AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drinking Water Problem: ಯಶವಂತಪುರದಲ್ಲಿ ಕುಡಿಯುವ ನೀರಿಗೆ ತತ್ವಾರ: ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಹಾಹಾಕಾರ

ರಾಜ್ಯದಲ್ಲಿ ಜಲ ಸಂಕಷ್ಟ ಮುಂದುವರಿದಿದೆ. ಬೆಂಗಳೂರಿನ ಯಶವಂತಪುರದಲ್ಲಿ ಕುಡಿಯುವ ನೀರಿಗೂ ತತ್ವಾರ ಎದುರಾಗಿದೆ. ಚಿಕ್ಕಮಗಳೂರು, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳ ಪ್ರಮುಖ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಅಭಾವ ಉಂಟಾಗಿದೆ. ಇದು ಜನಜೀವನವನ್ನು ಸಂಕಷ್ಟಕ್ಕೆ ದೂಡಿದೆ. ಜನ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುವಂತೆ ಮಾಡಿದೆ.

Drinking Water Problem: ಯಶವಂತಪುರದಲ್ಲಿ ಕುಡಿಯುವ ನೀರಿಗೆ ತತ್ವಾರ: ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಹಾಹಾಕಾರ
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on: Mar 01, 2024 | 6:33 AM

Share

ಬೆಂಗಳೂರು, ಮಾರ್ಚ್ 1: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ನೀರಿನ ಸಮಸ್ಯೆ (Water Problem) ಮತ್ತಷ್ಟು ಬಿಗಡಾಯಿಸುತ್ತಿದೆ. ಏರಿಯಾದಿಂದ ಏರಿಯಾಗೆ ಜಲದಾಹ (Water Scarcity) ಹೆಚ್ಚುತ್ತಿದೆ. ನೀರಿನ ಸಮಸ್ಯೆ ಬಗ್ಗೆ ಜನತಾದರ್ಶನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಗಮನ ಸೆಳೆದರೂ, ಅಧಿಕಾರಿಗಳು ಸಮರ್ಪಕವಾಗಿ ನೀರು ಸರಬರಾಜು ಮಾಡುತ್ತಿಲ್ಲವಂತೆ. ಅತ್ತ ಕೋಲಾರ ಹಾಗೂ ಚಿಕ್ಕಮಗಳೂರಿನಲ್ಲೂ ಬೇಸಿಗೆ ಆರಂಭದಲ್ಲೇ ಕುಡಿಯೋ ನೀರಿಗಾಗಿ ಹಾಹಾಕಾರವೆದ್ದಿದೆ.

ಯಶವಂತಪುರದ ದೊಡ್ಡ ಬಿದರಕಲ್ಲಿನ ನಿವಾಸಿಗಳ ಪರದಾಟ!

ಮಹಿಳೆಯರು ಖಾಲಿ ಕೊಡಗಳೊಂದಿಗೆ ನೀರು ಬೇಕು ಎಂದು ಆಕ್ರೋಶ ವ್ಯಕ್ತಪಡಿಸುತ್ತಿರುವ ದೃಶ್ಯ ಯಶವಂತಪುರದ ಪುನೀತ್ ರಾಜ್‍ಕುಮಾರ್ ಲೇಔಟ್​ನಲ್ಲಿ ಸಾಮಾನ್ಯವಾಗಿದೆ. ಇಲ್ಲಿ ನೀರು ಇಲ್ಲದ ಕಾರಣ ಬಾಡಿಗೆದಾರರು ಮನೆ ಖಾಲಿಮಾಡಿಕೊಂಡು ಹೋಗುತ್ತಿದ್ದಾರಂತೆ. ಇದರಿಂದ ಲೇಔಟ್ ತುಂಬಾ ಟು ಲೆಟ್ (TO LET) ಬೋರ್ಡ್​ಗಳೇ ಕಣ್ಣಿಗೆ ಬೀಳುತ್ತಿವೆ. ಮೊದಲು 400 ರಿಂದ 500 ರೂಪಾಯಿಗೆ ಒಂದು ಟ್ಯಾಂಕರ್ ನೀರು ಕೊಡುತ್ತಿದ್ದ ಟ್ಯಾಂಕರ್​ನವರು ಈಗ 1000 ದಿಂದ 1200 ರೂಪಾಯಿ ಕೇಳುತ್ತಿದ್ದಾರೆ. ಬೋರ್​ ವೆಲ್​​ಗಳು ಬತ್ತಿ ಹೋಗಿವೆ. ಸರಿಯಾಗಿ ಕುಡಿಯಲು ನೀರು ಬರುತ್ತಿಲ್ಲವೆಂದು ಸ್ಥಳೀಯರು ದೂರಿದ್ದಾರೆ.

ದೊಡ್ಡ ಬಿದರಕಲ್ಲಿನ ಪುನೀತ್ ರಾಜ್​ಕುಮಾರ್ ಬಡಾವಣೆ ನಿವಾಸಿಗಳಿಗೆ ಕುಡಿಯಲು ಕಾವೇರಿ ನೀರಿಲ್ಲ. ಬೋರ್​​​ವೆಲ್ ನೀರಿನಿಂದಲೇ ತಮ್ಮ ದಾಹ ತೀರಿಸಿಕೊಳ್ಳಬೇಕು ಆದರೆ ಆ ಬೋರ್​​​ವೆಲ್​​ಗಳಲ್ಲೂ ನೀರು ಬತ್ತಿ ಹೋಗಿದೆಯಂತೆ. ಬಿಬಿಎಂಪಿ ಈ ಏರಿಯಾಗೆ ಟ್ಯಾಂಕರ್​​ಗಳ ಮೂಲಕ ಉಚಿತವಾಗಿ ಪ್ರತಿದಿನ ನೀರು ಪೂರೈಕೆ ಮಾಡುತ್ತಿದೆ. ಆದರೆ ಅದು ಕೂಡ ನಿಂತು ತುಂಬಾ ತಿಂಗಳುಗಳೇ ಕಳೆದಿವೆ.

ಸಿಎಂ ಸಿದ್ದರಾಮಯ್ಯ ಅವರ ಜನತಾದರ್ಶನದಲ್ಲಿ ಮನವಿ ನೀಡಿದರೂ ಕುಡಿಯಲು ಮಾತ್ರ ನೀರಿಲ್ಲವಂತೆ. ಖುದ್ದಾಗಿ ಸಿಎಂ ಕುಡಿಯಲು ನೀರು ಕೊಡಲು ಹೇಳಿದ್ದರೂ ಅಧಿಕಾರಿಗಳು ಮಾತ್ರ ಪೂರೈಕೆ ಮಾಡುತ್ತಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.

ಕೋಲಾರ, ಚಿಕ್ಕಮಗಳೂರಿನಲ್ಲೂ ಜೀವಜಲಕ್ಕೆ ಹಾಹಾಕಾರ!

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬೇಸಿಗೆ ಆರಂಭಕ್ಕೂ ಮುನ್ನವೇ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ. ಅದರಲ್ಲೂ ಪ್ರತಿ ವರ್ಷ ಅತಿವೃಷ್ಟಿಗೆ ಒಳಗಾಗಿ ಸಂಕಷ್ಟತೆ ಒಳಗಾಗುತ್ತಿದ್ದ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ಈ ಬಾರಿ ವಾಡಿಕೆಯಷ್ಟು ಮಳೆಯಾಗದ ಹಿನ್ನೆಲೆಯಲ್ಲಿ ನದಿ ಹಳ್ಳ ಕೊಳ್ಳ ಬಾವಿ ಸೇರಿದಂತಹ ಜಲ ಮೂಲಗಳು ಬತ್ತಿ ಹೋಗಿದ್ದು ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ. ತೋಟದೂರು ಗ್ರಾಮ ಪಂಚಾಯಿತಿಯ ತನೂಡಿ ಗ್ರಾಮದ ಆಳುಗೋಡಿನ ನಿವಾಸಿಗಳು ಕುಡಿಯುವ ನೀರಿಗಾಗಿ ಪಡುತ್ತಿರುವ ಕಷ್ಟ ಅಷ್ಟಿಷ್ಟಲ್ಲ.

ಇದನ್ನೂ ಓದಿ: ರಾಯಚೂರು: ಕೃಷ್ಣಾ ನದಿ ಸಂಪೂರ್ಣ ಖಾಲಿ! ನದಿ ತೀರದ ಹಳ್ಳಿಗಳಲ್ಲಿ ನೀರಿಗೆ ಹಾಹಾಕಾರ, ಜನ – ಜಾನುವಾರು ಕಂಗಾಲು

ಇತ್ತ ಕೋಲಾರ‌ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಸರ್ಕಾರ ಈಗಾಗಲೇ ಘೋಷಿಸಿದೆ. ಕೋಲಾರ ಜಿಲ್ಲೆಯ ಆರೂ ತಾಲೂಕುಗಳನ್ನು ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿ, ಈಗಾಗಲೇ ರೈತರಿಗೆ ಪರಿಹಾರ ಕೊಡುವ ಕೆಲಸ ನಡೆಯುತ್ತಿದೆ. ಹೀಗಿರುವಾಗಲೇ ಆರಂಭದಲ್ಲೇ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು ಕೆರೆ ಕಟ್ಟೆಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ಕೆರೆಗಳಲ್ಲಿ ಕೇವಲ 30 ರಿಂದ 40 ರಷ್ಟು ಮಾತ್ರ ನೀರಿದೆ.

(ವರದಿ: ಕೋಲಾರದಿಂದ ರಾಜೇಂದ್ರ, ಚಿಕ್ಕಮಗಳೂರಿನಿಂದ ಅಶ್ವಿತ್ ಜೊತೆ, ಕಿರಣ್ ಸೂರ್ಯ ಟಿವಿ9 ಬೆಂಗಳೂರು)

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ