2024ರ ಲೋಕಸಭಾ ಚುನಾವಣೆ ಧರ್ಮ ಯುದ್ಧ ಇದ್ದಂತೆ; ಡಾ.ಮಂಜುನಾಥ್​

| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 16, 2024 | 8:31 PM

ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಇಂದು(ಮಾ.13) ಬಿಡುಗಡೆಯಾಗಿದೆ. ಅದರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯಾಗಿ​ ಡಾ. ಸಿ.ಎನ್​ ಮಂಜುನಾಥ್ (C. N. Manjunath) ಅವರಿಗೆ ಟಿಕೆಟ್​ ಘೋಷಣೆ ಮಾಡಿದೆ. ಈ ಹಿನ್ನಲೆ ಇಂದು(ಮಾ.16) ದೆಹಲಿಯಲ್ಲಿ ಅಮಿತ್​ ಶಾ ಅವರನ್ನು ಭೇಟಿ ಮಾಡಿದ್ದಾರೆ.

2024ರ ಲೋಕಸಭಾ ಚುನಾವಣೆ ಧರ್ಮ ಯುದ್ಧ ಇದ್ದಂತೆ; ಡಾ.ಮಂಜುನಾಥ್​
ಡಾ.ಮಂಜುನಾಥ್​
Follow us on

ನವದೆಹಲಿ, ಮಾ.16: ನಾನು ರಾಜಕೀಯಕ್ಕೆ ಬಂದಿರುವುದು ರಾಜಕೀಯ ಮಾಡುವುದಕ್ಕೆ ಅಲ್ಲ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ(BJP) ಅಭ್ಯರ್ಥಿ ಡಾ.ಮಂಜುನಾಥ್(Dr.C.N Manjunath) ಹೇಳಿದರು. ದೆಹಲಿಯಲ್ಲಿ ಕೇಂದ್ರ ಸಚಿವ ಅಮಿತ್​ ಶಾರನ್ನು ಭೇಟಿಯಾಗಿ ಮಾತನಾಡಿದ ಅವರು,  ‘ ಇದೊಂದು ಸೌಹಾರ್ದಯುತ ಭೇಟಿಯಾಗಿದೆ. ಇದುವರೆಗೂ ನಾನು ಅಮಿತ್​ ಶಾರನ್ನು ನೋಡಿರಲಿಲ್ಲ. ಇಂದು(ಮಾ.16) ಭೇಟಿಯಾಗಿ ಲೋಕಸಭಾ ಚುನಾವಣೆಗೆ ಅವರ ಸಹಕಾರ ಕೇಳಿದ್ದೇನೆ ಎಂದರು.

ಮಾ.18 ರಂದು ಅಧಿಕೃತವಾಗಿ BJP ಸೇರುತಿದ್ದೇನೆ

ಸೋಮವಾರ(ಮಾ.18)ದಂದು ಬೆಂಗಳೂರಿನಲ್ಲಿ ಅಧಿಕೃತವಾಗಿ ಬಿಜೆಪಿ ಸೇರುತಿದ್ದೇನೆ. ವೈಯಕ್ತಿಕವಾಗಿ ಯಾರನ್ನೂ ಟೀಕಿಸಲ್ಲ, ಇದೊಂದು ಧರ್ಮಯುದ್ಧ ಇದ್ದಂತೆ. ಜಿಡಿಎಸ್​​ ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಹೋದಲೆಲ್ಲಾ ಪಾಸಿಟಿವ್​ ಪ್ರತಿಕ್ರಿಯೆ​ ಬರುತ್ತಿದೆ ಎಂದು ದೆಹಲಿಯಲ್ಲಿ ಡಾ. ಮಂಜುನಾಥ್​ ಹೇಳಿದರು.

ಇದನ್ನೂ ಓದಿ:ನನ್ನ ಮೊದಲ ಮತ ದೇಶಕ್ಕಾಗಿ: ಲೋಕಸಭಾ ಚುನಾವಣೆ ಹಿನ್ನೆಲೆ ಅಭಿಯಾನ ಆರಂಭಿಸಿದ ಚುನಾವಣಾ ಆಯೋಗ

ಇನ್ನು ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಮಾ.13 ರಂದು ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯಾಗಿ​ ಡಾ. ಸಿ.ಎನ್​ ಮಂಜುನಾಥ್ ಅವರಿಗೆ ಟಿಕೆಟ್​ ಘೋಷಣೆ ಮಾಡಿದೆ. ಆ ಬಳಿಕ ಮಾತನಾಡಿದ್ದ ಅವರು, ‘ಅಧಿಕೃತವಾಗಿ ಬಿಜೆಪಿ ಸೇರುತ್ತೇನೆ. ಯಡಿಯೂರಪ್ಪನವರ ಜೊತೆಗೆ ಚರ್ಚೆ ಮಾಡಿದ್ದೇವೆ. ಲೋಕಸಭಾ ಚುನಾವಣೆ ಅಂದರೇನೇ ರಾಜಕೀಯ. ಆದರೆ, ನಾನು ರಾಜಕೀಯ ಮಾಡಲ್ಲ ಎಂದರು. ಚುನಾವಣೆಗೆ ನಿಂತ ಮೇಲೆ ಎಲ್ಲವೂ ಬಂದೇ ಬರುತ್ತದೆ. ಪ್ರಧಾನಿ ಮೋದಿಯವರ ಜನಪ್ರಿಯತೆ ಹಾಗೂ ಬಿಎಸ್​ ಯಡಿಯೂರಪ್ಪ ಅವರ ನಾಯಕತ್ವ, ಹೆಚ್​​ ಡಿ ದೇವೇಗೌಡ ಮತ್ತು HD ಕುಮಾರಸ್ವಾಮಿ ಅವರ ಸಲಹೆಯಂತೆ ಕೆಲಸ ಮಾಡುತ್ತೇನೆ. ಎಲ್ಲ ರೀತಿಯಲ್ಲಿ ಚುನಾವಣೆ ಎದುರಿಸಲು ನಾನು ಸಿದ್ಧನಾಗಿದ್ದೇನೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಇಂದು ದೆಹಲಿಯಲ್ಲಿ ಅಮಿತ್​​ ಶಾ ಅವರನ್ನು ಭೇಟಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ