AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕೆಂಡ್​ ಪಾರ್ಟಿ ವೇಳೆ ಕಿರಿಕ್​: ಸ್ನೇಹಿತನನ್ನೇ ಕೊಂದು ಆರೋಪಿ ಪರಾರಿ

ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಕೂಲಿ ಕಾರ್ಮಿಕರಾಗಿರುವ ಸ್ನೇಹಿತರೇ ಪರಸ್ಪರ ಹೊಡೆದಾಡಿಕೊಂಡಿದ್ದು, ಕೊಲೆ ಬಳಿಕ ಆರೋಪಿ ಎಸ್ಕೇಪ್​ ಆಗಿದ್ದಾನೆ. ಘಟನಾ ಸ್ಥಳಕ್ಕೆ ಈಶಾನ್ಯ ವಿಭಾಗ ಡಿಸಿಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ವೀಕೆಂಡ್​ ಪಾರ್ಟಿ ವೇಳೆ ಕಿರಿಕ್​: ಸ್ನೇಹಿತನನ್ನೇ ಕೊಂದು ಆರೋಪಿ ಪರಾರಿ
ಸ್ನೇಹಿತನನ್ನೇ ಕೊಂದು ಆರೋಪಿ ಪರಾರಿ
ನವೀನ್ ಕುಮಾರ್ ಟಿ.
| Edited By: |

Updated on: Oct 27, 2025 | 4:12 PM

Share

ಬೆಂಗಳೂರು, ಅಕ್ಟೋಬರ್​ 27: ಮದ್ಯದ ನಶೆಯಲ್ಲಿ ಕೂಲಿ ಕಾರ್ಮಿಕರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರು (Bengaluru) ಉತ್ತರ ತಾಲೂಕಿನ ನವರತ್ನ ಅಗ್ರಹಾರ ಬಳಿ ನಡೆದಿದೆ. ಅಸ್ಸಾಂ ಮೂಲದ ಶಂಭು ತಂತಿ ಮೃತ ಆರೋಪಿಯಾಗಿದ್ದು, ಆರೋಪಿ ರಾಧೆಶ್ಯಾಮ್ ತಲೆಮರೆಸಿಕೊಂಡಿದ್ದಾನೆ. ಆರೋಪಿಗಳು ಸ್ನೇಹಿತರಾಗಿದ್ದು, ತಡ ರಾತ್ರಿವರೆಗೂ ಎಣ್ಣೆ ಪಾರ್ಟಿ ಮಾಡಿದ್ದರು. ಆ ಬಳಿಕ ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ ಎನ್ನಲಾಗಿದೆ.

ನವರತ್ನ ಅಗ್ರಹಾರ ಬಳಿಯ ಖಾಸಗಿ ಅಪಾರ್ಟ್​ಮೆಂಟ್​ ಕಟ್ಟಡ ಕಾಮಗಾರಿಗೆಂದು ಅಸ್ಸಾಂ ಮತ್ತು ಬಿಹಾರ ಮೂಲದ ಅನೇಕರು ಬಂದಿದ್ದು, ಅಲ್ಲೇ ಪಕ್ಕದ ಶೆಡ್​ಗಳನ್ನು ಬಾಡಿಗೆಗೆ ಪಡೆದು ನೆಲೆಸಿದ್ದರು. ಶನಿವಾರದವರೆಗೂ ಕೆಲಸ ಮಾಡಿದ್ದ ತಂಡ ನಿನ್ನೆ ಭಾನುವಾರದ ಹಿನ್ನಲೆ ಪಾರ್ಟಿ ನಡೆಸಿದೆ. ಈ ವೇಳೆ ಮದ್ಯದ ನಶೆಯಲ್ಲಿದ್ದ ಶಂಭು ತಂತಿ ಮತ್ತು ರಾಧೆಶ್ಯಾಮ್​ ನಡುವೆ ಯಾವುದೋ ಕ್ಷುಲಕ ವಿಚಾರಕ್ಕೆ ಕಿರಿಕ್​ ಆಗಿದ್ದು, ಜಗಳ ವಿಕೋಪಕ್ಕೆ ಹೋಗಿದೆ. ಮಾತಿಗೆ ಮಾತು ಬೆಳೆದ ಪರಿಣಾಮ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ರಾಧೆಶ್ಯಾಮ್​ ಜೋರಾಗಿ ಹಲ್ಲೆ ನಡೆಸಿದ್ದು, ಅಲ್ಲೇ ಕುಸಿದು ಬಿದ್ದು ಶಂಭುತಂತಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಗಂಗಾವತಿ ಬಿಜೆಪಿ ಯುವ ಮುಖಂಡ ವೆಂಕಟೇಶ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: 10 ಆರೋಪಿಗಳ ಬಂಧನದ ಬೆನ್ನಲ್ಲೇ ಹೊರಬಂತು ಸತ್ಯ!

ಇಷ್ಟೆಲ್ಲ ನಡೆದರೂ ಅತಿಯಾಗಿ ಮದ್ಯ ಸೇವಿಸಿದ್ದ ರಾಧೆಶ್ಯಾಮ್​ಗೆ ಸ್ನೇಹಿತ ಮೃತಪಟ್ಟಿರುವ ಬಗ್ಗೆ ಅರಿವೇ ಇರಲಿಲ್ಲ. ಬೆಳಗಿನ ಜಾವದ ವೇಳೆಗೆ ಆತನಿಗೆಬ ಈ ಬಗ್ಗೆ ಗೊತ್ತಾಗಿದ್ದು, ಸ್ಥಳದಿಂದ ಆರೋಪಿ ಎಸ್ಕೇಪ್​ ಆಗಿದ್ದಾನೆ. ಇತ್ತ ಬೆಳಗ್ಗೆ ಎಷ್ಟು ಎಬ್ಬಿಸಿದರೂ ಶಂಭುತಂತಿ ಎದ್ದೇಳದ ಕಾರಣ, ಶೆಡ್​​ನಲ್ಲಿದ್ದವರು ಪೊಲೀಸರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಆತ ಸಾವನ್ನಪ್ಪಿರೋದು ಉಳಿದವರಿಗೆ ಗೊತ್ತಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಈಶಾನ್ಯ ವಿಭಾಗ ಡಿಸಿಪಿ ಸಜಿತ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ತಲೆ ಮರೆಸಿಕೊಂಡಿರೋ ಆರೋಪಿ ರಾಧೆಶ್ಯಾಮ್​ಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್