AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಮನಸ್ಸಿಗೆ ಮುದ ನೀಡುತ್ತಿದ್ದ ಕೊಕ್ಕರೆಗಳ ನೆಲೆವೀಡು ಬೆಳ್ಳೂರು ಪಕ್ಷಿಧಾಮ ಖಾಲಿ ಖಾಲಿ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿರುವ ವಿಶ್ವಮಾನ್ಯತೆ ಪಡೆದ ಕೊಕ್ಕರೆ ಬೆಳ್ಳೂರು ಪಕ್ಷಿಧಾಮ ಇದೀಗ ಪಕ್ಷಿಗಳಲ್ಲದೇ ಖಾಲಿ ಖಾಲಿ ಆಗಿದೆ. ಈ ಬಾರಿ ಭೀಕರ ಬರದಿಂದಾಗಿ ಪಕ್ಷಿಧಾಮದತ್ತ ವಿಶೇಷವಾದ ಕೊಕ್ಕರೆಗಳು ಮುಖ ಮಾಡಿಲ್ಲ. ಭೀಕರ ಬರ, ಆಹಾರ ಸಿಗದ ಹಿನ್ನೆಲೆಯಲ್ಲಿ ಈ ಬಾರಿ ಪಕ್ಷಿಧಾಮದತ್ತ ಕೊಕ್ಕರೆಗಳು ಮುಖ ಮಾಡುತ್ತಿಲ್ಲ. ಇದು ಪಕ್ಷಿ ಪ್ರಿಯರಿಗೆ ಆತಂಕ ಮೂಡಿಸಿದೆ.

ಮಂಡ್ಯ: ಮನಸ್ಸಿಗೆ ಮುದ ನೀಡುತ್ತಿದ್ದ ಕೊಕ್ಕರೆಗಳ ನೆಲೆವೀಡು ಬೆಳ್ಳೂರು ಪಕ್ಷಿಧಾಮ ಖಾಲಿ ಖಾಲಿ
ಮನಸ್ಸಿಗೆ ಮುದ ನೀಡುತ್ತಿದ್ದ ಕೊಕ್ಕರೆಗಳ ನೆಲೆವೀಡು ಬೆಳ್ಳೂರು ಪಕ್ಷಿಧಾಮ ಖಾಲಿ ಖಾಲಿ
ಪ್ರಶಾಂತ್​ ಬಿ.
| Updated By: ಗಂಗಾಧರ​ ಬ. ಸಾಬೋಜಿ|

Updated on: May 23, 2024 | 10:50 PM

Share

ಮಂಡ್ಯ, ಮೇ 23: ಸಕ್ಕರಿನಗರಿ ಮಂಡ್ಯ. ಹಲವು ವೈಶಿಷ್ಟತೆಗಳನ್ನ ಹೊಂದಿರುವ ಜಿಲ್ಲೆ. ಅದರಲ್ಲೂ ಜಿಲ್ಲೆಯಲ್ಲಿರೋ ಕೊಕ್ಕರೆ ಬೆಳ್ಳೂರಿನ ಪಕ್ಷಿಧಾಮ (Kokkarebellur Bird Sanctuary), ಉದ್ದ ಕೊಕ್ಕಿನ ವಿಶೇಷವಾದ ಕೊಕ್ಕರೆಗಳ ಆವಾಸ ಸ್ಥಾನ. ಆದರೆ ಭೀಕರ ಬರ (drought), ಆಹಾರ ಸಿಗದ ಹಿನ್ನೆಲೆಯಲ್ಲಿ ಈ ಬಾರಿ ಪಕ್ಷಿಧಾಮದತ್ತ ಕೊಕ್ಕರೆಗಳು ಮುಖ ಮಾಡಿಲ್ಲ. ಇದು ಪಕ್ಷಿ ಪ್ರಿಯರ ಆತಂಕಕ್ಕೂ ಕೂಡ ಕಾರಣವಾಗಿದೆ. ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಕೊಕ್ಕರೆ ಬೆಳ್ಳೂರು ಪಕ್ಷಿಧಾಮವಿದೆ.

ಈ ಬಾರಿ ಭೀಕರ ಬರದಿಂದಾಗಿ ಪಕ್ಷಿಧಾಮದತ್ತ ವಿಶೇಷವಾದ ಕೊಕ್ಕರೆಗಳು ಮುಖ ಮಾಡಿಲ್ಲ. ಅಂದಹಾಗೆ ಹೆಜ್ಜಾರ್ಲೆ, ಬಣ್ಣದ ಕೊಕ್ಕರೆ ಸೇರಿ ವಿವಿಧ ತಳಿಯ ಸಾವಿರಾರು ಪಕ್ಷಿಗಳು ಇಲ್ಲಿಗೆ ಬಂದು ಕೆಲ ತಿಂಗಳಗಳ ಕಾಲ ಇದ್ದು, ಮರಿಮಾಡಿ ವಾಪಾಸ್ ತೆರಳುತ್ತವೆ. ಅದರಲ್ಲೂ ಹೆಜ್ಜಾರ್ಲೆ ಕೊಕ್ಕರೆಗಳು ಅಕ್ಟೋಬರ್ ತಿಂಗಳಲ್ಲಿ ಬಂದು ಮುಂದಿನ ವರ್ಷ ಜೂನ್ ವೇಳೆಗೆ ವಾಪಾಸ್​ ಹೋಗುತ್ತವೆ.

ಪಕ್ಷಿ ಪ್ರಿಯರಲ್ಲಿ ಆತಂಕ

ಅದೇ ರೀತಿ ಬಣ್ಣದ ಕೊಕ್ಕರೆಗಳು ಜನವರಿ ತಿಂಗಳಲ್ಲಿ ಬಂದು ಜೂನ್ ತಿಂಗಳಲ್ಲಿ ವಾಪಸ್ ಹೋಗುತ್ತವೆ. ಆದರೆ ಈ ಬಾರಿ ಭೀಕರ ಬರ ಹಿನ್ನೆಲೆಯಲ್ಲಿ ಜಲಾಶಯ, ನದಿ, ಕೆರೆಗಳು ಬರಿದಾಗಿವೆ. ಕೊಕ್ಕರೆಗಳಿಗೆ ಬೇಕಾಗಿರುವ ಆಹಾರ (ಮೀನು) ಸಿಗುತ್ತಿಲ್ಲ. ಹೀಗಾಗಿ ಈ ಬಾರಿ ಅಷ್ಟಾಗಿ ಪಕ್ಷಿಗಳು ಕೊಕ್ಕರೆ ಬೆಳ್ಳೂರು ಪಕ್ಷಿಧಾಮದತ್ತ ಮುಖ ಮಾಡಿಲ್ಲ. ಇದು ಪಕ್ಷಿ ಪ್ರಿಯರ ಆತಂಕಕ್ಕೂ ಕೂಡ ಕಾರಣವಾಗಿದೆ.

ಇದನ್ನೂ ಓದಿ: ಬೆಳೆ ಇಲ್ಲದಿದ್ರೂ ಉತ್ತಮ ಬೆಲೆ: ಮಂಡ್ಯದಲ್ಲಿ ಎಳನೀರಿಗೆ ಫುಲ್ ಡಿಮ್ಯಾಂಡ್

ಅಂದಹಾಗೆ ಕೊಕ್ಕರೆಬೆಳ್ಳೂರು ಪಕ್ಷಿಧಾಮ 772 ಎಕರೆ ವ್ಯಾಪ್ತಿಗೆ ಬರುತ್ತವೆ. ವಿದೇಶ ಸೇರಿದಂತೆ ವಿವಿಧ ಕಡೆಗಳಿಂದ ಬರುವ ಕೊಕ್ಕರೆಗಳು ಗ್ರಾಮದ ಸುತ್ತಮುತ್ತ ಇರುವ ಮರಗಳಲ್ಲಿ ವಾಸ ಮಾಡಿ, ಮರಿ ಮಾಡಿ, ಮರಿಗಳೊಂದಿಗೆ ವಾಪಾಸ್ ತೆರಳುತ್ತವೆ. ಆದರೆ ಇತ್ತೀಚಿಗೆ ಆ ವ್ಯಾಪ್ತಿಯಲ್ಲಿ ಮರಗಳ ಸಂಖ್ಯೆ ಕೂಡ ಗಣನೀಯವಾಗಿ ಕಡಿಮೆ ಆಗುತ್ತಿವೆ.

ಅಲ್ಲದೆ ಪಕ್ಷಿಧಾಮ ವ್ಯಾಪ್ತಿಗೆ ಬರುವ ನದಿಯಲ್ಲಿ ಆಕ್ರಮವಾಗಿ ಮರಳುಗಾರಿಕೆ ಕೂಡ ನಡೆಯುತ್ತಿವೆ. ಇದರಿಂದ ಪ್ರಮುಖವಾಗಿ ಕೊಕ್ಕರೆಗಳ ಆಹಾರವಾಗಿರೋ ಮೀನುಗಳು ಕೂಡ ಸಿಗುತ್ತಿಲ್ಲ ಜೊತೆಗೆ ಪಕ್ಷಿಧಾಮ ವ್ಯಾಪ್ತಿಯಲ್ಲಿ ಆಕ್ರಮವಾಗಿ ಮೀನುಗಾರಿಕೆ ಕೂಡ ನಡೆಯುತ್ತಿದೆ. ಇದರಿಂದ ಪಕ್ಷಿಗಳಿಗೆ ಆಹಾರವೇ ಸಿಗುತ್ತಿಲ್ಲ.

ಇದನ್ನೂ ಓದಿ: ಮಂಡ್ಯ: ಆಧುನೀಕರಣ ಹೆಸರಲ್ಲಿ ನಾಲೆಗಳಿಗೆ ಹರಿಯದ ನೀರು; ಕಾಮಗಾರಿ ವಿಳಂಬಕ್ಕೆ ರೈತರ ಆಕ್ರೋಶ

ಈ ಬಗ್ಗೆ ಗಮನಹರಿಸಬೇಕಾದ ಸರ್ಕಾರ, ಜಿಲ್ಲಾಡಳಿತ, ಅರಣ್ಯ ಇಲಾಖೆ ಕಣ್ಣು ಮುಚ್ಚಿ ಕುಳಿತಿದೆ. ಇದರಿಂದಾಗಿ ವಲಸೆ ಬರುವ ಪಕ್ಷಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆ ಆಗುತ್ತಿದೆ. ಹೀಗಾಗಿ ಈ ಬಗ್ಗೆ ಸರ್ಕಾರ ಗಮನಹರಿಸಬೇಕೆಂದು ಸ್ಥಳೀಯರು ಕೂಡ ಒತ್ತಾಯ ಮಾಡುತ್ತಿದ್ದಾರೆ. ಭೀಕರ ಬರ, ಆಹಾರ ಸಿಗದ ಹಿನ್ನೆಲೆಯಲ್ಲಿ ಕೊಕ್ಕರೆ ಬೆಳ್ಳೂರು ಪಕ್ಷಿಧಾಮದತ್ತ ಕೊಕ್ಕರೆಗಳು ಮುಖಮಾಡುತ್ತಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಈ ಬಗ್ಗೆ ಸೂಕ್ತ ಕ್ರಮವಹಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ