AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರು ರಾಘವೇಂದ್ರ ಬ್ಯಾಂಕ್ ವಂಚನೆ: ಬಿಜೆಪಿ ಮಾಜಿ ಎಂ​ಎಲ್​ಸಿ ಅಶ್ವಥ್ ನಾರಾಯಣ್ 12 ಕೋಟಿ ಸಾಲ ಕಟ್ಟಿಲ್ಲ -ಠೇವಣಿದಾರರ ಅಳಲು

ಈ ಹಗರಣದಲ್ಲಿ ಬಿಜೆಪಿಯ ಮಾಜಿ ಎಮ್ಎಲ್ಸಿ ಆಶ್ವಥ್ ನಾರಾಯಣ್ ಡೀಫಾಲ್ಟರ್ 12 ಕೋಟಿ ರೂಪಾಯಿ ಹಣ ಕಟ್ಟಿಲ್ಲ. ಸರ್ಕಾರ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು. ಸಿಎಂ ಯಡಿಯೂರಪ್ಪ ಈ ಬಗ್ಗೆ ಗಮನ ನೀಡಬೇಕೆಂದು ಡಾ ಶಂಕರ ಗುಹಾ ಮನವಿ ಮಾಡಿದ್ದಾರೆ.

ಗುರು ರಾಘವೇಂದ್ರ ಬ್ಯಾಂಕ್ ವಂಚನೆ: ಬಿಜೆಪಿ ಮಾಜಿ ಎಂ​ಎಲ್​ಸಿ ಅಶ್ವಥ್ ನಾರಾಯಣ್ 12 ಕೋಟಿ ಸಾಲ ಕಟ್ಟಿಲ್ಲ -ಠೇವಣಿದಾರರ ಅಳಲು
ಗುರು ರಾಘವೇಂದ್ರ ಬ್ಯಾಂಕ್
TV9 Web
| Updated By: ಆಯೇಷಾ ಬಾನು|

Updated on:Jul 12, 2021 | 2:20 PM

Share

ಬೆಂಗಳೂರು: ನಗರದ ಬಸವನಗುಡಿಯ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಡಾ ಶಂಕರ ಗುಹಾ ದ್ವಾರಕನಾಥ್ ಬೆಳ್ಳೂರು ಪತ್ರಿಕಾಗೋಷ್ಟಿ ನಡೆಸಿದ್ರು. ಈ ಬ್ಯಾಂಕ್ ಹಗರಣ ಬೆಳಕಿಗೆ ಬಂದು ಎರಡು ವರ್ಷಗಳಾಗ್ತಾ ಬಂತು. ಇದನ್ನ ಸಿಐಡಿ ತನಿಖೆಗೆ ವಹಿಸಲಾಗಿದೆ. ಆದರೆ ಏನು ತನಿಖೆ ಆಗ್ತಾ ಇದೆ ಅನ್ನೊದು ಗೊತ್ತಿಲ್ಲ. ವಾಸ್ತವದಲ್ಲಿ ಸಿಐಡಿಗೆ ಇಷ್ಟು ದೊಡ್ಡ ಹಗರಣ ತನಿಖೆ ಮಾಡಲು ಸಾಮರ್ಥ್ಯ ಇಲ್ಲ. ಈಗಾಗಲೇ ಸುಮಾರು ಠೇವಣಿದಾರರು ಮೃತರಾಗಿದ್ದಾರೆ ಎಂದು ಹೇಳಿದ್ರು.

ಈ ಹಗರಣದಲ್ಲಿ ಬಿಜೆಪಿಯ ಮಾಜಿ ಎಮ್ಎಲ್​ಸಿ ಅಶ್ವಥ್ ನಾರಾಯಣ್ ಡೀಫಾಲ್ಟರ್ 12 ಕೋಟಿ ರೂಪಾಯಿ ಹಣ ಕಟ್ಟಿಲ್ಲ. ಸರ್ಕಾರ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು. ಸಿಎಂ ಯಡಿಯೂರಪ್ಪ ಈ ಬಗ್ಗೆ ಗಮನ ನೀಡಬೇಕೆಂದು ಡಾ ಶಂಕರ ಗುಹಾ ಮನವಿ ಮಾಡಿದ್ದಾರೆ. ತುರ್ತು ಕ್ರಮ ಜರುಗಿಸದೇ ಇದ್ರೆ ಆರ್ಬಿಐ ಚಲೋ ನಡೆಸಬೇಕಾಗುತ್ತೆ. ರಾಜಕೀಯ ಹಿತಾಸಕ್ತಿ ಬಿಟ್ಟು ಗ್ರಾಹಕರ ಪರವಾಗಿ ಕೆಲಸ ಮಾಡಬೇಕಿದೆ. ಕೇಂದ್ರ ಹಣಕಾಸು ಸಚಿವೆ ಕೂಡ ಬೇಜವಾಬ್ದಾರಿಯಾಗಿ ಪ್ರತಿಕ್ರಿಯಿಸಿದ್ದಾರೆ. ಆರ್​ಬಿಐ ಕೂಡ ಈ ವಂಚನೆಗಳನ್ನ ನೋಡಿಕೊಂಡು ಯಾಕೆ ಸುಮ್ಮನಿದೆ. ಆರ್​ಬಿಐ ತುರ್ತಾಗಿ ಕ್ರಮಕೈಗೊಳ್ಳಬೇಕಿದೆ. 25 ಸಾವಿರ ಜನ ಹಣವನ್ನ ಕಳೆದುಕೊಂಡಿದ್ದಾರೆ.

ಸಿಐಡಿ ಸ್ಟ್ರಾಂಗ್ ಕೇಸ್ ಮಾಡಿಲ್ಲ. 2130 ಕೋಟಿ ರೂಪಾಯಿ ಗ್ರಾಹಕರಿಗೆ ವಾಪಸ್ ಬರಬೇಕಿದೆ. ಆದರೆ ಆರ್ಬಿಐ ಮಾತ್ರ ಸ್ಪಷ್ಟ ಕ್ರಮ ಕೈಗೊಳ್ಳುತ್ತಿಲ್ಲ. ಈಗಾಗಲೇ ಹಣ ಕಳೆದುಕೊಂಡ ಹಲವರು ಸಾವನ್ನಪ್ಪಿದ್ದಾರೆ. ಆಡಿಟ್ ರಿಪೋರ್ಟ್ ನೆಪದಲ್ಲಿ ಸಮಯ ತಳ್ಳುತ್ತಿದ್ದಾರೆ. ವಿಳಂಬದ ಹಿಂದೆ ರಾಜಕೀಯ ಹಿತಾಸಕ್ತಿ ಕಾಣುತ್ತಿದೆ. ಸ್ಥಳೀಯ ರಾಜಕಾರಣಿಗಳ ವಿರುದ್ದ ಗಂಭೀರ ಆರೋಪ ಕೇಳಿ ಬರುತ್ತಿದೆ ಎಂದು ಡಾ ಶಂಕರ ಗುಹಾ ದ್ವಾರಕನಾಥ್ ಈ ಪ್ರಕರಣದ ಬಗ್ಗೆ ಗಮನ ಹರಿಸಲು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಖಾತೆಯಲ್ಲಿದ್ದ ಹಣದ ಬಗ್ಗೆ ಆತಂಕ: ಗುರು ರಾಘವೇಂದ್ರ ಬ್ಯಾಂಕ್ ವಿರುದ್ಧ ಠೇವಣಿದಾರರ ಪ್ರತಿಭಟನೆ

Published On - 2:07 pm, Mon, 12 July 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ