AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕೆಂಡ್​ ಪಾರ್ಟಿ ವೇಳೆ ಕಿರಿಕ್​: ಸ್ನೇಹಿತನನ್ನೇ ಕೊಂದು ಆರೋಪಿ ಪರಾರಿ

ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಕೂಲಿ ಕಾರ್ಮಿಕರಾಗಿರುವ ಸ್ನೇಹಿತರೇ ಪರಸ್ಪರ ಹೊಡೆದಾಡಿಕೊಂಡಿದ್ದು, ಕೊಲೆ ಬಳಿಕ ಆರೋಪಿ ಎಸ್ಕೇಪ್​ ಆಗಿದ್ದಾನೆ. ಘಟನಾ ಸ್ಥಳಕ್ಕೆ ಈಶಾನ್ಯ ವಿಭಾಗ ಡಿಸಿಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ವೀಕೆಂಡ್​ ಪಾರ್ಟಿ ವೇಳೆ ಕಿರಿಕ್​: ಸ್ನೇಹಿತನನ್ನೇ ಕೊಂದು ಆರೋಪಿ ಪರಾರಿ
ಸ್ನೇಹಿತನನ್ನೇ ಕೊಂದು ಆರೋಪಿ ಪರಾರಿ
ನವೀನ್ ಕುಮಾರ್ ಟಿ
| Edited By: |

Updated on: Oct 27, 2025 | 4:12 PM

Share

ಬೆಂಗಳೂರು, ಅಕ್ಟೋಬರ್​ 27: ಮದ್ಯದ ನಶೆಯಲ್ಲಿ ಕೂಲಿ ಕಾರ್ಮಿಕರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರು (Bengaluru) ಉತ್ತರ ತಾಲೂಕಿನ ನವರತ್ನ ಅಗ್ರಹಾರ ಬಳಿ ನಡೆದಿದೆ. ಅಸ್ಸಾಂ ಮೂಲದ ಶಂಭು ತಂತಿ ಮೃತ ಆರೋಪಿಯಾಗಿದ್ದು, ಆರೋಪಿ ರಾಧೆಶ್ಯಾಮ್ ತಲೆಮರೆಸಿಕೊಂಡಿದ್ದಾನೆ. ಆರೋಪಿಗಳು ಸ್ನೇಹಿತರಾಗಿದ್ದು, ತಡ ರಾತ್ರಿವರೆಗೂ ಎಣ್ಣೆ ಪಾರ್ಟಿ ಮಾಡಿದ್ದರು. ಆ ಬಳಿಕ ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ ಎನ್ನಲಾಗಿದೆ.

ನವರತ್ನ ಅಗ್ರಹಾರ ಬಳಿಯ ಖಾಸಗಿ ಅಪಾರ್ಟ್​ಮೆಂಟ್​ ಕಟ್ಟಡ ಕಾಮಗಾರಿಗೆಂದು ಅಸ್ಸಾಂ ಮತ್ತು ಬಿಹಾರ ಮೂಲದ ಅನೇಕರು ಬಂದಿದ್ದು, ಅಲ್ಲೇ ಪಕ್ಕದ ಶೆಡ್​ಗಳನ್ನು ಬಾಡಿಗೆಗೆ ಪಡೆದು ನೆಲೆಸಿದ್ದರು. ಶನಿವಾರದವರೆಗೂ ಕೆಲಸ ಮಾಡಿದ್ದ ತಂಡ ನಿನ್ನೆ ಭಾನುವಾರದ ಹಿನ್ನಲೆ ಪಾರ್ಟಿ ನಡೆಸಿದೆ. ಈ ವೇಳೆ ಮದ್ಯದ ನಶೆಯಲ್ಲಿದ್ದ ಶಂಭು ತಂತಿ ಮತ್ತು ರಾಧೆಶ್ಯಾಮ್​ ನಡುವೆ ಯಾವುದೋ ಕ್ಷುಲಕ ವಿಚಾರಕ್ಕೆ ಕಿರಿಕ್​ ಆಗಿದ್ದು, ಜಗಳ ವಿಕೋಪಕ್ಕೆ ಹೋಗಿದೆ. ಮಾತಿಗೆ ಮಾತು ಬೆಳೆದ ಪರಿಣಾಮ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ರಾಧೆಶ್ಯಾಮ್​ ಜೋರಾಗಿ ಹಲ್ಲೆ ನಡೆಸಿದ್ದು, ಅಲ್ಲೇ ಕುಸಿದು ಬಿದ್ದು ಶಂಭುತಂತಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಗಂಗಾವತಿ ಬಿಜೆಪಿ ಯುವ ಮುಖಂಡ ವೆಂಕಟೇಶ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: 10 ಆರೋಪಿಗಳ ಬಂಧನದ ಬೆನ್ನಲ್ಲೇ ಹೊರಬಂತು ಸತ್ಯ!

ಇಷ್ಟೆಲ್ಲ ನಡೆದರೂ ಅತಿಯಾಗಿ ಮದ್ಯ ಸೇವಿಸಿದ್ದ ರಾಧೆಶ್ಯಾಮ್​ಗೆ ಸ್ನೇಹಿತ ಮೃತಪಟ್ಟಿರುವ ಬಗ್ಗೆ ಅರಿವೇ ಇರಲಿಲ್ಲ. ಬೆಳಗಿನ ಜಾವದ ವೇಳೆಗೆ ಆತನಿಗೆಬ ಈ ಬಗ್ಗೆ ಗೊತ್ತಾಗಿದ್ದು, ಸ್ಥಳದಿಂದ ಆರೋಪಿ ಎಸ್ಕೇಪ್​ ಆಗಿದ್ದಾನೆ. ಇತ್ತ ಬೆಳಗ್ಗೆ ಎಷ್ಟು ಎಬ್ಬಿಸಿದರೂ ಶಂಭುತಂತಿ ಎದ್ದೇಳದ ಕಾರಣ, ಶೆಡ್​​ನಲ್ಲಿದ್ದವರು ಪೊಲೀಸರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಆತ ಸಾವನ್ನಪ್ಪಿರೋದು ಉಳಿದವರಿಗೆ ಗೊತ್ತಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಈಶಾನ್ಯ ವಿಭಾಗ ಡಿಸಿಪಿ ಸಜಿತ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ತಲೆ ಮರೆಸಿಕೊಂಡಿರೋ ಆರೋಪಿ ರಾಧೆಶ್ಯಾಮ್​ಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ