AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DySP ಲಕ್ಷ್ಮಿ ನೇಣುಬಿಗಿದು ಆತ್ಮಹತ್ಯೆಗೆ ಶರಣು

ಅನ್ನಪೂರ್ಣೇಶ್ವರಿ ನಗರದ ಆಪ್ತ ಸ್ನೇಹಿತ ಮನು ಎಂಬುವವನ ಮನೆಗೆ ಊಟಕ್ಕೆ ಹೋಗಿದ್ದ ಮಹಿಳಾ ಅಧಿಕಾರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

DySP ಲಕ್ಷ್ಮಿ ನೇಣುಬಿಗಿದು ಆತ್ಮಹತ್ಯೆಗೆ ಶರಣು
ಡಿವೈಎಸ್​ಪಿ ಲಕ್ಷ್ಮೀ
shruti hegde
| Updated By: ಆಯೇಷಾ ಬಾನು|

Updated on:Dec 17, 2020 | 3:17 PM

Share

ಬೆಂಗಳೂರು: ಸಿಡಿಐಯ ಡಿಎಸ್​ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಲಕ್ಷ್ಮಿ(33) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರದ ವಿನಾಯಕ​ ಲೇಔಟ್​ನಲ್ಲಿ ನಡೆದಿದೆ.

ಅನ್ನಪೂರ್ಣೇಶ್ವರಿ ನಗರದ ಆಪ್ತ ಸ್ನೇಹಿತ ಮನು ಎಂಬುವವನ ಮನೆಗೆ ಊಟಕ್ಕೆ ಹೋಗಿದ್ದ ಮಹಿಳಾ ಅಧಿಕಾರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನುವಿನ ಮನೆಯಲ್ಲಿ ಪಾರ್ಟಿಗೆ ಸಿದ್ಧತೆ ನಡೆದಿತ್ತು. ಪಾರ್ಟಿಯ ವೇಳೆ ಮದ್ಯ ಸೇವಿದ್ದರು. ಬಳಿಕೆ ಕೋಣೆಗೆ ತೆರಳಿ ರಾತ್ರಿ 10 ಗಂಟೆಯ ಸರಿಸುಮಾರಿಗೆ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದು ಲಕ್ಷ್ಮಿ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಮನು ಕಾಂಟ್ರೆಕ್ಟ್ ವೃತ್ತಿಯಲ್ಲಿ ತೊಡಗಿದ್ದವನು. ಬುಧವಾರ ಅಂದರೆ ನಿನ್ನೆ ಸಂಜೆ ಊಟಕ್ಕೆಂದು ಸ್ನೇಹಿತನ ಮನೆಗೆ ಡಿಎಸ್​ಪಿ ಲಕ್ಷ್ಮೀ ಬಂದಿದ್ದರು. ಅಧಿಕಾರಿ ಲಕ್ಷ್ಮಿ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದರು. ಅವರ ಪತಿ ಹೊರ ರಾಜ್ಯದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. 8 ವರ್ಷವಾದರೂ ಇವರಿಗೆ ಮಕ್ಕಳಾಗಿರಲಿಲ್ಲ. ಹೀಗಾಗಿ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ಲಕ್ಷ್ಮಿ 2014ರ ಕೆಎಸ್, ಪಿಎಸ್ ಬ್ಯಾಚ್​ನ ಅಧಿಕಾರಿಯಾಗಿದ್ದವರು. 2017ರಲ್ಲಿ ಕರ್ತವ್ಯಕ್ಕೆ ನಿಯೋಜನೆಯಾಗಿದ್ದರು. ಆಪ್ತ ಸ್ನೇಹಿತನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲೇ ಶವ ಪತ್ತೆಯಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

IAS ಅಧಿಕಾರಿ ಆತ್ಮಹತ್ಯೆ, ರಾಜಕಾರಣಿಗಳ ಕಡೆ ಬೊಟ್ಟು ಮಾಡಿದ ಮಾಜಿ IPS ಅಧಿಕಾರಿ

Published On - 8:24 am, Thu, 17 December 20

ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ