ವೀಕೆಂಡ್​ ಪಾರ್ಟಿ ವೇಳೆ ಕಿರಿಕ್​: ಸ್ನೇಹಿತನನ್ನೇ ಕೊಂದು ಆರೋಪಿ ಪರಾರಿ

ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಕೂಲಿ ಕಾರ್ಮಿಕರಾಗಿರುವ ಸ್ನೇಹಿತರೇ ಪರಸ್ಪರ ಹೊಡೆದಾಡಿಕೊಂಡಿದ್ದು, ಕೊಲೆ ಬಳಿಕ ಆರೋಪಿ ಎಸ್ಕೇಪ್​ ಆಗಿದ್ದಾನೆ. ಘಟನಾ ಸ್ಥಳಕ್ಕೆ ಈಶಾನ್ಯ ವಿಭಾಗ ಡಿಸಿಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ವೀಕೆಂಡ್​ ಪಾರ್ಟಿ ವೇಳೆ ಕಿರಿಕ್​: ಸ್ನೇಹಿತನನ್ನೇ ಕೊಂದು ಆರೋಪಿ ಪರಾರಿ
ಸ್ನೇಹಿತನನ್ನೇ ಕೊಂದು ಆರೋಪಿ ಪರಾರಿ
Edited By:

Updated on: Oct 27, 2025 | 4:12 PM

ಬೆಂಗಳೂರು, ಅಕ್ಟೋಬರ್​ 27: ಮದ್ಯದ ನಶೆಯಲ್ಲಿ ಕೂಲಿ ಕಾರ್ಮಿಕರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರು (Bengaluru) ಉತ್ತರ ತಾಲೂಕಿನ ನವರತ್ನ ಅಗ್ರಹಾರ ಬಳಿ ನಡೆದಿದೆ. ಅಸ್ಸಾಂ ಮೂಲದ ಶಂಭು ತಂತಿ ಮೃತ ಆರೋಪಿಯಾಗಿದ್ದು, ಆರೋಪಿ ರಾಧೆಶ್ಯಾಮ್ ತಲೆಮರೆಸಿಕೊಂಡಿದ್ದಾನೆ. ಆರೋಪಿಗಳು ಸ್ನೇಹಿತರಾಗಿದ್ದು, ತಡ ರಾತ್ರಿವರೆಗೂ ಎಣ್ಣೆ ಪಾರ್ಟಿ ಮಾಡಿದ್ದರು. ಆ ಬಳಿಕ ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ ಎನ್ನಲಾಗಿದೆ.

ನವರತ್ನ ಅಗ್ರಹಾರ ಬಳಿಯ ಖಾಸಗಿ ಅಪಾರ್ಟ್​ಮೆಂಟ್​ ಕಟ್ಟಡ ಕಾಮಗಾರಿಗೆಂದು ಅಸ್ಸಾಂ ಮತ್ತು ಬಿಹಾರ ಮೂಲದ ಅನೇಕರು ಬಂದಿದ್ದು, ಅಲ್ಲೇ ಪಕ್ಕದ ಶೆಡ್​ಗಳನ್ನು ಬಾಡಿಗೆಗೆ ಪಡೆದು ನೆಲೆಸಿದ್ದರು. ಶನಿವಾರದವರೆಗೂ ಕೆಲಸ ಮಾಡಿದ್ದ ತಂಡ ನಿನ್ನೆ ಭಾನುವಾರದ ಹಿನ್ನಲೆ ಪಾರ್ಟಿ ನಡೆಸಿದೆ. ಈ ವೇಳೆ ಮದ್ಯದ ನಶೆಯಲ್ಲಿದ್ದ ಶಂಭು ತಂತಿ ಮತ್ತು ರಾಧೆಶ್ಯಾಮ್​ ನಡುವೆ ಯಾವುದೋ ಕ್ಷುಲಕ ವಿಚಾರಕ್ಕೆ ಕಿರಿಕ್​ ಆಗಿದ್ದು, ಜಗಳ ವಿಕೋಪಕ್ಕೆ ಹೋಗಿದೆ. ಮಾತಿಗೆ ಮಾತು ಬೆಳೆದ ಪರಿಣಾಮ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ರಾಧೆಶ್ಯಾಮ್​ ಜೋರಾಗಿ ಹಲ್ಲೆ ನಡೆಸಿದ್ದು, ಅಲ್ಲೇ ಕುಸಿದು ಬಿದ್ದು ಶಂಭುತಂತಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಗಂಗಾವತಿ ಬಿಜೆಪಿ ಯುವ ಮುಖಂಡ ವೆಂಕಟೇಶ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: 10 ಆರೋಪಿಗಳ ಬಂಧನದ ಬೆನ್ನಲ್ಲೇ ಹೊರಬಂತು ಸತ್ಯ!

ಇಷ್ಟೆಲ್ಲ ನಡೆದರೂ ಅತಿಯಾಗಿ ಮದ್ಯ ಸೇವಿಸಿದ್ದ ರಾಧೆಶ್ಯಾಮ್​ಗೆ ಸ್ನೇಹಿತ ಮೃತಪಟ್ಟಿರುವ ಬಗ್ಗೆ ಅರಿವೇ ಇರಲಿಲ್ಲ. ಬೆಳಗಿನ ಜಾವದ ವೇಳೆಗೆ ಆತನಿಗೆಬ ಈ ಬಗ್ಗೆ ಗೊತ್ತಾಗಿದ್ದು, ಸ್ಥಳದಿಂದ ಆರೋಪಿ ಎಸ್ಕೇಪ್​ ಆಗಿದ್ದಾನೆ. ಇತ್ತ ಬೆಳಗ್ಗೆ ಎಷ್ಟು ಎಬ್ಬಿಸಿದರೂ ಶಂಭುತಂತಿ ಎದ್ದೇಳದ ಕಾರಣ, ಶೆಡ್​​ನಲ್ಲಿದ್ದವರು ಪೊಲೀಸರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಆತ ಸಾವನ್ನಪ್ಪಿರೋದು ಉಳಿದವರಿಗೆ ಗೊತ್ತಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಈಶಾನ್ಯ ವಿಭಾಗ ಡಿಸಿಪಿ ಸಜಿತ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ತಲೆ ಮರೆಸಿಕೊಂಡಿರೋ ಆರೋಪಿ ರಾಧೆಶ್ಯಾಮ್​ಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ನವೀನ್ ಕುಮಾರ್ ಟಿ

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us