ಶಾಪಿಂಗ್ ಕಾಂಪ್ಲೆಕ್ಸ್‌ಗೆ ನುಗ್ಗಿದ ಲಾರಿ, ಸ್ಥಳದಲ್ಲೇ ಚಾಲಕ ಸಾವು

ಬೆಂಗಳೂರು: ಶಾಪಿಂಗ್ ಕಾಂಪ್ಲೆಕ್ಸ್‌ಗೆ ಟಿಪ್ಪರ್ ಲಾರಿ ನುಗ್ಗಿ ಚಾಲಕ ತೇಜಸ್ಸ್(32) ಮೃತಪಟ್ಟಿರುವ ಘಟನೆ ದೊಡ್ಡ ವಿದ್ಯಾರಣ್ಯಪುರ ಮುಖ್ಯರಸ್ತೆಯಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ಲಾರಿ ಮುಂಭಾಗ ನಜ್ಜುಗುಜ್ಜಾಗಿದೆ. ಲಾರಿಯಲ್ಲಿ ಸಿಲುಕಿಕೊಂಡಿದ್ದ ಕ್ಲೀನರ್‌ ಮಲ್ಲಪ್ಪ(23)ನನ್ನು ರಕ್ಷಿಸಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತದ ವೇಳೆ ಕ್ಲಿನರ್ ಮಲ್ಲಪ್ಪ ಚಾಲಕನ ಬದಲಾಗಿ ಲಾರಿ ಚಾಲನೆ ಮಾಡ್ತಿದ್ದ ಎಂದು ತಿಳಿದು ಬಂದಿದೆ. ಪೊಲೀಸರು ಮತ್ತು ಅಗ್ನಿಶಾಮಕದಳ ಸಿಬ್ಬಂದಿಯಿಂದ ಲಾರಿ ತೆರವು ಕಾರ್ಯ ನಡೆದಿದೆ. ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಶಾಪಿಂಗ್ ಕಾಂಪ್ಲೆಕ್ಸ್‌ಗೆ ನುಗ್ಗಿದ ಲಾರಿ, ಸ್ಥಳದಲ್ಲೇ ಚಾಲಕ ಸಾವು
ಸಾಧು ಶ್ರೀನಾಥ್​

Updated on: Jan 24, 2020 | 8:11 AM

ಬೆಂಗಳೂರು: ಶಾಪಿಂಗ್ ಕಾಂಪ್ಲೆಕ್ಸ್‌ಗೆ ಟಿಪ್ಪರ್ ಲಾರಿ ನುಗ್ಗಿ ಚಾಲಕ ತೇಜಸ್ಸ್(32) ಮೃತಪಟ್ಟಿರುವ ಘಟನೆ ದೊಡ್ಡ ವಿದ್ಯಾರಣ್ಯಪುರ ಮುಖ್ಯರಸ್ತೆಯಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ಲಾರಿ ಮುಂಭಾಗ ನಜ್ಜುಗುಜ್ಜಾಗಿದೆ. ಲಾರಿಯಲ್ಲಿ ಸಿಲುಕಿಕೊಂಡಿದ್ದ ಕ್ಲೀನರ್‌ ಮಲ್ಲಪ್ಪ(23)ನನ್ನು ರಕ್ಷಿಸಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಅಪಘಾತದ ವೇಳೆ ಕ್ಲಿನರ್ ಮಲ್ಲಪ್ಪ ಚಾಲಕನ ಬದಲಾಗಿ ಲಾರಿ ಚಾಲನೆ ಮಾಡ್ತಿದ್ದ ಎಂದು ತಿಳಿದು ಬಂದಿದೆ. ಪೊಲೀಸರು ಮತ್ತು ಅಗ್ನಿಶಾಮಕದಳ ಸಿಬ್ಬಂದಿಯಿಂದ ಲಾರಿ ತೆರವು ಕಾರ್ಯ ನಡೆದಿದೆ. ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us