AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಮೆಡಿಕಲ್​ ಶಾಪ್​ನಲ್ಲಿ ಡ್ರಗ್ಸ್ ಮಾರಾಟ: ಮಹಿಳೆ ಗಂಭೀರ ಆರೋಪ, ಜಿ.ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರಿನಲ್ಲಿ ಮೆಡಿಕಲ್‌ ಅಂಗಡಿಗಳಲ್ಲಿ ಮಾದಕ ವಸ್ತುಗಳು ಮತ್ತು ಮಾತ್ರೆಗಳು ಸುಲಭವಾಗಿ ಲಭ್ಯವಿದ್ದು, ಇದರಿಂದ ಬಡ ಮಕ್ಕಳು ವ್ಯಸನಕ್ಕೆ ಒಳಗಾಗುತ್ತಿದ್ದಾರೆ ಎಂದು ಓರ್ವ ಮಹಿಳೆ ಆರೋಪಿಸಿದ್ದಾರೆ. ಇನ್ನು ಮೈಸೂರಿನಲ್ಲಿ ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮೆಡಿಕಲ್​ ಶಾಪ್​ಗಳಲ್ಲಿ ಮಾತ್ರೆಗಳ ಮೂಲಕ ಡ್ರಗ್ಸ್ ಮಾರಾಟ ಮಾಡಲಾಗುತ್ತಿದೆ ಎಂದಿದ್ದಾರೆ.

ಬೆಂಗಳೂರಿನ ಮೆಡಿಕಲ್​ ಶಾಪ್​ನಲ್ಲಿ ಡ್ರಗ್ಸ್ ಮಾರಾಟ: ಮಹಿಳೆ ಗಂಭೀರ ಆರೋಪ, ಜಿ.ಪರಮೇಶ್ವರ್ ಹೇಳಿದ್ದೇನು?
ಬೆಂಗಳೂರಿನ ಮೆಡಿಕಲ್​ ಶಾಪ್​ನಲ್ಲಿ ಡ್ರಗ್ಸ್ ಮಾರಾಟ: ಮಹಿಳೆ ಗಂಭೀರ ಆರೋಪ, ಜಿ.ಪರಮೇಶ್ವರ್ ಹೇಳಿದ್ದೇನು?
ರಾಚಪ್ಪಾಜಿ ನಾಯ್ಕ್
| Edited By: |

Updated on:Nov 18, 2024 | 1:48 PM

Share

ಬೆಂಗಳೂರು, ನವೆಂಬರ್​ 18: ನಗರದಲ್ಲಿ ಮೆಡಿಕಲ್​ಗಳಲ್ಲಿ ಮಾದಕ ವಸ್ತು (Drugs), ಮತ್ತು ಬರುವ ಟ್ಯಾಬ್ಲೆಟ್, ಸಿರಿಂಜ್​​ ಲಭ್ಯವಾಗುತ್ತಿವೆ. ಇದರಿಂದ ಬಡ ಮಕ್ಕಳು ದಾರಿ ತಪ್ಪುತ್ತಿದ್ದಾರೆ. ಪೊಲೀಸರು ಸೂಕ್ತ ಕ್ರಮ ತರಗೆದುಕೊಳ್ಳುತ್ತಿಲ್ಲ. ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಓರ್ವ ಮಹಿಳೆ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಮಹಿಳೆ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ.

ಸರ್ಕಾರ ವಿರುದ್ಧ ಮಹಿಳೆ ಕಿಡಿ

ಬೆಂಗಳೂರಿನ ತಿಲಕ್​ ನಗರ, ಆರಭ್ ನಗರ, ಬಿಸ್ಲಿಲ್ಲಾನಗರ, ಗೊರಂಪನ್​ಪಾಳ್ಯಾ, ಸಿದ್ದಾಪುರ, 9 ಬ್ಲಾಕ್ ಸುತ್ತಾನ್​ಪುರ್​ ನಗರದಲ್ಲಿ ಡ್ರಗ್ಸ್ ಮಾರಾಟ ಮಾಡಲಾಗುತ್ತಿದೆ ಎಂದು ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಅಂಚೆ ಇಲಾಖೆ ಮೂಲಕ ಬೆಂಗಳೂರಿಗೆ ಬರ್ತಾಯಿದೆ ವಿದೇಶಿ ಡ್ರಗ್ಸ್​: 21 ಕೋಟಿ ರೂ ಮೌಲ್ಯದ ಡ್ರಗ್ಸ್ ವಶಕ್ಕೆ

ಮಕ್ಕಳು ಗಾಂಜಾ ಸೇವನೆ ಮಾಡುತ್ತಿದ್ದಾರೆ. ಮೆಡಿಕಲ್​ನಿಂದ ಮತ್ತು ಬರುವ ಟ್ಯಾಬ್ಲೆಟ್ ತೆಗೆದು ಸೇವನೆ ಮಾಡುತ್ತಿದ್ದಾರೆ. ಡ್ರಗ್ಸ್ ಮಟ್ಟ ಹಾಕುವಲ್ಲಿ ಪೊಲೀಸರು, ಸರ್ಕಾರ ವಿಫಲವಾಗುತ್ತಿದೆ ಎಂದು ವಿಡಿಯೋ ಮಾಡಿ ಮಹಿಳೆ ಆರೋಪಿಸಿದ್ದಾರೆ.

ಮೆಡಿಕಲ್​ ಶಾಪ್​ನಲ್ಲಿ ಡ್ರಗ್ಸ್ ಮಾರಾಟ ಒಪ್ಪಿಕೊಂಡ ಗೃಹ ಸಚಿವ

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ, ಗೃಹ ಸಚಿವ ಡಾ.ಜಿ.ಪರಮೇಶ್ವರ್​, ಮೆಡಿಕಲ್​ ಶಾಪ್​ಗಳಲ್ಲಿ ಮಾತ್ರೆಗಳ ಮೂಲಕ ಡ್ರಗ್ಸ್ ಮಾರಾಟ ಮಾಡಲಾಗುತ್ತಿದೆ. ಡ್ರಗ್ಸ್​ ವಿರುದ್ಧದ ಕಾರ್ಯಾಚರಣೆಯಲ್ಲಿ ವಿಶ್ರಮಿಸುವ ಪ್ರಶ್ನೆಯೇ ಇಲ್ಲ. ಇಡೀ ದೇಶದಲ್ಲಿ ಡ್ರಗ್ಸ್ ಮಾರಾಟ ಇದೆ ಎಂದು ಹೇಳಿದ್ದಾರೆ.​​​

ಡ್ರಗ್ಸ್​ ವಿರುದ್ಧ ನಮ್ಮ ಸರ್ಕಾರ ಸಮರ ಸಾರಿದೆ

ಆನೇಕಲ್ ಭಾಗದಲ್ಲಿ ಹೆಚ್ಚು ಡ್ರಗ್ಸ್ ಜಪ್ತಿ ಮಾಡಲಾಗುತ್ತಿದೆ. ಹೊರರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ಡ್ರಗ್ಸ್​ ಪೂರೈಕೆ ಆಗುತ್ತಿದೆ. ಇದನ್ನು ನಮ್ಮ ಪೊಲೀಸರು ಪತ್ತೆ ಕ್ರಮಕೈಗೊಳ್ಳುತ್ತಿದ್ದಾರೆ. ಮೆಡಿಕಲ್ ಶಾಪ್​ಗಳಲ್ಲೂ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಡ್ರಗ್ಸ್​ ವಿರುದ್ಧ ನಮ್ಮ ಸರ್ಕಾರ ಸಮರ ಸಾರಿದೆ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಲೋಕಾಯುಕ್ತ ದಾಳಿ: ಸರ್ಕಾರಿ ಕಚೇರಿಯಲ್ಲಿ ಡ್ರಗ್ಸ್, ಗಾಂಜಾ, ಲಿಕ್ಕರ್​​​ ಬಾಟಲ್​ ಪತ್ತೆ

ಮಹಾರಾಷ್ಟ್ರದಲ್ಲಿ ಬಂದರುಗಳ ಮೂಲಕ ಹೆಚ್ಚು ಡ್ರಗ್ಸ್​​​​ ಬರುತ್ತಿದೆ. ಪ್ರತಿದಿನ ಯಾವುದೋ ರೂಪದಲ್ಲಿ ಡ್ರಗ್ಸ್ ಪೂರೈಕೆ ಆಗುತ್ತಿದೆ. ಏರ್​​ಪೋರ್ಟ್​ ಮೂಲಕವೂ ಡ್ರಗ್ಸ್ ಪೂರೈಕೆ ಆಗುತ್ತಿದೆ. ಆಂಧ್ರದ ವಿಶಾಖಪಟ್ಟಣದಲ್ಲಿ ಸಾವಿರ ಕೆಜಿ ಡ್ರಗ್ಸ್ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:23 pm, Mon, 18 November 24

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ