Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರೋನ್ ಪ್ರತಾಪ್ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯ: ಮೂರು ದಿನಗಳ ವಿಚಾರಣೆಯಲ್ಲಿ ಪೊಲೀಸರಿಗೆ ಸಿಕ್ತು ಮಹತ್ವದ ಮಾಹಿತಿ

ಡ್ರೋನ್​ ವಿವಾದದಲ್ಲಿ ಕಳೆದುಕೊಂಡಿದ್ದ ಹೆಸರನ್ನು ಬಿಗ್​ಬಾಸ್​ಗೆ ಹೋದಮೇಲೆ ಗಳಿಸಿದ್ದ ಪ್ರತಾಪ್, ಈಗ ಜೀವನಕ್ಕೆ ತಾನೇ ಮತ್ತಷ್ಟು ಮಸಿ ಬಳಿದುಕೊಂಡಿದ್ದಾನೆ. ತುಮಕೂರು ‌ಜಿಲ್ಲೆ ಮಧುಗಿರಿ ತಾಲೂಕಿನ ಜನಕಲೋಟಿ ಬಳಿ ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟಿಸಿದ್ದ ಪ್ರಕರಣವೇ ಪ್ರತಾಪ್​ಗೆ ದೊಡ್ಡ ಸಂಕಷ್ಟ ತಂದೊಡ್ಡಿದೆ. ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾಗಿದ್ದು, ಆರೋಪ ಸಾಬೀತಾದ್ರೆ ಪ್ರತಾಪ್​ಗೆ 10 ವರ್ಷ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆ ಇದೆ.

ಡ್ರೋನ್ ಪ್ರತಾಪ್ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯ: ಮೂರು ದಿನಗಳ ವಿಚಾರಣೆಯಲ್ಲಿ ಪೊಲೀಸರಿಗೆ ಸಿಕ್ತು ಮಹತ್ವದ ಮಾಹಿತಿ
ಡ್ರೋನ್ ಪ್ರತಾಪ್
Follow us
ಮಹೇಶ್ ಇ, ಭೂಮನಹಳ್ಳಿ
| Updated By: Ganapathi Sharma

Updated on: Dec 16, 2024 | 9:09 AM

ತುಮಕೂರು, ಡಿಸೆಂಬರ್ 16: ತುಮಕೂರು ‌ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಬಳಿ ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ್ದ ಪ್ರಕರಣದಿಂದ ಡ್ರೋನ್ ಪ್ರತಾಪ್​ಗೆ ದೊಡ್ಡ ಸಂಕಷ್ಟವೇ ಎದುರಾಗಿದೆ. ಡ್ರೋನ್ ಪ್ರತಾಪ್ ಈಗ ಸೋಡಿಯಂ ಪ್ರತಾಪ್ ಆಗಿದ್ದಾನೆ! ಕಳೆದ ಮೂರು ದಿನಗಳಿಂದ ಡ್ರೋನ್ ಪ್ರತಾಪ್​ನನ್ನು ಮಿಡಿಗೇಶಿ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಭಾನುವಾರ ಇಡೀ‌ ದಿನ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದ ಪೊಲೀಸರು, ಡ್ರೋನ್ ಪ್ರತಾಪ್ ಮನೆ ಕಚೇರಿ ಹಾಗೂ ಸೋಡಿಯಂ ಖರೀದಿಸಿದ್ದ ಅಂಗಡಿಯಲ್ಲಿ ಮಹಜರ್ ಮಾಡಿದ್ದಾರೆ. ಜೊತೆಗೆ ವಿಡಿಯೋ ಚಿತ್ರಿಕರಿಸಿದ್ದ ಕ್ಯಾಮರಾಮನ್ ವಿನಯ್ ಹಾಗೂ ಸೋಡಿಯಂ ಖರೀದಿಗೆ ಸಹಕಾರ ‌ನೀಡಿದ್ದ ಪ್ರಜ್ವಲ್​ನನ್ನೂ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಡ್ರೋನ್ ಪ್ರತಾಪ್​ನನ್ನು ಪೊಲೀಸರು ಭಾನುವಾರ ಬೆಂಗಳೂರಿನ ‌ಕೊತ್ತನೂರು, ಜೆಪಿನಗರ ಹಾಗೂ ಅವೆನ್ಯೂ ರೋಡ್​ಗೆ ಕರೆದುಕೊಂಡು ಹೋಗಿ ಮಹಜರ್ ಮಾಡಿಕೊಂಡು ಬಂದಿದ್ದಾರೆ. ಡ್ರೋನ್ ಪ್ರತಾಪ್ ವಾಸವಿದ್ದ ಮನೆ ಕಚೇರಿ ಹಾಗೂ ಜೆಪಿನಗರದಲ್ಲಿ ಬ್ಲಾಸ್ಟ್ ಬಗ್ಗೆ ಚಿತ್ರೀಕರಿಸಿದ್ದ ಕ್ಯಾಮರಾ ವಶಕ್ಕೆ ಪಡೆದಿದ್ದಾರೆ. ಜೆಪಿ ನಗರದಲ್ಲಿ ಸಂಜು ಎಂಬುವರ ಮನೆಯಲ್ಲಿ ಕ್ಯಾಮರಾ ವಶಕ್ಕೆ ಪಡೆದಿದ್ದಾರೆ. ಬಳಿಕ ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿರುವ ‘ವಾಸ ಸೈಂಟಿಫಿಕ್ ಶಾಪ್’ಗೆ ತೆರಳಿ ಮಹಜರು ಮಾಡಿದ್ದಾರೆ.

ಸೋಡಿಯಂ ಖರೀದಿ ಮಾಡಿದ್ಹೇಗೆ ಡ್ರೋನ್ ಪ್ರತಾಪ್?

‘ವಾಸ ಸೈಂಟಿಫಿಕ್ ಶಾಪ್’ ಕಳೆದ 75 ವರ್ಷಗಳಿಂದ ಅಧಿಕೃತವಾಗಿ ಸೋಡಿಯಂ ವಿತ್ ಕೆಮಿಕಲ್ ಮಾರಾಟ ಮಾಡುವ ಅಂಗಡಿಯಾಗಿದೆ. ಶಾಲಾ ಕಾಲೇಜುಗಳಿಗೂ ಮೆಡಿಕಲ್ ಕಾಲೇಜುಗಳ ಲ್ಯಾಬ್​ಗಳಿಗೂ ಸೋಡಿಯಂ ಮಾರಾಟ ಮಾಡುವ ಅಂಗಡಿ ಇದಾಗಿದೆ. ಇಲ್ಲಿಂದ ಡ್ರೋನ್ ಪ್ರತಾಪ್ ತನ್ನ ಸ್ನೇಹಿತ ಪ್ರಜ್ವಲ್ ಮೂಲಕ ಸೋಡಿಯಂ ಖರೀದಿ ಮಾಡಿದ್ದ ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ.

ತಡರಾತ್ರಿಯೇ‌ ಮಿಡಿಗೇಶಿ ಪೊಲೀಸರು ಕ್ಯಾಮರಾಮನ್ ವಿನಯ್ ‌ಹಾಗೂ ಮತ್ತೊಬ್ಬ ಸ್ನೇಹಿತ ಪ್ರಜ್ವಲ್​​ನನ್ನು ಬಂಧಿಸಿ ಸಂಪೂರ್ಣ ವಿಚಾರಣೆ ನಡೆಸುತ್ತಿದ್ದಾರೆ. ಜಿತೇಂದ್ರ ಕುಮಾರ್ ಜೈನ್​​ಗೆ ಪೊಲೀಸರು ‌ನೋಟಿಸ್ ನೀಡಲು ಸಿದ್ಧತೆ ಮಾಡಿದ್ದು, ಅವರನ್ನೂ ಬಂಧಿಸುವ ಸಾಧ್ಯತೆ ಇದೆ.

ಪೊಲೀಸ್ ಕಸ್ಟಡಿ ಅಂತ್ಯ

ಇಂದಿಗೆ ಪೊಲೀಸ್ ಕಸ್ಟಡಿ ಅಂತ್ಯವಾಗಲಿದ್ದು, ಬೆಳಿಗ್ಗೆ 11.30 ಕ್ಕೆ ಮಧುಗಿರಿ ನ್ಯಾಯಾಲಯಕ್ಕೆ ಡ್ರೋನ್ ಪ್ರತಾಪ್, ಕ್ಯಾಮರಾಮನ್ ವಿನಯ್ ಹಾಗೂ ಪ್ರಜ್ವಲ್​ರನ್ನು ಹಾಜರು ಪಡಿಸಲಾಗುತ್ತಿದೆ. ಸದ್ಯಕ್ಕೆ ಒಂದು ತಿಂಗಳ ವರೆಗೂ ಜಾಮೀನು ಸಿಗುವುದು ಅನುಮಾನ ಎನ್ನಲಾಗಿದೆ.

ಇದನ್ನೂ ಓದಿ: ಅತ್ತ ದರ್ಶನ್, ಅಲ್ಲು ಅರ್ಜುನ್​ಗೆ ಬೇಲ್, ಇತ್ತ ಡ್ರೋನ್ ಪ್ರತಾಪ್ ಪೊಲೀಸ್ ಕಸ್ಟಡಿಗೆ

Explosive substance act 1908 ಹಾಗೂ ಸೆಕ್ಸನ್ 3 ಜೊತೆಗೆ BNS 288 ಅಡಿ ಎಫ್​ಐಆರ್ ದಾಖಲಾಗಿದ್ದು, ಆರೋಪ ಸಾಬೀತಾದರೆ ಡ್ರೋನ್ ಪ್ರತಾಪ್ ಕನಿಷ್ಠ 10 ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಬಹುದು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?