AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರ ಲೋಕಸಭಾ ಚುನಾವಣೆ ಧರ್ಮ ಯುದ್ಧ ಇದ್ದಂತೆ; ಡಾ.ಮಂಜುನಾಥ್​

ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಇಂದು(ಮಾ.13) ಬಿಡುಗಡೆಯಾಗಿದೆ. ಅದರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯಾಗಿ​ ಡಾ. ಸಿ.ಎನ್​ ಮಂಜುನಾಥ್ (C. N. Manjunath) ಅವರಿಗೆ ಟಿಕೆಟ್​ ಘೋಷಣೆ ಮಾಡಿದೆ. ಈ ಹಿನ್ನಲೆ ಇಂದು(ಮಾ.16) ದೆಹಲಿಯಲ್ಲಿ ಅಮಿತ್​ ಶಾ ಅವರನ್ನು ಭೇಟಿ ಮಾಡಿದ್ದಾರೆ.

2024ರ ಲೋಕಸಭಾ ಚುನಾವಣೆ ಧರ್ಮ ಯುದ್ಧ ಇದ್ದಂತೆ; ಡಾ.ಮಂಜುನಾಥ್​
ಡಾ.ಮಂಜುನಾಥ್​
ಹರೀಶ್ ಜಿ.ಆರ್​.
| Edited By: |

Updated on: Mar 16, 2024 | 8:31 PM

Share

ನವದೆಹಲಿ, ಮಾ.16: ನಾನು ರಾಜಕೀಯಕ್ಕೆ ಬಂದಿರುವುದು ರಾಜಕೀಯ ಮಾಡುವುದಕ್ಕೆ ಅಲ್ಲ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ(BJP) ಅಭ್ಯರ್ಥಿ ಡಾ.ಮಂಜುನಾಥ್(Dr.C.N Manjunath) ಹೇಳಿದರು. ದೆಹಲಿಯಲ್ಲಿ ಕೇಂದ್ರ ಸಚಿವ ಅಮಿತ್​ ಶಾರನ್ನು ಭೇಟಿಯಾಗಿ ಮಾತನಾಡಿದ ಅವರು,  ‘ ಇದೊಂದು ಸೌಹಾರ್ದಯುತ ಭೇಟಿಯಾಗಿದೆ. ಇದುವರೆಗೂ ನಾನು ಅಮಿತ್​ ಶಾರನ್ನು ನೋಡಿರಲಿಲ್ಲ. ಇಂದು(ಮಾ.16) ಭೇಟಿಯಾಗಿ ಲೋಕಸಭಾ ಚುನಾವಣೆಗೆ ಅವರ ಸಹಕಾರ ಕೇಳಿದ್ದೇನೆ ಎಂದರು.

ಮಾ.18 ರಂದು ಅಧಿಕೃತವಾಗಿ BJP ಸೇರುತಿದ್ದೇನೆ

ಸೋಮವಾರ(ಮಾ.18)ದಂದು ಬೆಂಗಳೂರಿನಲ್ಲಿ ಅಧಿಕೃತವಾಗಿ ಬಿಜೆಪಿ ಸೇರುತಿದ್ದೇನೆ. ವೈಯಕ್ತಿಕವಾಗಿ ಯಾರನ್ನೂ ಟೀಕಿಸಲ್ಲ, ಇದೊಂದು ಧರ್ಮಯುದ್ಧ ಇದ್ದಂತೆ. ಜಿಡಿಎಸ್​​ ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಹೋದಲೆಲ್ಲಾ ಪಾಸಿಟಿವ್​ ಪ್ರತಿಕ್ರಿಯೆ​ ಬರುತ್ತಿದೆ ಎಂದು ದೆಹಲಿಯಲ್ಲಿ ಡಾ. ಮಂಜುನಾಥ್​ ಹೇಳಿದರು.

ಇದನ್ನೂ ಓದಿ:ನನ್ನ ಮೊದಲ ಮತ ದೇಶಕ್ಕಾಗಿ: ಲೋಕಸಭಾ ಚುನಾವಣೆ ಹಿನ್ನೆಲೆ ಅಭಿಯಾನ ಆರಂಭಿಸಿದ ಚುನಾವಣಾ ಆಯೋಗ

ಇನ್ನು ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಮಾ.13 ರಂದು ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯಾಗಿ​ ಡಾ. ಸಿ.ಎನ್​ ಮಂಜುನಾಥ್ ಅವರಿಗೆ ಟಿಕೆಟ್​ ಘೋಷಣೆ ಮಾಡಿದೆ. ಆ ಬಳಿಕ ಮಾತನಾಡಿದ್ದ ಅವರು, ‘ಅಧಿಕೃತವಾಗಿ ಬಿಜೆಪಿ ಸೇರುತ್ತೇನೆ. ಯಡಿಯೂರಪ್ಪನವರ ಜೊತೆಗೆ ಚರ್ಚೆ ಮಾಡಿದ್ದೇವೆ. ಲೋಕಸಭಾ ಚುನಾವಣೆ ಅಂದರೇನೇ ರಾಜಕೀಯ. ಆದರೆ, ನಾನು ರಾಜಕೀಯ ಮಾಡಲ್ಲ ಎಂದರು. ಚುನಾವಣೆಗೆ ನಿಂತ ಮೇಲೆ ಎಲ್ಲವೂ ಬಂದೇ ಬರುತ್ತದೆ. ಪ್ರಧಾನಿ ಮೋದಿಯವರ ಜನಪ್ರಿಯತೆ ಹಾಗೂ ಬಿಎಸ್​ ಯಡಿಯೂರಪ್ಪ ಅವರ ನಾಯಕತ್ವ, ಹೆಚ್​​ ಡಿ ದೇವೇಗೌಡ ಮತ್ತು HD ಕುಮಾರಸ್ವಾಮಿ ಅವರ ಸಲಹೆಯಂತೆ ಕೆಲಸ ಮಾಡುತ್ತೇನೆ. ಎಲ್ಲ ರೀತಿಯಲ್ಲಿ ಚುನಾವಣೆ ಎದುರಿಸಲು ನಾನು ಸಿದ್ಧನಾಗಿದ್ದೇನೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಇಂದು ದೆಹಲಿಯಲ್ಲಿ ಅಮಿತ್​​ ಶಾ ಅವರನ್ನು ಭೇಟಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್