AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಮದ್ಯದಂಗಡಿಗಳಲ್ಲಿ ಕೇವಲ ಪಾರ್ಸಲ್, ಕುಡುಕರ ಅಡ್ಡೆಯಾಗುತ್ತಿದೆ ಐತಿಹಾಸಿಕ ದೇವಾಲಯಗಳು

ಐದುನೂರು ವರ್ಷಗಳ ಐತಿಹಾಸಿಕ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತಿದೆ. ನವನಗರದ ಕೆಂಚಮ್ಮನ ದೇವಿ ದೇವಸ್ಥಾನದ ಹಿಂಬದಿ ಬೆಟ್ಟ ಕುಡುಕರ ತಾಣವಾಗುತ್ತಿದೆ. ದೇವಸ್ಥಾನದ ಹಿಂಬದಿ ಸಾರಾಯಿ ಪ್ಯಾಕೆಟ್, ಬಾಟಲಿಗಳು ಸ್ವಚ್ಛತೆಯನ್ನು ಹಾಳು ಮಾಡಿದೆ.

ಬಾಗಲಕೋಟೆ: ಮದ್ಯದಂಗಡಿಗಳಲ್ಲಿ ಕೇವಲ ಪಾರ್ಸಲ್, ಕುಡುಕರ ಅಡ್ಡೆಯಾಗುತ್ತಿದೆ ಐತಿಹಾಸಿಕ ದೇವಾಲಯಗಳು
ದೇವಸ್ಥಾನದ ಆವರಣದಲ್ಲಿ ಬಿದ್ದಿರುವ ಮದ್ಯದ ಪಾಕೆಟ್​ಗಳು
TV9 Web
| Edited By: |

Updated on: Jun 09, 2021 | 9:27 AM

Share

ಬಾಗಲಕೋಟೆ: ಕೊರೊನಾ ಲಾಕ್ಡೌನ್ನಿಂದಾಗಿ ಮದ್ಯದಂಗಡಿಗಳಲ್ಲಿ ಕೇವಲ ಪಾರ್ಸಲ್ ನೀಡಲಾಗುತ್ತಿದೆ. ಇದರ ಎಫೆಕ್ಟ್ನಿಂದ ಬಾಗಲಕೋಟೆ ನಗರದಲ್ಲಿನ ಖಾಲಿ ಜಾಗಗಳು, ದೇವಸ್ಥಾನದ ಬಳಿಯ ಜಾಗಗಳು ಕುಡುಕರ ಅಡ್ಡೆಯಾಗಿ ಬದಲಾಗುತ್ತಿವೆ.

ಐದುನೂರು ವರ್ಷಗಳ ಐತಿಹಾಸಿಕ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತಿದೆ. ನವನಗರದ ಕೆಂಚಮ್ಮನ ದೇವಿ ದೇವಸ್ಥಾನದ ಹಿಂಬದಿ ಬೆಟ್ಟ ಕುಡುಕರ ತಾಣವಾಗುತ್ತಿದೆ. ದೇವಸ್ಥಾನದ ಹಿಂಬದಿ ಸಾರಾಯಿ ಪ್ಯಾಕೆಟ್, ಬಾಟಲಿಗಳು ಸ್ವಚ್ಛತೆಯನ್ನು ಹಾಳು ಮಾಡಿದೆ. ಕಾಲಿಟ್ಟ ಕಡೆಯಲಿಲ್ಲ ಬಾಟಲಿಗಳು ಕುಡುಕರ ದರ್ಬಾರನ್ನು ತೋರಿಸುತ್ತಿವೆ. ಕುಡಿದು‌ ಮನಬಂದಂತೆ ಮದ್ಯಪ್ರಯರು ಬಾಟಲಿಗಳು ಎಸೆದು ಹೋಗಿದ್ದಾರೆ. ಇದೊಂದೇ ದೇವಸ್ಥಾನವಲ್ಲ. ನಗರದ ಆಂಜನೇಯಸ್ವಾಮಿ ಹಾಗೂ ಈಶ್ವರ ದೇವಸ್ಥಾನದಲ್ಲೂ ಇದೇ ಪರಿಸ್ಥಿತಿ ಇದೆ.

ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಸುಪರ್ದಿಯಲ್ಲಿರುವ ಬೆಟ್ಟದ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಿಕೊಂಡು ಸೂಕ್ತ ಕ್ರಮ ಕೈಕೊಳ್ಳುವಂತೆ ಸಾಮಾಜಿಕ ಹೋರಾಟಗಾರ ಘನಶ್ಯಾಮ ಬಾಂಡಗೆ ಒತ್ತಾಯಿಸಿದ್ದಾರೆ. ಅಧಿಕಾರಿಗಳು ಆದಷ್ಟು ಬೇಗ ಬಾಗಲಕೋಟೆಯ ನವನಗರ ಬೈಪಾಸ್ ರಸ್ತೆಯ ಎಡಭಾಗದಲ್ಲಿರುವ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಾಗುತ್ತಿರುವ ಕುಡುಕರ ಹಾವಳಿಯನ್ನು ಕಡಿಮೆ ಮಾಡಬೇಕಿದೆ.

ಕೊರೊನಾ ಸೋಂಕಿನಿಂದ ಲಾಕ್ಡೌನ್ ಹೇರಲಾಗಿದ್ದು ಅಂಗಡಿಗಳು ಬಂದ್ ಆಗಿವೆ. ಮದ್ಯ ಅಂಗಡಿಗಳಲ್ಲಿ ಕೇವಲ ಪಾರ್ಸಲ್ ಮಾತ್ರ ನೀಡಲಾಗುತ್ತಿದ್ದು ಕುಡುಕರು ಇತ್ತ ಮನೆಗೆ ಮದ್ಯ ತೆಗೆದುಕೊಂಡು ಹೋಗಲಾಗದೆ ರಸ್ತೆಯಲ್ಲೇ ಕುಡಿಯಲಾಗದೆ ಇಂತಹ ಖಾಲಿ ಜಾಗಗಳಲ್ಲಿ ಕುಡಿದು ಎಲ್ಲೆಂದರಲ್ಲಿ ಬಿಸಾಡಿ ಅಸಡ್ಡೆ ತೋರಿಸುತ್ತಿದ್ದಾರೆ.

alcohol in temple

ದೇವಸ್ಥಾನದ ಆವರಣದಲ್ಲಿ ಬಿದ್ದಿರುವ ಮದ್ಯದ ಪಾಕೆಟ್​ಗಳು

ಇದನ್ನೂ ಓದಿ: ರೋಹಿಣಿ ಸಿಂಧೂರಿ ಬಯೋಪಿಕ್​ ಬಗ್ಗೆ ಚರ್ಚೆ; ಅಕ್ಷತಾ ಪಾಂಡವಪುರ ಹೆಸರನ್ನು ಸೂಚಿಸಿದ ಹಿರಿಯ ಬರಹಗಾರ್ತಿ

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ