಡಿಜಿಪಿ ಡಾ. ಎಂ. ಎ ಸಲೀಂ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಐಪಿಎಸ್​ ಅಧಿಕಾರಿ, ಕರ್ನಾಟಕದ ಪೊಲೀಸ್​ ಮಹಾನಿರ್ದೇಶಕರಾಗಿರುವ ಡಾ. ಅಲೋಕ ಮೋಹನ್​ ಅವರು ಬುಧವಾರವೇ ಸೇವೆಯಿಂದ ನಿವೃತ್ತರಾಗಿದ್ದಾರೆ.

ಡಾ. ಅಲೋಕ್ ಮೋಹನ್​ ಅವರಿಗೆ ಗೌರವ ಪಥಸಂಚಲನ ಮೂಲಕ ಬೀಳ್ಕೊಡಲಾಗುತ್ತದೆ. ಅಲೋಕ್​ ಮೋಹನ್ ಅವರ ಅವಧಿ ಏಪ್ರಿಲ್​ಗೆ ಮುಕ್ತಾಯವಾಗಿದ್ದರೂ ಡಿಜಿಪಿಯಾಗಿ ಎರಡು ವರ್ಷದ ಅವಧಿ ಮುಗಿಸುವ ಉದ್ದೇಶದಿಂದ ಮೂರು ವಾರಗಳ ಕಾಲ ಅವರ ಸೇವಾವಧಿಯನ್ನು ವಿಸ್ತರಣೆ ಮಾಡಲಾಗಿತ್ತು.

ಡಾ. ಎಂ. ಎ ಸಲೀಂ ಅವರು 1966ರ ಜೂನ್​ 25 ರಂದು ಬೆಂಗಳೂರಿನ ಚಿಕ್ಕಬಾಣವರದಲ್ಲಿ ಜನಿಸಿದರು. 1998ರಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1993ರಲ್ಲಿ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಪೊಲೀಸ್ ನಿರ್ವಹಣೆ ಕುರಿತು ಸ್ನಾತಕೋತ್ತರ ಪದವಿ ಪಡೆದ ಅವರು 2010ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಟ್ರಾಫಿಕ್​ ಮ್ಯಾನೇಜ್ಮೆಂಟ್​ ವಿಷಯದಲ್ಲಿ ಡಾಕ್ಟರೇಟ್​ ಪದವಿಯನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ
Image
ಬಾನು ಮುಷ್ತಾಕ್ ಬೂಕರ್ ನೆಪದಲ್ಲಿ ಎರಡು ಮಾತು: ಡಾ. ಟಿಎಸ್ ಗೊರವರ ಬರಹ
Image
ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಬಾನು ಮುಷ್ತಾಕ್
Image
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
Image
ಮೆಟ್ರೋದಲ್ಲಿ ಹುಡುಗಿಯರ ಆಕ್ಷೇಪಾರ್ಹ ವಿಡಿಯೋ,ಇನ್​ಸ್ಟಾಗ್ರಾಂನಲ್ಲಿ ಅಪ್ಲೋಡ್

ಇದನ್ನೂ ಓದಿ: ಪಹಲ್ಗಾಮ್ ದಾಳಿ ಬಗ್ಗೆ ಎನ್​ಐಎ ತನಿಖೆ ಚುರುಕು: ಭರತ್ ಭೂಷಣ್ ಪತ್ನಿಯಿಂದ ಮಹತ್ವದ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು

ಡಾ. ಎಂ ಎ ಸಲೀಂ ಅವರು 1993ನೇ ಸಾಲಿನ ಕರ್ನಾಟಕ ಕೇಡರ್​ನ ಅಧಿಕಾರಿಯಾಗಿದ್ದಾರೆ. ಡಾ. ಎಂ ಎ. ಸಲೀಂ ಅವರು ಈ ಹಿಂದೆ ಕಲಬುರಗಿಯಲ್ಲಿ ಸಹಾಯಕ ಪೊಲೀಸ್​ ವರಿಷ್ಠಾಧಿಕಾರಿಯಾಗಿ, ಕುಶಾಲನಗರ ಉಪ ವಿಭಾಗದಲ್ಲಿ ಸಹಾಯಕ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಪೊಲೀಸ್​ ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಡಾ. ಎಂ. ಎ ಸಲೀಂ ಅವರು ಸಿಐಡಿ ಡಿಜಿಪಿಯಾಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:46 pm, Wed, 21 May 25

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​