AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಪಾರ್ಕ್‌ನಲ್ಲಿ ಜೀವ ಬಲಿಗಾಗಿ ಕಾದು ಕುಳಿತ ಒಣಗಿದ ಮರಗಳು! ತೆರವಿಗೆ ಸಾರ್ವಜನಿಕರ ಮನವಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗಳಲ್ಲಿ ಗುಂಡಿ ಸಮಸ್ಯೆ ಒಂದಡೆಯಾದರೆ ಮತ್ತೊಂದೆಡೆಗೆ ರಸ್ತೆ ಪಕ್ಕದಲ್ಲಿರೋ ಒಣಗಿದ ಮರಗಳು ಸಾರ್ವಜನಿಕರ ಬಲಿಗಾಗಿ ಕಾದು ಕುಳಿತರೆ ಅತ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪಾರ್ಕ್‌ಗಳಲ್ಲಿ ಕೂಡ ಒಣಗಿದ ಮರಗಳು ಬಲಿಗಾಗಿ ಕಾದು ಕುಳಿತಿವೆ. ಹೀಗಾಗಿ ಒಣಗಿದ ಮರ ತೆರವಿಗೆ ಸಾರ್ವಜನಿಕರು ಮನವಿ ಮಾಡಿದ್ದಾರೆ.

ಬಿಬಿಎಂಪಿ ಪಾರ್ಕ್‌ನಲ್ಲಿ ಜೀವ ಬಲಿಗಾಗಿ ಕಾದು ಕುಳಿತ ಒಣಗಿದ ಮರಗಳು! ತೆರವಿಗೆ ಸಾರ್ವಜನಿಕರ ಮನವಿ
ಬಿಬಿಎಂಪಿ ಪಾರ್ಕ್‌ನಲ್ಲಿ ಜೀವ ಬಲಿಗಾಗಿ ಕಾದು ಕುಳಿತ ಒಣ ಮರಗಳು! ತೆರವಿಗೆ ಸಾರ್ವಜನಿಕರ ಮನವಿ
Vinayak Hanamant Gurav
| Updated By: ಗಂಗಾಧರ​ ಬ. ಸಾಬೋಜಿ|

Updated on:Aug 10, 2024 | 11:05 PM

Share

ಬೆಂಗಳೂರು, ಆಗಸ್ಟ್​ 10: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಗಾಗ ಬಂದು ಹೋಗೊ ಮಳೆ ಹಿನ್ನಲೆ ಸಾಕಷ್ಟು ಅವಾಂತರ ಸೃಷ್ಟಿಯಾಗುತ್ತಿವೆ. ರಸ್ತೆ ಗುಂಡಿಗಳ ಸಮಸ್ಯೆ ಜೊತೆಗೆ ಯಾವಾಗ ಯಾವ ಮರ ಬೀಳುತ್ತೋ ಅಂತ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಓಡಾಡುತ್ತಿದ್ದಾರೆ. ಹೀಗಿರುವಾಗ ಗಾಳಿ ಮಳೆಯಿಂದಾಗಿ ನಗರದಲ್ಲಿ ನೂರಾರು ಮರಗಳು ಧರೆಗುರುವೆ, ಮತ್ತೊಂದೆಡೆ ನಗರದ ಪ್ರಮುಖ ಬೀದಿಗಳಲ್ಲಿ ಒಣಗಿದ ಮರಗಳು (Dry trees) ಜನರ ಬಲಿಗಾಗಿ ಕಾದು ನಿಂತಿದ್ರೆ, ಜಯನಗರ 4 ನೇ ಬ್ಲಾಕ್‌ನ ಬಿಬಿಎಂಪಿ (BBMP) ಸಾರ್ವಜನಿಕ ಪಾರ್ಕ್‌ನಲ್ಲಿ15 ಕ್ಕೂ ಅಧಿಕ ಮರಗಳು ಒಣಗಿ ಹೋಗಿದ್ದು ಆಗಲೋ ಈಗಲೋ ಬೀಳುವ ಸ್ಥಿತಿಯಲ್ಲಿದ್ದು, ಬೆಳಿಗ್ಗೆ ಸಾಯಂಕಾಲ ವಾಕಿಂಗ್‌ಗೆ ಬರೋ ಜನರು ವಾಕಿಂಗ್ ಮಾಡಲು ಭಯ ಪಡುವಂತಾಗಿದ್ದು, ವಾಕಿಂಗ್ ಮಾರೋರು ಜೀವಕಳೆದುಕೊಳ್ಳೊಕೆ ಬರ್ತಾರಾ ಹೀಗಾಗಿ ಒಣಗಿದ ಮರಗಳನ್ನ ತೆರವುಗೊಳಿಸುವಂತೆ ಆಗ್ರಹಿಸುತ್ತಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿರುವ ಯಾವುದೇ ಮರಗಳನ್ನ ಪಾಲಿಕೆ ಅನುಮತಿ ಇಲ್ಲದೇ ತೆರವಿಗೊಳಿಸುವಂತಿಲ್ಲ. ಇನ್ನೂ ಈ ಪಾರ್ಕ್‌ನ್ನ ತುಂಬಾ ಚೆನ್ನಾಗಿ ನಿರ್ವಹಣೆ ಮಾಡಲಾಗುತ್ತಿದೆಯಾದರೆ ಅವರು ಮರಗಳನ್ನ ತೆರವುಗೊಳಿಸುವಂತಿಲ್ಲ. ಇಲ್ಲಿರುವಂತಹ ಮರಗಳ ಒಣಗಿದ ರೆಂಬೆಕೊಂಬೆ ಹಾಗೂ ಸಂಪೂರ್ಣವಾಗಿ ಒಣಗಿದ ಮರಗಳನ್ನ ಪಾಲಿಕೆಯ ಅರಣ್ಯ ವಿಭಾಗದ ಅಧಿಕಾರಿಗಳು ತೆರವುಗೊಳಿಸಬೇಕು. ಆದರೆ ಪಾಲಿಕೆ ಅಧಿಕಾರಿಗಳು ಮಾತ್ರ ಈ ಬಗ್ಗೆ ತಲೆ ಕೆಡಸಿಕೊಳ್ಳದೇ ನಿರ್ಲಕ್ಷ ವಹಿಸುತ್ತಿದ್ದಾರೆ.

ಇದನ್ನೂ ಓದಿ: ಬಿಲ್ ಬಾಕಿ ವಸೂಲಿಗೆ ಜಲಮಂಡಳಿಯ ನಯಾ ಪ್ಲ್ಯಾನ್​: ನೀರಿನ ಬಿಲ್ ಬಾಕಿದಾರರಿಗೆ ಸಿಗುತ್ತಾ 50-50 ಆಫರ್?

ಪರಿಣಾಮ ಪಾರ್ಕ್‌ನಲ್ಲಿ ಕುಳಿತುಕೊಳ್ಳಲು ಓಡಾಡಲು ಭಯ ಪಡುತ್ತಿರೋ ಜನರು ಮತ್ತೊಂದೆಡೆಗೆ ಒಣಗಿದ ಮರಗಳಿಂದ ಪಾರ್ಕ್‌ ಪಕ್ಕದಲ್ಲಿ ವಾಹನಗಳನ್ನ ನಿಲ್ಲಿಸಲು ಕೂಡ ಜನರು ಭಯ ಪಡುವಂತಾಗಿದೆ. ಮಳೆ ಬಂದು ಮರ ಬಿದ್ದಾಗ ತೆರವುಗೊಳಿಸುವ ಬದಲು ಇದೀಗ ಒಣಗಿದ ಮರಗಳನ್ನ ತೆರವುಗೊಳಿಸುವ ಮೂಲಕ ಸಾರ್ವಜನಿಕರ ಓಡಾಟಕ್ಕೆ ಅನಕೂಲ ಮಾಡಿಕೊಡಿ ಎನ್ನುತ್ತಾರೆ ವಾಯುವಿಹಾರಿಗಳು.

ಇದನ್ನೂ ಓದಿ: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಬಿಎಂಪಿಯಿಂದ ಗುಡ್​ನ್ಯೂಸ್: ಒಟಿಎಸ್ ಕಾಲಾವಕಾಶ 2 ತಿಂಗಳು ವಿಸ್ತರಣೆ

ಈ ಒಣಗಿದ ಮರಗಳಿಂದ ಏನಾದ್ರು ಅವಘಡಗಳು ಸಂಭವಿಸುವ ಮುನ್ನ ಪಾಲಿಕೆಯ ಅರಣ್ಯ ವಿಭಾಗ ಅಧಿಕಾರಿಗಳು ಎಚ್ಚೆತ್ತುಕೊಂಡು ಈ ಒಣಗಿದ ಮರಗಳ ತೆರವಿಗೆ ಮುಂದಾಗುತ್ತಾರಾ ಇಲ್ವಾ ಕಾದು ನೋಡಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:04 pm, Sat, 10 August 24

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ