AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಕನ್ನಡಿಗ ಡಾ. ಎಂ ಎ ಸಲೀಂ ನೇಮಕ

ಕರ್ನಾಟಕ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ.ಎ. ಸಲೀಂ ಅವರನ್ನು ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕ ಮಾಡಿದೆ. ಡಾ. ಎಂ ಎ ಸಲೀಂ ಅವರು 1993ನೇ ಸಾಲಿನ ಕರ್ನಾಟಕ ಕೇಡರ್​ನ ಅಧಿಕಾರಿಯಾಗಿದ್ದಾರೆ. ಡಾ. ಎಂ. ಎ ಸಲೀಂ ಅವರು ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ ಕರ್ನಾಟಕದ ಪೊಲೀಸ್​ ಮಹಾನಿರ್ದೇಶಕರಾಗಿರುವ ಡಾ. ಅಲೋಕ ಮೋಹನ್​ ಅವರು ಬುಧವಾರವೇ ಸೇವೆಯಿಂದ ನಿವೃತ್ತರಾಗಲಿದ್ದಾರೆ.

ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಕನ್ನಡಿಗ ಡಾ. ಎಂ ಎ ಸಲೀಂ ನೇಮಕ
ಡಾ. ಎಂ ಎ ಸಲೀಂ
Shivaprasad B
| Edited By: |

Updated on:May 21, 2025 | 6:54 PM

Share

ಬೆಂಗಳೂರು, ಮೇ 21: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ (DG & IGP) ಹಿರಿಯ ಐಪಿಎಸ್​ ಅಧಿಕಾರಿ ಹಾಗೂ ಕನ್ನಡಿಗ ಡಾ. ಎಂ ಎ ಸಲೀಂ (MA Salim) ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ. ಎಂ ಎ ಸಲೀಂ ಅವರು ಬುಧವಾರವೇ (ಮೇ.21) ಅಧಿಕಾರಿ ವಹಿಸಿಕೊಂಡಿದ್ದಾರೆ. ಡಾ. ಎಂ. ಎ ಸಲೀಂ ಅವರು ಸದ್ಯ ಹಂಗಾಮಿ ಡಿಜಿ & ಐಜಿಯಾಗಿದ್ದಾರೆ. ಡಾ. ಅಲೋಕ್ ಮೋಹನ್​ ಅವರು ನೂತನ ಡಿಜಿಪಿ ಡಾ. ಎಂ. ಎ ಸಲೀಂ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಐಪಿಎಸ್​ ಅಧಿಕಾರಿ, ಕರ್ನಾಟಕದ ಪೊಲೀಸ್​ ಮಹಾನಿರ್ದೇಶಕರಾಗಿರುವ ಡಾ. ಅಲೋಕ ಮೋಹನ್​ ಅವರು ಬುಧವಾರವೇ ಸೇವೆಯಿಂದ ನಿವೃತ್ತರಾಗಿದ್ದಾರೆ.

ಡಾ. ಅಲೋಕ್ ಮೋಹನ್​ ಅವರಿಗೆ ಗೌರವ ಪಥಸಂಚಲನ ಮೂಲಕ ಬೀಳ್ಕೊಡಲಾಗುತ್ತದೆ. ಅಲೋಕ್​ ಮೋಹನ್ ಅವರ ಅವಧಿ ಏಪ್ರಿಲ್​ಗೆ ಮುಕ್ತಾಯವಾಗಿದ್ದರೂ ಡಿಜಿಪಿಯಾಗಿ ಎರಡು ವರ್ಷದ ಅವಧಿ ಮುಗಿಸುವ ಉದ್ದೇಶದಿಂದ ಮೂರು ವಾರಗಳ ಕಾಲ ಅವರ ಸೇವಾವಧಿಯನ್ನು ವಿಸ್ತರಣೆ ಮಾಡಲಾಗಿತ್ತು.

ಡಾ. ಎಂ. ಎ ಸಲೀಂ ಅವರು 1966ರ ಜೂನ್​ 25 ರಂದು ಬೆಂಗಳೂರಿನ ಚಿಕ್ಕಬಾಣವರದಲ್ಲಿ ಜನಿಸಿದರು. 1998ರಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1993ರಲ್ಲಿ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಪೊಲೀಸ್ ನಿರ್ವಹಣೆ ಕುರಿತು ಸ್ನಾತಕೋತ್ತರ ಪದವಿ ಪಡೆದ ಅವರು 2010ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಟ್ರಾಫಿಕ್​ ಮ್ಯಾನೇಜ್ಮೆಂಟ್​ ವಿಷಯದಲ್ಲಿ ಡಾಕ್ಟರೇಟ್​ ಪದವಿಯನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ
Image
ಬಾನು ಮುಷ್ತಾಕ್ ಬೂಕರ್ ನೆಪದಲ್ಲಿ ಎರಡು ಮಾತು: ಡಾ. ಟಿಎಸ್ ಗೊರವರ ಬರಹ
Image
ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಬಾನು ಮುಷ್ತಾಕ್
Image
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
Image
ಮೆಟ್ರೋದಲ್ಲಿ ಹುಡುಗಿಯರ ಆಕ್ಷೇಪಾರ್ಹ ವಿಡಿಯೋ,ಇನ್​ಸ್ಟಾಗ್ರಾಂನಲ್ಲಿ ಅಪ್ಲೋಡ್

ಇದನ್ನೂ ಓದಿ: ಪಹಲ್ಗಾಮ್ ದಾಳಿ ಬಗ್ಗೆ ಎನ್​ಐಎ ತನಿಖೆ ಚುರುಕು: ಭರತ್ ಭೂಷಣ್ ಪತ್ನಿಯಿಂದ ಮಹತ್ವದ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು

ಡಾ. ಎಂ ಎ ಸಲೀಂ ಅವರು 1993ನೇ ಸಾಲಿನ ಕರ್ನಾಟಕ ಕೇಡರ್​ನ ಅಧಿಕಾರಿಯಾಗಿದ್ದಾರೆ. ಡಾ. ಎಂ ಎ. ಸಲೀಂ ಅವರು ಈ ಹಿಂದೆ ಕಲಬುರಗಿಯಲ್ಲಿ ಸಹಾಯಕ ಪೊಲೀಸ್​ ವರಿಷ್ಠಾಧಿಕಾರಿಯಾಗಿ, ಕುಶಾಲನಗರ ಉಪ ವಿಭಾಗದಲ್ಲಿ ಸಹಾಯಕ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಪೊಲೀಸ್​ ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಡಾ. ಎಂ. ಎ ಸಲೀಂ ಅವರು ಸಿಐಡಿ ಡಿಜಿಪಿಯಾಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:46 pm, Wed, 21 May 25

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​