AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಇದ್ದರೂ ಸರ್ಕಾರಿ ಕಾರನ್ನು ದುರ್ಬಳಕೆ ಮಾಡಿಕೊಂಡು ಚಾಲಕನ ಓಡಾಟ; ಕಾರನ್ನು ವಶಕ್ಕೆ ಪಡೆದ ಕಲಬುರಗಿ ಪೊಲೀಸರು

ರಾಜ್ಯಾದ್ಯಂತ ಲಾಕ್​ಡೌನ್​ ಜಾರಿಯಾಗಿದೆ. ಹೀಗಿದ್ದೂ ಸರ್ಕಾರಿ ಸೇವೆಯಲ್ಲಿದ್ದ ಕಾರನ್ನು ದುರ್ಬಳಕೆ ಮಾಡಿಕೊಂಡು ಚಾಲಕನೊಬ್ಬ ಓಡಾಡುತ್ತಿದ್ದರು. ಅನಗತ್ಯವಾಗಿ ಕುಟುಂಬಸ್ಥರ ಜೊತೆ ಓಡಾಟ ನಡೆಸಿದ ಹಿನ್ನೆಲೆ ಪಿಡಬ್ಲೂಡಿಗೆ ಸೇರಿದ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

sandhya thejappa
sandhya thejappa|

Updated on: May 22, 2021 | 2:21 PM

Share

ಕಲಬುರಗಿ: ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ರಾಜ್ಯ ಸರ್ಕಾರ ಲಾಕ್​ಡೌನ್ ವಿಧಿಸಿದೆ. ಬೇಕಾಬಿಟ್ಟಿಯಾಗಿ ಓಡಾಡಿದರೆ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಅನಗತ್ಯವಾಗಿ ಓಡಾಡುವ ಜನರಿಗೆ ದಂಡವನ್ನು ಹಾಕಿ, ವಾಹನಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ. ಪೊಲೀಸ್ ಸಿಬ್ಬಂದಿ ಯಾರಿಗೂ ಮುಲಾಜೇ ಮಾಡದೆ ತನ್ನ ಕಾರ್ಯವನ್ನು ನಿರ್ವಹಿಸುತ್ತಿದೆ. ಹೀಗೆ ಅನಗತ್ಯವಾಗಿ ಸರ್ಕಾರಿ ಕಾರು ದುರ್ಬಳಕೆ ಮಾಡಿಕೊಂಡು ಓಡಾಡುತ್ತಿದ್ದ ಚಾಲಕನಿಗೆ ಪೊಲೀಸರು ಶಾಕ್ ನೀಡಿದ್ದಾರೆ.

ರಾಜ್ಯಾದ್ಯಂತ ಲಾಕ್​ಡೌನ್​ ಜಾರಿಯಾಗಿದೆ. ಹೀಗಿದ್ದೂ ಸರ್ಕಾರಿ ಸೇವೆಯಲ್ಲಿದ್ದ ಕಾರನ್ನು ದುರ್ಬಳಕೆ ಮಾಡಿಕೊಂಡು ಚಾಲಕನೊಬ್ಬ ಓಡಾಡುತ್ತಿದ್ದರು. ಅನಗತ್ಯವಾಗಿ ಕುಟುಂಬಸ್ಥರ ಜೊತೆ ಓಡಾಟ ನಡೆಸಿದ ಹಿನ್ನೆಲೆ ಪಿಡಬ್ಲೂಡಿಗೆ ಸೇರಿದ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಘಟನೆ ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ನಡೆದಿದೆ. ಲೋಕೋಪಯೋಗಿ ಇಲಾಖೆ ಸೇವೆಯಲ್ಲಿದ್ದ ಕಾರಿನಲ್ಲಿ ಕುಟುಂಬದವರನ್ನು ಕರೆದುಕೊಂಡು ಚಾಲಕ ಹೋಗುತ್ತಿದ್ದರು. ಸರ್ಕಾರಿ ಸೇವೆಯಲ್ಲಿ ಅಂತ ಬೋರ್ಡ್ ಇದ್ದಿದ್ದರಿಂದ ಪೊಲೀಸರು ಹಿಡಿಯಲ್ಲಾ ಅಂತ ಚಾಲಕ ಓಡಾಡುತ್ತಿದ್ದರು. ಆದರೆ ಚಾಲಕನ ದುರ್ಬಳಕೆಯನ್ನು ಗಮನಿಸಿದ ಪೊಲೀಸರು ಕಾರ್ನ ಸೀಜ್ ಮಾಡಿದ್ದಾರೆ.

ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಪೊಲೀಸರು ವಾಹನಗಳ ತಪಾಸಣೆ ಮುಂದಾಗಿದ್ದರು. ಅನಗತ್ಯವಾಗಿ ಹೊರ ಬಂದವರಿಗೆ, ಮಾಸ್ಕ್ ಇಲ್ಲದೇ ಇರುವವರಿಗೆ ಪೊಲೀಸರು ದಂಡ ವಿಧಿಸಿದ್ದಾರೆ.

ಕಲಬುರಗಿ ಜಿಮ್ಸ್ ಲಸಿಕಾ ಕೇಂದ್ರದಲ್ಲಿ ಇಂದು (ಮೇ 22) ಫ್ರಂಟ್​ಲೈನ್​ ವಾರಿಯರ್ಸ್, 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ಲಸಿಕೆ ನೀಡಲಾಗುತ್ತದೆ ಎಂದು ಸಿಬ್ಬಂದಿ ತಿಳಿಸಿದೆ. 18ರಿಂದ 44 ವರ್ಷದವರೆಗೆ ಇಂದು ಕೊವಿಡ್ ಲಸಿಕೆ ಇಲ್ಲ. ಇನ್ನು ಲಸಿಕೆ ಬಾರದ ಹಿನ್ನೆಲೆಯಲ್ಲಿ ಲಸಿಕೆ ಇಲ್ಲಾ ಅಂತ ಸಿಬ್ಬಂದಿ ತಿಳಿಸಿದೆ.

ಇದನ್ನೂ ಓದಿ

ದೇಶದಲ್ಲಿ 8,840 ಮಂದಿಗೆ ಬ್ಲ್ಯಾಕ್​ ಫಂಗಸ್​: ಪ್ರಕರಣಗಳ ಆಧಾರದ ಮೇಲೆ ರಾಜ್ಯಗಳಿಗೆ ಔಷಧ ವಿತರಣೆ, ಕರ್ನಾಟಕಕ್ಕೆ 1,270 ವಯಲ್ಸ್ ಲಭ್ಯ

ಕೊವಿಡ್ ಸೋಂಕಿತರ ನೆರವಿಗೆ ನಿಂತ ಮಂಡ್ಯದ ಪುರಸಭೆ ಸದಸ್ಯೆ; ಸಹಾಯ ಹಸ್ತಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ

(Driver was driving while misusing a government car and police seized that car at kalaburagi)

Follow Us
sandhya thejappa
sandhya thejappa
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ