Drinking Water Problem: ಯಶವಂತಪುರದಲ್ಲಿ ಕುಡಿಯುವ ನೀರಿಗೆ ತತ್ವಾರ: ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಹಾಹಾಕಾರ

ರಾಜ್ಯದಲ್ಲಿ ಜಲ ಸಂಕಷ್ಟ ಮುಂದುವರಿದಿದೆ. ಬೆಂಗಳೂರಿನ ಯಶವಂತಪುರದಲ್ಲಿ ಕುಡಿಯುವ ನೀರಿಗೂ ತತ್ವಾರ ಎದುರಾಗಿದೆ. ಚಿಕ್ಕಮಗಳೂರು, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳ ಪ್ರಮುಖ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಅಭಾವ ಉಂಟಾಗಿದೆ. ಇದು ಜನಜೀವನವನ್ನು ಸಂಕಷ್ಟಕ್ಕೆ ದೂಡಿದೆ. ಜನ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುವಂತೆ ಮಾಡಿದೆ.

Drinking Water Problem: ಯಶವಂತಪುರದಲ್ಲಿ ಕುಡಿಯುವ ನೀರಿಗೆ ತತ್ವಾರ: ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಹಾಹಾಕಾರ
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on: Mar 01, 2024 | 6:33 AM

ಬೆಂಗಳೂರು, ಮಾರ್ಚ್ 1: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ನೀರಿನ ಸಮಸ್ಯೆ (Water Problem) ಮತ್ತಷ್ಟು ಬಿಗಡಾಯಿಸುತ್ತಿದೆ. ಏರಿಯಾದಿಂದ ಏರಿಯಾಗೆ ಜಲದಾಹ (Water Scarcity) ಹೆಚ್ಚುತ್ತಿದೆ. ನೀರಿನ ಸಮಸ್ಯೆ ಬಗ್ಗೆ ಜನತಾದರ್ಶನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಗಮನ ಸೆಳೆದರೂ, ಅಧಿಕಾರಿಗಳು ಸಮರ್ಪಕವಾಗಿ ನೀರು ಸರಬರಾಜು ಮಾಡುತ್ತಿಲ್ಲವಂತೆ. ಅತ್ತ ಕೋಲಾರ ಹಾಗೂ ಚಿಕ್ಕಮಗಳೂರಿನಲ್ಲೂ ಬೇಸಿಗೆ ಆರಂಭದಲ್ಲೇ ಕುಡಿಯೋ ನೀರಿಗಾಗಿ ಹಾಹಾಕಾರವೆದ್ದಿದೆ.

ಯಶವಂತಪುರದ ದೊಡ್ಡ ಬಿದರಕಲ್ಲಿನ ನಿವಾಸಿಗಳ ಪರದಾಟ!

ಮಹಿಳೆಯರು ಖಾಲಿ ಕೊಡಗಳೊಂದಿಗೆ ನೀರು ಬೇಕು ಎಂದು ಆಕ್ರೋಶ ವ್ಯಕ್ತಪಡಿಸುತ್ತಿರುವ ದೃಶ್ಯ ಯಶವಂತಪುರದ ಪುನೀತ್ ರಾಜ್‍ಕುಮಾರ್ ಲೇಔಟ್​ನಲ್ಲಿ ಸಾಮಾನ್ಯವಾಗಿದೆ. ಇಲ್ಲಿ ನೀರು ಇಲ್ಲದ ಕಾರಣ ಬಾಡಿಗೆದಾರರು ಮನೆ ಖಾಲಿಮಾಡಿಕೊಂಡು ಹೋಗುತ್ತಿದ್ದಾರಂತೆ. ಇದರಿಂದ ಲೇಔಟ್ ತುಂಬಾ ಟು ಲೆಟ್ (TO LET) ಬೋರ್ಡ್​ಗಳೇ ಕಣ್ಣಿಗೆ ಬೀಳುತ್ತಿವೆ. ಮೊದಲು 400 ರಿಂದ 500 ರೂಪಾಯಿಗೆ ಒಂದು ಟ್ಯಾಂಕರ್ ನೀರು ಕೊಡುತ್ತಿದ್ದ ಟ್ಯಾಂಕರ್​ನವರು ಈಗ 1000 ದಿಂದ 1200 ರೂಪಾಯಿ ಕೇಳುತ್ತಿದ್ದಾರೆ. ಬೋರ್​ ವೆಲ್​​ಗಳು ಬತ್ತಿ ಹೋಗಿವೆ. ಸರಿಯಾಗಿ ಕುಡಿಯಲು ನೀರು ಬರುತ್ತಿಲ್ಲವೆಂದು ಸ್ಥಳೀಯರು ದೂರಿದ್ದಾರೆ.

ದೊಡ್ಡ ಬಿದರಕಲ್ಲಿನ ಪುನೀತ್ ರಾಜ್​ಕುಮಾರ್ ಬಡಾವಣೆ ನಿವಾಸಿಗಳಿಗೆ ಕುಡಿಯಲು ಕಾವೇರಿ ನೀರಿಲ್ಲ. ಬೋರ್​​​ವೆಲ್ ನೀರಿನಿಂದಲೇ ತಮ್ಮ ದಾಹ ತೀರಿಸಿಕೊಳ್ಳಬೇಕು ಆದರೆ ಆ ಬೋರ್​​​ವೆಲ್​​ಗಳಲ್ಲೂ ನೀರು ಬತ್ತಿ ಹೋಗಿದೆಯಂತೆ. ಬಿಬಿಎಂಪಿ ಈ ಏರಿಯಾಗೆ ಟ್ಯಾಂಕರ್​​ಗಳ ಮೂಲಕ ಉಚಿತವಾಗಿ ಪ್ರತಿದಿನ ನೀರು ಪೂರೈಕೆ ಮಾಡುತ್ತಿದೆ. ಆದರೆ ಅದು ಕೂಡ ನಿಂತು ತುಂಬಾ ತಿಂಗಳುಗಳೇ ಕಳೆದಿವೆ.

ಸಿಎಂ ಸಿದ್ದರಾಮಯ್ಯ ಅವರ ಜನತಾದರ್ಶನದಲ್ಲಿ ಮನವಿ ನೀಡಿದರೂ ಕುಡಿಯಲು ಮಾತ್ರ ನೀರಿಲ್ಲವಂತೆ. ಖುದ್ದಾಗಿ ಸಿಎಂ ಕುಡಿಯಲು ನೀರು ಕೊಡಲು ಹೇಳಿದ್ದರೂ ಅಧಿಕಾರಿಗಳು ಮಾತ್ರ ಪೂರೈಕೆ ಮಾಡುತ್ತಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.

ಕೋಲಾರ, ಚಿಕ್ಕಮಗಳೂರಿನಲ್ಲೂ ಜೀವಜಲಕ್ಕೆ ಹಾಹಾಕಾರ!

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬೇಸಿಗೆ ಆರಂಭಕ್ಕೂ ಮುನ್ನವೇ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ. ಅದರಲ್ಲೂ ಪ್ರತಿ ವರ್ಷ ಅತಿವೃಷ್ಟಿಗೆ ಒಳಗಾಗಿ ಸಂಕಷ್ಟತೆ ಒಳಗಾಗುತ್ತಿದ್ದ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ಈ ಬಾರಿ ವಾಡಿಕೆಯಷ್ಟು ಮಳೆಯಾಗದ ಹಿನ್ನೆಲೆಯಲ್ಲಿ ನದಿ ಹಳ್ಳ ಕೊಳ್ಳ ಬಾವಿ ಸೇರಿದಂತಹ ಜಲ ಮೂಲಗಳು ಬತ್ತಿ ಹೋಗಿದ್ದು ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ. ತೋಟದೂರು ಗ್ರಾಮ ಪಂಚಾಯಿತಿಯ ತನೂಡಿ ಗ್ರಾಮದ ಆಳುಗೋಡಿನ ನಿವಾಸಿಗಳು ಕುಡಿಯುವ ನೀರಿಗಾಗಿ ಪಡುತ್ತಿರುವ ಕಷ್ಟ ಅಷ್ಟಿಷ್ಟಲ್ಲ.

ಇದನ್ನೂ ಓದಿ: ರಾಯಚೂರು: ಕೃಷ್ಣಾ ನದಿ ಸಂಪೂರ್ಣ ಖಾಲಿ! ನದಿ ತೀರದ ಹಳ್ಳಿಗಳಲ್ಲಿ ನೀರಿಗೆ ಹಾಹಾಕಾರ, ಜನ – ಜಾನುವಾರು ಕಂಗಾಲು

ಇತ್ತ ಕೋಲಾರ‌ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಸರ್ಕಾರ ಈಗಾಗಲೇ ಘೋಷಿಸಿದೆ. ಕೋಲಾರ ಜಿಲ್ಲೆಯ ಆರೂ ತಾಲೂಕುಗಳನ್ನು ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿ, ಈಗಾಗಲೇ ರೈತರಿಗೆ ಪರಿಹಾರ ಕೊಡುವ ಕೆಲಸ ನಡೆಯುತ್ತಿದೆ. ಹೀಗಿರುವಾಗಲೇ ಆರಂಭದಲ್ಲೇ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು ಕೆರೆ ಕಟ್ಟೆಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ಕೆರೆಗಳಲ್ಲಿ ಕೇವಲ 30 ರಿಂದ 40 ರಷ್ಟು ಮಾತ್ರ ನೀರಿದೆ.

(ವರದಿ: ಕೋಲಾರದಿಂದ ರಾಜೇಂದ್ರ, ಚಿಕ್ಕಮಗಳೂರಿನಿಂದ ಅಶ್ವಿತ್ ಜೊತೆ, ಕಿರಣ್ ಸೂರ್ಯ ಟಿವಿ9 ಬೆಂಗಳೂರು)

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು