ಕಲಬುರಗಿ: ಕೆಎಸ್ಆರ್ಟಿಸಿ ಬಸ್ ಮತ್ತು ಕಾರು ಮುಖಾಮುಖಿಯಾಗಿದ್ದು, ಕಾರ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೇಡಂ ತಾಲೂಕಿನ ಅಡಕಿ ಗ್ರಾಮದಲ್ಲಿ ನಡೆದಿದೆ.
ಈ ಅಪಘಾತದಲ್ಲಿ ಸೇಡಂ ತಾಲೂಕಿನ ಹುಡಾ ಗ್ರಾಮದ ನಿವಾಸಿ ದೇವರಾಜು (35) ಮೃತಪಟ್ಟಿದ್ದು, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡಿರುವವರನ್ನು ಸದ್ಯ ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತಕ್ಕಿಡಾದ ಕಾರು ಮತ್ತು ಬಸ್
ಬಸ್- ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು