AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕು ನಿಯಂತ್ರಣಕ್ಕೆ ಬರದಿದ್ದರೆ ಎಲ್ಲ ಚಟುವಟಿಕೆಗಳಿಗೂ ಕಡಿವಾಣ ಹಾಕಬಹುದು; ಆರೋಗ್ಯ ಸಚಿವ ಡಾ.ಸುಧಾಕರ್ ಎಚ್ಚರಿಕೆ

ರಾಜ್ಯದಲ್ಲಿ ಕೊರೊನಾ ಲಸಿಕೆ ಖಾಲಿಯಾದ ಹಿನ್ನೆಲೆ ನಿನ್ನೆ ಕೇಂದ್ರ ಆರೋಗ್ಯ ಸಚಿವರು ತಕ್ಷಣವೇ 15 ಲಕ್ಷ ಡೋಸ್​ಗೂ ಅಧಿಕ ಲಸಿಕೆ ಕಳಿಸಿದ್ದಾರೆ. ತಕ್ಷಣವೇ ಸ್ಪಂದಿಸಿದ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಚಿವ ಡಾ.ಸುಧಾಕರ್ ತಿಳಿಸಿದರು.

ಸೋಂಕು ನಿಯಂತ್ರಣಕ್ಕೆ ಬರದಿದ್ದರೆ ಎಲ್ಲ ಚಟುವಟಿಕೆಗಳಿಗೂ ಕಡಿವಾಣ ಹಾಕಬಹುದು; ಆರೋಗ್ಯ ಸಚಿವ ಡಾ.ಸುಧಾಕರ್ ಎಚ್ಚರಿಕೆ
ಆರೋಗ್ಯ ಸಚಿವ ಡಾ.ಸುಧಾಕರ್ ಕರ್ನಾಟಕದಲ್ಲಿ ಸೋಂಕು ಹರಡದಂತೆ ತಡೆಯಲು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ.
guruganesh bhat
| Edited By: |

Updated on: Apr 05, 2021 | 10:53 AM

Share

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದರೆ ಮಾತ್ರ ಮೂರು ದಿನದ ಸಲುವಾಗಿ ಸಡಿಲಿಸಿದ ನಿಯಮಗಳನ್ನು ಮುಂದುವರಿಸಬಹುದು. ನಿಯಂತ್ರಣ ಬರದೇ ಸೋಂಕು ಹೆಚ್ಚಳವಾದರೆ ಎಲ್ಲದಕ್ಕೂ ಕಡಿವಾಣ ಹಾಕಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಕೆಲವು ಒತ್ತಡಕ್ಕೆ ಮಣಿದು, ಕೆಲವು ವಲಯದವರು ಸಲ್ಲಿಸಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನಿಯಮ ಅನುಷ್ಠಾನಕ್ಕೆ ತರಲು ಆಯಾ ಇಲಾಖೆ ಮುಖ್ಯಸ್ಥರು ಗಮನಹರಿಸಬೇಕು. ಇಂದಿನಿಂದ ಎಲ್ಲ ನಿಯಮಗಳೂ ಅನುಷ್ಠಾನಕ್ಕೆ ಬರಲಿದೆ. ಇಲ್ಲಿ ಯಾವುದೇ ತಾರತಮ್ಯ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ರಾಜ್ಯಕ್ಕೆ ನಿನ್ನೆಯವರೆಗೂ 46 ಲಕ್ಷ ಡೋಸ್ ಲಸಿಕೆ ಬಂದಿದೆ. ಲಸಿಕೆ ಖಾಲಿಯಾದ ಹಿನ್ನೆಲೆ ನಿನ್ನೆ ಕೇಂದ್ರ ಆರೋಗ್ಯ ಸಚಿವರು ತಕ್ಷಣವೇ 15 ಲಕ್ಷ ಡೋಸ್​ಗೂ ಅಧಿಕ ಲಸಿಕೆ ಕಳಿಸಿದ್ದಾರೆ. ತಕ್ಷಣವೇ ಸ್ಪಂದಿಸಿದ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಸೋಂಕಿತರ ಸಂಖ್ಯೆ ಕೊಂಚ ಕಡಿಮೆ ಆದರೂ ನಿಯಮ ಪಾಲನೆ ಮಾಡದೇ ಇರುವಂತಿಲ್ಲ. ಮಾಸ್ಕ್ ಹಾಕೋದು ಕಡ್ಡಾಯವಾಗಿರಬೇಕು. ಪ್ರಧಾನಮಂತ್ರಿಗಳು ಎಂಟು ರಾಜ್ಯಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ. ಕೊರೊನಾ ತಡೆಗೆ ಯಾವ ರೀತಿ ಕ್ರಮ ಕೈಗೊಳ್ಳಬೇಕು ಅಂತ ಸೂಚಿಸಿದ್ದಾರೆ. ಸೋಂಕು ನಿಯಂತ್ರಣಕ್ಕೆ ಬರದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ರಾಜ್ಯಗಳಿಗೆ ಹೇಳಿದ್ದಾರೆ. ಅಂತಹ ಕಠಿಣ ವಾತಾವರಣ ರಾಜ್ಯದಲ್ಲಿ ಸೃಷ್ಟಿ ಆಗೋದು ಬೇಡ. ನಾವು ಬಹಳ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡರೆ ಸೋಂಕು ನಿಯಂತ್ರಣ ಮಾಡಬಹುದು. ಆರೋಗ್ಯ ಇಲಾಖೆ ಐಸಿಯು, ಬೆಡ್ ಸೇರಿದಂತೆ ಮತ್ತಿತರ ವ್ಯವಸ್ಥೆ ಮಾಡಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಶೇ20 ರಷ್ಟು ಬೆಡ್ ಮೀಸಲು ಇಡಲು ಮಾತನಾಡುತ್ತೇನೆ. ತಾಂತ್ರಿಕ ಸಲಹಾ ಸಮಿತಿ ಮೇ ತಿಂಗಳ ಅಂತ್ಯದವರೆಗೂ ಗಮನ ಹರಿಸಲು ಸೂಚನೆ ನೀಡಿದೆ. ಸೋಂಕು ನಿಯಂತ್ರಣಕ್ಕೆ ಎಲ್ಲರ ಸಹಕಾರ ಬೇಕು. ನಿಯಂತ್ರಣ ತಂದು ಸಾವಿನ ಸಂಖ್ಯೆ ಕಡಿಮೆ ಮಾಡಬೇಕಿದೆ ಎಂದು ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಕೊರೊನಾ ವಿಚಾರದಲ್ಲಿ ವಿಪಕ್ಷದವರನ್ನು ಪರಿಗಣನೆಗೆ ತೆಗೆದುಕೊಳ್ಳದಿರುವ ಸಿದ್ದರಾಮಯ್ಯ ಅವರ ಆರೋಪದ ಕುರಿತು ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಈ ಬಗ್ಗೆ ಸಿಎಂ ಯಡಿಯೂರಪ್ಪ ಅವರ ಜೊತೆ ಮಾತನಾಡುತ್ತೇನೆ. ಸೋಂಕು ನಿಯಂತ್ರಣ ಮಾಡಲು ನಾವು ಎಲ್ಲ ಕ್ರಮ ತೆಗೆದುಕೊಂಡಿದ್ದೇವೆ. ವಿಪಕ್ಷ ನಾಯಕ ಸಿದ್ದರಾಮಯ್ಯರ ಸಲಹೆಯನ್ನೂ ಪಡೆಯುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಜಿಮ್ ಬಂದ್ ನಿರ್ಧಾರ ವಾಪಸ್; ಆದರೆ ಷರತ್ತುಗಳು ಅನ್ವಯ

ಕೊವಿಡ್ ಹಾವಳಿ ಶಾಂತವಾದ ನಂತರ ಹುಟ್ಟಿಕೊಳ್ಳಲಿವೆಯೇ ಸೂಪರ್ ಬ್ಯಾಕ್ಟೀರಿಯಾಗಳು?

Follow Us
guruganesh bhat
guruganesh bhat
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ