AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕರ್ನಾಟಕದಲ್ಲಿ ಅತಿವೃಷ್ಠಿ, ಬರಗಾಲ: ಬೇಳೆಕಾಳುಗಳ ಬೆಲೆ ಏರಿಕೆ, ಕೆಜಿ ತೊಗರಿಗೆ 180 ರೂ.

ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗದೆ ಸಂಕಷ್ಟ ಎದುರಾಗಿದೆ. ನೀರಲ್ಲದೆ ಬೆಳೆಗಳು ಒಣಗುತ್ತಿವೆ. ರಾಜ್ಯದ 161 ತಾಲೂಕುಗಳಲ್ಲಿ ಬರಗಾಲ ಆವರಿಸಿದೆ. ಇದರಿಂದ ಸಿರಿಧ್ಯಾನ್ಯಗಳ ಬೆಲೆ ಗಗನಕ್ಕೆ ಏರಿದೆ. ಈ ಬೆಲೆ ಏರಿಕೆಯ ಬಿಸಿ ಬೆಂಗಳೂರಿನ ಜನರಿಗೆ ತಟ್ಟಿದೆ.

ಉತ್ತರ ಕರ್ನಾಟಕದಲ್ಲಿ ಅತಿವೃಷ್ಠಿ, ಬರಗಾಲ: ಬೇಳೆಕಾಳುಗಳ ಬೆಲೆ ಏರಿಕೆ, ಕೆಜಿ ತೊಗರಿಗೆ 180 ರೂ.
ಬೇಳೆಕಾಳು
Vinay Kashappanavar
| Edited By: |

Updated on:Oct 25, 2023 | 10:20 AM

Share

ಬೆಂಗಳೂರು ಅ.25: ಉತ್ತರ ಕರ್ನಾಟಕ (North Karnataka) ಜಿಲ್ಲೆಗಳಲ್ಲಿ ಅತಿವೃಷ್ಠಿ, ಬರಗಾಲ (Drought) ಹಿನ್ನೆಲೆಯಲ್ಲಿ ಬೇಳೆಕಾಳುಗಳ ಇಳುವರಿ ಕುಸಿತ ಕಂಡಿದೆ. ಬೆಂಗಳೂರಿಗೆ (Bengaluru) ಬರುತ್ತಿದ್ದ ಸಾಕಷ್ಟು ದಿನಸಿ ಸಮಾಗ್ರಿಗಳ ಪ್ರಮಾಣ ಕಡಿಮೆಯಾಗಿದೆ. ಹೀಗಾಗಿ ತೊಗರಿ ಬೇಳೆ, ಹೆಸರು ಬೇಳೆ, ಜೋಳ, ಉದ್ದಿನ ಬೇಳೆ, ಅಕ್ಕಿ ಸೇರಿದಂತೆ ಆಹಾರಧಾನ್ಯಗಳ ಬೆಲೆ ಹೆಚ್ಚಳವಾಗಿದೆ. 2021-22ರ ರಲ್ಲಿ ಆಹಾರಧಾನ್ಯಗಳು 143.68 ಲಕ್ಷ ಟನ್ ಉತ್ಪಾದನೆಯಾಗಿದ್ದರೇ, ಈ ವರ್ಷ 2022-23ರ ರಲ್ಲಿ ಆಹಾರ ಧಾನ್ಯಗಳು 135.48 ಲಕ್ಷ ಟನ್ ಉತ್ಪಾದನೆಗೆ ಕುಸಿತ ಕಂಡಿದೆ.

ಬೇಳೆಕಾಳುಗಳ ದರ ಶೇ 20 ರಿಂದ 25 ರಷ್ಟು ಏರಿಕೆಯಾಗಿದೆ. ಅಗತ್ಯ ದಿನಸಿ ಸಮಾಗ್ರಿಗಳ ಬೇಲೆ ಡಿಸೆಂಬರ್ ಬಳಿಕ ಮತಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ತೊಗರಿ, ಹೆಸರು, ಉದ್ದು, ಕಡಲೆ, ಗೋಧಿ, ಅಕ್ಕಿ ಸೇರಿದಂತೆ ಹಲವು ಪದಾರ್ಥಗಳ ಬೆಲೆ ಶೇ.30ರಷ್ಟು ಏರಿಕೆ ಕಂಡಿದೆ. ಮುಂದಿನ ದಿನಗಳಲ್ಲಿ ಇದು ದುಪ್ಪಟ್ಟಾಗುವ ಸಾಧ್ಯತೆ ಇದೆ. ಇದರಿಂದ ಸಿಲಿಕಾನ್ ಸಿಟಿ ಜನರಿಗೆ ಬಿಗ್ ಟೆನ್ಷನ್ ಶುರುವಾಗಿದೆ.

ಇದನ್ನೂ ಓದಿ: ಅಕಾಲಿಕ ಮಳೆ, ಬರಗಾಲದಿಂದ ದ್ವಿದಳ ಧಾನ್ಯ ಇಳುವರಿಗೆ ಭಾರಿ ಹೊಡೆತ; ಕಂಗಾಲ ಆದ ರೈತರು

ಸಿರಿಧಾನ್ಯ ಬೆಲೆ ಏರಿಕೆ
ಧಾನ್ಯಗಳು ಕೆಜಿ ಇಂದಿನ ದರ (ರೂ) 3 ತಿಂಗಳ ಹಿಂದಿನ ದರ (ರೂ)
ತೊಗರಿ ಬೇಳೆ 175 – 180 115 -120
ಹೆಸರು ಬೇಳೆ 138 – 140 98 – 100
ಕಡಲೇ ಕಾಳು 90 – 92 70 – 73
ಬಟಾಣಿ 110 – 115 80 – 85
ಮಸೂರು ದಾಲ್ 110 – 115 90 – 95
ಕಡಲೇ ಬೇಳೆ 105 – 108 80 – 85
ಉದ್ದಿನ ಬೇಳೆ 138 – 140 110 – 115
ಗೋದಿ 39 – 40 33 – 35
ಸೋನಾ ಸ್ಟಿಮ್ ಅಕ್ಕಿ 52 46
ಡಿಲ್ಯಾಕ್ಸ್ ಸೋನಾ 72 68 – 70
ಜೊಳ 65 – 70 40 – 45
ರಾಗಿ 45 38
ಗೋದಿ ಹಿಟ್ಟು ಲೂಸ್ 38 35
ರಾಗಿ ಹಿಟ್ಟು 42 37
ಸಕ್ಕರೆ 41 39 – 40

ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗದೆ ಸಂಕಷ್ಟ ಎದುರಾಗಿದೆ. ನೀರಲ್ಲದೆ ಬೆಳೆಗಳು ಒಣಗುತ್ತಿವೆ. ರಾಜ್ಯದ 161 ತಾಲೂಕುಗಳಲ್ಲಿ ಬರಗಾಲ ಆವರಿಸಿದೆ. ಇದರಿಂದ ಸಿರಿಧ್ಯಾನ್ಯಗಳ ಬೆಲೆ ಗಗನಕ್ಕೆ ಏರಿದೆ. ಈ ಬೆಲೆ ಏರಿಕೆಯ ಬಿಸಿ ಬೆಂಗಳೂರಿನ ಜನರಿಗೆ ತಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:10 am, Wed, 25 October 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು