AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕೆಂಡ್​ ಪಾರ್ಟಿ ವೇಳೆ ಕಿರಿಕ್​: ಸ್ನೇಹಿತನನ್ನೇ ಕೊಂದು ಆರೋಪಿ ಪರಾರಿ

ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಕೂಲಿ ಕಾರ್ಮಿಕರಾಗಿರುವ ಸ್ನೇಹಿತರೇ ಪರಸ್ಪರ ಹೊಡೆದಾಡಿಕೊಂಡಿದ್ದು, ಕೊಲೆ ಬಳಿಕ ಆರೋಪಿ ಎಸ್ಕೇಪ್​ ಆಗಿದ್ದಾನೆ. ಘಟನಾ ಸ್ಥಳಕ್ಕೆ ಈಶಾನ್ಯ ವಿಭಾಗ ಡಿಸಿಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ವೀಕೆಂಡ್​ ಪಾರ್ಟಿ ವೇಳೆ ಕಿರಿಕ್​: ಸ್ನೇಹಿತನನ್ನೇ ಕೊಂದು ಆರೋಪಿ ಪರಾರಿ
ಸ್ನೇಹಿತನನ್ನೇ ಕೊಂದು ಆರೋಪಿ ಪರಾರಿ
ನವೀನ್ ಕುಮಾರ್ ಟಿ
| Edited By: |

Updated on: Oct 27, 2025 | 4:12 PM

Share

ಬೆಂಗಳೂರು, ಅಕ್ಟೋಬರ್​ 27: ಮದ್ಯದ ನಶೆಯಲ್ಲಿ ಕೂಲಿ ಕಾರ್ಮಿಕರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರು (Bengaluru) ಉತ್ತರ ತಾಲೂಕಿನ ನವರತ್ನ ಅಗ್ರಹಾರ ಬಳಿ ನಡೆದಿದೆ. ಅಸ್ಸಾಂ ಮೂಲದ ಶಂಭು ತಂತಿ ಮೃತ ಆರೋಪಿಯಾಗಿದ್ದು, ಆರೋಪಿ ರಾಧೆಶ್ಯಾಮ್ ತಲೆಮರೆಸಿಕೊಂಡಿದ್ದಾನೆ. ಆರೋಪಿಗಳು ಸ್ನೇಹಿತರಾಗಿದ್ದು, ತಡ ರಾತ್ರಿವರೆಗೂ ಎಣ್ಣೆ ಪಾರ್ಟಿ ಮಾಡಿದ್ದರು. ಆ ಬಳಿಕ ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ ಎನ್ನಲಾಗಿದೆ.

ನವರತ್ನ ಅಗ್ರಹಾರ ಬಳಿಯ ಖಾಸಗಿ ಅಪಾರ್ಟ್​ಮೆಂಟ್​ ಕಟ್ಟಡ ಕಾಮಗಾರಿಗೆಂದು ಅಸ್ಸಾಂ ಮತ್ತು ಬಿಹಾರ ಮೂಲದ ಅನೇಕರು ಬಂದಿದ್ದು, ಅಲ್ಲೇ ಪಕ್ಕದ ಶೆಡ್​ಗಳನ್ನು ಬಾಡಿಗೆಗೆ ಪಡೆದು ನೆಲೆಸಿದ್ದರು. ಶನಿವಾರದವರೆಗೂ ಕೆಲಸ ಮಾಡಿದ್ದ ತಂಡ ನಿನ್ನೆ ಭಾನುವಾರದ ಹಿನ್ನಲೆ ಪಾರ್ಟಿ ನಡೆಸಿದೆ. ಈ ವೇಳೆ ಮದ್ಯದ ನಶೆಯಲ್ಲಿದ್ದ ಶಂಭು ತಂತಿ ಮತ್ತು ರಾಧೆಶ್ಯಾಮ್​ ನಡುವೆ ಯಾವುದೋ ಕ್ಷುಲಕ ವಿಚಾರಕ್ಕೆ ಕಿರಿಕ್​ ಆಗಿದ್ದು, ಜಗಳ ವಿಕೋಪಕ್ಕೆ ಹೋಗಿದೆ. ಮಾತಿಗೆ ಮಾತು ಬೆಳೆದ ಪರಿಣಾಮ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ರಾಧೆಶ್ಯಾಮ್​ ಜೋರಾಗಿ ಹಲ್ಲೆ ನಡೆಸಿದ್ದು, ಅಲ್ಲೇ ಕುಸಿದು ಬಿದ್ದು ಶಂಭುತಂತಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಗಂಗಾವತಿ ಬಿಜೆಪಿ ಯುವ ಮುಖಂಡ ವೆಂಕಟೇಶ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: 10 ಆರೋಪಿಗಳ ಬಂಧನದ ಬೆನ್ನಲ್ಲೇ ಹೊರಬಂತು ಸತ್ಯ!

ಇಷ್ಟೆಲ್ಲ ನಡೆದರೂ ಅತಿಯಾಗಿ ಮದ್ಯ ಸೇವಿಸಿದ್ದ ರಾಧೆಶ್ಯಾಮ್​ಗೆ ಸ್ನೇಹಿತ ಮೃತಪಟ್ಟಿರುವ ಬಗ್ಗೆ ಅರಿವೇ ಇರಲಿಲ್ಲ. ಬೆಳಗಿನ ಜಾವದ ವೇಳೆಗೆ ಆತನಿಗೆಬ ಈ ಬಗ್ಗೆ ಗೊತ್ತಾಗಿದ್ದು, ಸ್ಥಳದಿಂದ ಆರೋಪಿ ಎಸ್ಕೇಪ್​ ಆಗಿದ್ದಾನೆ. ಇತ್ತ ಬೆಳಗ್ಗೆ ಎಷ್ಟು ಎಬ್ಬಿಸಿದರೂ ಶಂಭುತಂತಿ ಎದ್ದೇಳದ ಕಾರಣ, ಶೆಡ್​​ನಲ್ಲಿದ್ದವರು ಪೊಲೀಸರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಆತ ಸಾವನ್ನಪ್ಪಿರೋದು ಉಳಿದವರಿಗೆ ಗೊತ್ತಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಈಶಾನ್ಯ ವಿಭಾಗ ಡಿಸಿಪಿ ಸಜಿತ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ತಲೆ ಮರೆಸಿಕೊಂಡಿರೋ ಆರೋಪಿ ರಾಧೆಶ್ಯಾಮ್​ಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ