AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ ಹೆಚ್ಚಾಗಬಹುದು: ಕುಡಿಯುವ ನೀರು, ಮೇವು ಸಿದ್ಧತೆಗೆ ಡಿಸಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

ಬೆಂಗಳೂರಿನಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾತನಾಡಿದ್ದು, ಬರದ ಪರಿಸ್ಥಿತಿ ಇಷ್ಟು ದಿನ ಹತೋಟಿಯಲ್ಲಿ ಇತ್ತು. ಇನ್ನು ಮುಂದೆ ಇನ್ನಷ್ಟು ಸಮಸ್ಯೆ ಆಗಬಹುದು. ಯಾವುದಾದರೂ ಊರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಂದರೆ 24 ಗಂಟೆ ಒಳಗೆ ವ್ಯವಸ್ಥೆ ಮಾಡಲು ಸಿಎಂ ಸಿದ್ದರಾಮಯ್ಯ ಗಡುವು ನೀಡಿದ್ದಾರೆ. ಕುಡಿಯುವ ನೀರು, ಮೇವು ನೋಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಬರ ಹೆಚ್ಚಾಗಬಹುದು: ಕುಡಿಯುವ ನೀರು, ಮೇವು ಸಿದ್ಧತೆಗೆ ಡಿಸಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ
ಕಂದಾಯ ಸಚಿವ ಕೃಷ್ಣ ಬೈರೇಗೌಡ
ಪ್ರಸನ್ನ ಗಾಂವ್ಕರ್​
| Edited By: |

Updated on: Mar 01, 2024 | 5:15 PM

Share

ಬೆಂಗಳೂರು, ಮಾರ್ಚ್​ 1: ಬರದ ಪರಿಸ್ಥಿತಿ ಇಷ್ಟು ದಿನ ಹತೋಟಿಯಲ್ಲಿ ಇತ್ತು. ಇನ್ನು ಮುಂದೆ ಇನ್ನಷ್ಟು ಸಮಸ್ಯೆ ಆಗಬಹುದು. ಯಾವುದಾದರೂ ಊರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಂದರೆ 24 ಗಂಟೆ ಒಳಗೆ ವ್ಯವಸ್ಥೆ ಮಾಡಲು ಸಿಎಂ ಸಿದ್ದರಾಮಯ್ಯ ಗಡುವು ನೀಡಿದ್ದಾರೆ. ಕುಡಿಯುವ ನೀರು, ಮೇವು ನೋಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಹೇಳಿದ್ದಾರೆ. ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯತ್​ ಮಟ್ಟದಲ್ಲಿ ಟ್ಯಾಂಕರ್​ಗಳ ಟೆಂಡರ್​​​ ಮಾಡಿಟ್ಟುಕೊಳ್ಳಲು ಸೂಚಿಸಿದೆ. ಟ್ಯಾಂಕರ್​ ನೀರಿನಿಂದ ಜನರಿಗೆ ನೀರು ಸರಬರಾಜು ಮಾಡಿದರೆ ಸಮಾಧಾನ ಇಲ್ಲ. ಹಾಗಾಗಿ ಖಾಸಗಿ ಬೋರ್​​ವೆಲ್​​ ಮೂಲಕ ನೀರು ಪೂರೈಕೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

991 ಪರವಾನಗಿ ಸರ್ವೆಯರ್​​ಗಳನ್ನು ಎಲ್ಲ ಜಿಲ್ಲೆಗಳಿಗೆ ಒದಗಿಸುತ್ತಿದ್ದೇವೆ. 364 ಸರ್ಕಾರಿ ಸರ್ವೆಯರ್ ನೇಮಕಾತಿ ಮಾಡುತ್ತಿದ್ದೇವೆ. ಮೇಲುಸ್ತುವಾರಿಗೆ 27 ಸರ್ವೆ ಅಸಿಸ್ಟಂಟ್ ಲ್ಯಾಂಡ್ ರೆಕಾರ್ಡ್ಸ್​​ಗಳ ನೇಮಕ ಮಾಡುತ್ತಿದ್ದೇವೆ. ಆಧುನಿಕ ಸರ್ವೆ ಉಪಕರಣಗಳ ಖರೀದಿ ಮಾಡಿ ಎಲ್ಲ ತಾಲೂಕುಗಳಿಗೆ ನೀಡುತ್ತಿದ್ದೇವೆ. 18 ಕೋಟಿ ರೂ. ವೆಚ್ಚದಲ್ಲಿ ಸರ್ವೆ ರೋವರ್ ಉಪಕರಣಗಳ ನೀಡಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

ಆಕಾರ್ ಬಂದ್ ಡಿಜಿಟಲೈಸೇಷನ್ ಮಾಡುವುದಕ್ಕೆ ಸೂಚನೆ ನೀಡಲಾಗಿದೆ. 65 ಲಕ್ಷ ರೂ. ಆರ್​ಟಿಸಿಯ ಆಕಾರ್ ಬಂದ್ ಡಿಜಿಟಲೈಸ್ ಮಾಡುವುದಕ್ಕೆ ಎರಡು ತಿಂಗಳಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. 66 ಸಾವಿರ ಸರ್ಕಾರಿ ಸರ್ವೆ ನಂಬರ್​ಗಳಲ್ಲಿ ಭೂಮಂಜುರಾತಿ ಆಗಿದೆ. ದುರಸ್ಥಿಗೆ ಇನ್ನೂ ಲಕ್ಷಾಂತರ ಪ್ರಕರಣ ಬಾಕಿ ಇರಬಹುದು. 66 ಸಾವಿರ ಸರ್ವೆ ಮಂಜೂರಾಗಿದ್ದು ಕನಿಷ್ಟ 20 ಸಾವಿರ ಸರ್ವೆ ನಂಬರ್​​ಗೆ ಒನ್ ಟು ಫೈವ್ ನಮೂನೆ ಮಾಡಬೇಕು. ಒನ್ ಟು ಫೈವ್ ಅಂದರೆ ಮುಂದೆ ಆಕಾರ್ ಬಂದ್ ಸೇರಿ ಎಲ್ಲ ಸರ್ವೆ ಕೆಲಸ ಸರಳವಾಗಲಿದೆ.

ಯಾದಗಿರಿ ನಗರದಲ್ಲೂ ಉಂಟಾದ ಕುಡಿಯುವ ನೀರಿನ ಸಮಸ್ಯೆ 

ಯಾದಗಿರಿ: ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ನಗರದ ಅಂಬೇಡ್ಕರ್ ಬಡಾವಣೆಯ ಜನ ಹನಿ ನೀರಿಗಾಗಿ ಪರದಾಡುತ್ತಿದ್ದಾರೆ. ಬಿಂದಿಗೆ ಹಿಡಿದು ನೀರಿಗಾಗಿ ಜನ ಪರದಾಡುತ್ತಿದ್ದಾರೆ. ಪಕ್ಕದಲ್ಲೇ ಭೀಮಾ ನದಿ ಇದ್ದರೂ ನಗರದ ಜನರಿಗೆ ಕುಡಿಯಲು ನೀರು ಸಿಗುತ್ತಿಲ್ಲ. ವಾರಕ್ಕೆ ಒಂದು ಬಾರಿ ನೀರು ಬರುತ್ತೆ. ನೀರಿಗಾಗಿ ಮಹಿಳೆಯರು ಕಚ್ಚಾಡುವಂತಾಗಿದೆ.

ಇದನ್ನೂ ಓದಿ: ಎಫ್ ಎಸ್ ಎಲ್ ವರದಿ ಸಲ್ಲಿಕೆಯಾದ ಕೂಡಲೇ ಅದನ್ನು ಸಾರ್ವಜನಿಕಗೊಳಿಸಲಾಗುವುದು: ಸಿದ್ದರಾಮಯ್ಯ

ಖಾಲಿ ಬಿಂದಿಗೆ ಹಿಡಿದು ನೀರಿಗಾಗಿ ಮಹಿಳೆಯರು ಆಗ್ರಹಿಸುತ್ತಿದ್ದಾರೆ. ಒಂದು ಬಡಾವಣೆಯಿಂದ ಇನ್ನೊಂದು ಬಡಾವಣೆಗೆ ಹೋಗಿ‌ ನೀರು ತರಬೇಕಾಗಿದೆ. ಆ ಬಡಾವಣೆಯ ಜನ ಕೊಟ್ಟರೆ ಮಾತ್ರ ನೀರು ತರಬೇಕು ಇಲ್ಲದೆ ಇಲ್ಲ. ಬೆಳಗ್ಗೆ ಎದ್ದು ಮಕ್ಕಳು ಹಿರಿಯರು ಸೇರಿ ನೀರು ತರುವುದಕ್ಕೆ ಹೋಗಬೇಕಾಗಿದೆ. ನಗರಸಭೆ ಅಧಿಕಾರಿಗಳ ವಿರುದ್ಧ ಮಹಿಳೆಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು