AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Draupadi Murmu Karnataka Visit: ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಕರ್ನಾಟಕಕ್ಕೆ ಭೇಟಿ: ಬಿಗಿ ಬಂದೋಬಸ್ತ್​

ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಕರ್ನಾಟಕಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಅವರು ತಂಗಲಿರುವ ಶಾಂಗ್ರೀಲಾ ಹೋಟೆಲ್​ ಬಳಿ ಬಿಗಿ ಬಂದೋಬಸ್ತ್​ ಕಲ್ಪಿಸಲಾಗಿದೆ. ಬಿಜೆಪಿ ಶಾಸಕರು, ಸಂಸದರ ಜತೆ ಸಭೆ ಬಳಿಕ ಜಡಿಎಸ್ ವರಿಷ್ಠ ಎಚ್​ಡಿ ದೇವೇಗೌಡರನ್ನು ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Draupadi Murmu Karnataka Visit: ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಕರ್ನಾಟಕಕ್ಕೆ ಭೇಟಿ: ಬಿಗಿ ಬಂದೋಬಸ್ತ್​
Draupadi Murmu
TV9 Web
| Edited By: |

Updated on:Jul 10, 2022 | 4:11 PM

Share

ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಕರ್ನಾಟಕಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಅವರು ತಂಗಲಿರುವ ಶಾಂಗ್ರೀಲಾ ಹೋಟೆಲ್​ ಬಳಿ ಬಿಗಿ ಬಂದೋಬಸ್ತ್​ ಕಲ್ಪಿಸಲಾಗಿದೆ. ಬಿಜೆಪಿ ಶಾಸಕರು, ಸಂಸದರ ಜತೆ ಸಭೆ ಬಳಿಕ ಜಡಿಎಸ್ ವರಿಷ್ಠ ಎಚ್​ಡಿ ದೇವೇಗೌಡರನ್ನು ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಬೆಂಗಳೂರಿನ ಶಾಂಗ್ರೀಲಾ ಹೋಟೆಲ್​ಗೆ ಮುರ್ಮು ಆಗಮಿಸಿದ್ದಾರೆ, ಅವರಿಗೆ ಹೋಟೆಲ್​ ಬಳಿ ಆದಿವಾಸಿ ಕಲಾತಂಡಗಳು ಭರ್ಜರಿ ಸ್ವಾಗತ ಕೋರಿವೆ. ಬಿಜೆಪಿ ಸಂಸದರು, ಶಾಸಕರ ಜೊತೆ ಸಭೆ ನಡೆಸುವ ದ್ರೌಪದಿ ಸಭೆಯಲ್ಲಿ ಮತಯಾಚಿಸಲಿದ್ದಾರೆ.

ರಾಷ್ಟ್ರಪತಿ ಚುನಾವಣೆ ಸಂಬಂಧ ಚರ್ಚೆ ದ್ರೌಪದಿ ಚರ್ಚೆ ನಡೆಸಲಿದ್ದಾರೆ, ಸಂಜೆ 6.30ರ ವೇಳೆಗೆ ಎಚ್ ಡಿ ದೇವೇಗೌಡ ನಿವಾಸಕ್ಕೆ ದ್ರೌಪದಿ ಮುರ್ಮು ಭೇಟಿ ಸಾಧ್ಯತೆ ಇದೆ. ದ್ರೌಪದಿ ಮುರ್ಮು ಅವರನ್ನು ಬರಮಾಡಿಕೊಳ್ಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್​ಎಎಲ್​ ಏರ್​ಪೋರ್ಟ್​ಗೆ ತೆರಳಿದ್ದಾರೆ.

ಮುರ್ಮು ಅವರು ಒಡಿಶಾ ರಾಜ್ಯ ಬಿಜೆಪಿ ಪರಿಶಿಷ್ಟ ಪಂಗಡ ಮೋರ್ಚಾದ ಉಪಾಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದರು. ನಂತರ ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ರಾಯ್ರಂಗಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬಿಜೆಡಿ-ಬಿಜೆಪಿ ಮೈತ್ರಿ ಸರ್ಕಾರದಲ್ಲಿ ದ್ರೌಪದಿ ಸಚಿವೆಯೂ ಆಗಿದ್ದರು. 2007ರಲ್ಲಿ ಅತ್ಯುತ್ತಮ ಶಾಶಕಿ ಪ್ರಶಸ್ತಿಯೂ ಅವರಿಗೆ ಲಭಿಸಿತ್ತು. 2009ರಿಂದ ಅವರು ಬಿಜೆಪಿಯ ರಾಜ್ಯ ಪರಿಶಿಷ್ಟ ಪಂಗಡ ಮೋರ್ಚಾದ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದರು.

ಶಿಕ್ಷಣದ ಪೂರೈಸಿದ ಬಳಿಕ ಒಡಿಶಾ ಸರ್ಕಾರದ ನೀರಾವರಿ ಇಲಾಖೆಯಲ್ಲಿ ಕೆಲಸ, ಬಳಿಕ ಶಿಕ್ಷಕಿ ಹುದ್ದೆ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಈ ನಡುವೆ 1997ರಲ್ಲಿ ಅವರು ಒಡಿಶಾದ ರಾಯ್ರಂಗಪುರ ನಗರಾಡಳಿತ ಸಂಸ್ಥೆಯ ಸದಸ್ಯರಾಗಿ ಚುನಾಯಿತರಾದರು. ಅದೇ ವರ್ಷ ನಗರಾಡಳಿತ ಸಂಸ್ಥೆಯ ಉಪಾಧ್ಯಕ್ಷೆಯಾಗಿದ್ದರು.

ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯ ಮತದಾರರೂ ಆಗಿರುವ ಶಾಸಕರ ಬಳಿ ಮತ ಯಾಚಿಸಲಿದ್ದಾರೆ.

Published On - 4:00 pm, Sun, 10 July 22

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!