AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆನಾಡಿನಲ್ಲಿ ಸೌತ್ ಆಫ್ರಿಕಾ ವೈರಸ್.. ದುಬೈನಿಂದ ಮರಳಿದ ಶಿವಮೊಗ್ಗದ ವ್ಯಕ್ತಿಗೆ ಸೋಂಕು

ಶಿವಮೊಗ್ಗದ ಜೆಪಿ ನಗರದ ನಿವಾಸಿ 53 ವರ್ಷದ ಈ ವ್ಯಕ್ತಿ KIABಯಲ್ಲಿ ಗಂಟಲುದ್ರವ ಪರೀಕ್ಷೆ ವೇಳೆ ಕೊರೊನಾ ಸೋಂಕು ದೃಢಪಟ್ಟಿದೆ. ಜೆನೆಟಿಕ್ ಸೀಕ್ವೆನ್ಸ್​ನಲ್ಲಿ ಸೌತ್ ಆಫ್ರಿಕಾ ವೈರಸ್ ಪತ್ತೆಯಾಗಿದೆ.

ಮಲೆನಾಡಿನಲ್ಲಿ ಸೌತ್ ಆಫ್ರಿಕಾ ವೈರಸ್.. ದುಬೈನಿಂದ ಮರಳಿದ ಶಿವಮೊಗ್ಗದ ವ್ಯಕ್ತಿಗೆ ಸೋಂಕು
ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆ
ಆಯೇಷಾ ಬಾನು
|

Updated on:Mar 11, 2021 | 1:16 PM

Share

ಶಿವಮೊಗ್ಗ: ಮಹಾಮಾರಿ ಕೊರೊನಾ ದೇಶಕ್ಕೆ ಕಾಲಿಟ್ಟು ಬಂದು ವರ್ಷವಾದ್ರು ಇದರಿಂದ ಮುಕ್ತಿ ಮಾತ್ರ ಇನ್ನೂ ಸಿಕ್ಕಿಲ್ಲ. ಇದೀಗ ಶಿವಮೊಗ್ಗ ಜಿಲ್ಲೆಯ ವ್ಯಕ್ತಿಯಲ್ಲಿ ದಕ್ಷಿಣ ಆಫ್ರಿಕಾ ವೈರಸ್ ಪತ್ತೆಯಾಗಿದೆ. ದುಬೈನಿಂದ ಬೆಂಗಳೂರಿಗೆ ವಾಪಸಾಗಿದ್ದ ವ್ಯಕ್ತಿಯಲ್ಲಿ ದಕ್ಷಿಣ ಆಫ್ರಿಕಾದ ವೈರಸ್ ಕಂಡು ಬಂದಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊರೊನಾ ಟೆಸ್ಟ್​ಗೆ ಕೊಟ್ಟು ಶಿವಮೊಗ್ಗಕ್ಕೆ ತೆರಳಿದ್ದರು. ಈಗ ಇವರ ವರದಿ ಬಂದಿದ್ದು ದಕ್ಷಿಣ ಆಫ್ರಿಕಾ ವೈರಸ್ ಪತ್ತೆಯಾಗಿದೆ.

ಶಿವಮೊಗ್ಗದ ಜೆಪಿ ನಗರದ ನಿವಾಸಿ 53 ವರ್ಷದ ಈ ವ್ಯಕ್ತಿ KIABಯಲ್ಲಿ ಗಂಟಲುದ್ರವ ಪರೀಕ್ಷೆ ವೇಳೆ ಕೊರೊನಾ ಸೋಂಕು ದೃಢಪಟ್ಟಿದೆ. ಜೆನೆಟಿಕ್ ಸೀಕ್ವೆನ್ಸ್​ನಲ್ಲಿ ಸೌತ್ ಆಫ್ರಿಕಾ ವೈರಸ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಈ ವ್ಯಕ್ತಿಯನ್ನು 7 ದಿನ ಹೋಮ್ ಐಸೋಲೇಷನ್​ನಲ್ಲಿ ಇರಿಸಲಾಗಿದ್ದು ಈಗ ಶಿವಮೊಗ್ಗದ ಮೆಗ್ಗಾನ್​ನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿಯ ಟ್ರಾವೆಲ್ ಹಿಸ್ಟರಿ, ಪ್ರೈಮರಿ ಕಾಂಟ್ಯಾಕ್ಟ್ ಪತ್ತೆ ಕಾರ್ಯ ಆರಂಭವಾಗಿದೆ. ಸದ್ಯ 9 ಜನ ಪ್ರಾಥಮಿಕ ಸಂಪರ್ಕದಲ್ಲಿರುವುದು ಪತ್ತೆಯಾಗಿದೆ.

ಸೋಂಕಿತನಿಗೆ ಯಾವುದೇ ರೋಗ ಲಕ್ಷಣಗಳಿಲ್ಲ ಶಿವಮೊಗ್ಗ ಸೋಂಕಿತನಿಗೆ ಯಾವುದೇ ರೋಗ ಲಕ್ಷಣಗಳಿಲ್ಲ. ಆಫ್ರಿಕಾ ವೈರಸ್ ಬಂದಿರೋ ವ್ಯಕ್ತಿ ಆರೋಗ್ಯವಾಗಿದ್ದಾರೆ ಎಂದು ಟಿವಿ9ಗೆ ಶಿವಮೊಗ್ಗ ಡಿಹೆಚ್​ಒ ರಾಜೇಶ್ ಸುರಗಿಹಳ್ಳಿ ಸ್ಪಷ್ಟಪಡಿಸಿದ್ದಾರೆ. ಸೋಂಕಿತನ ಪತ್ನಿ, ಮಗುವನ್ನು ಐಸೋಲೇಷನ್ ಮಾಡಲಾಗಿದೆ. ಹಾಗೂ ಸೋಂಕಿತನಿದ್ದ ಏರಿಯಾದಲ್ಲಿ ಜಾಗೃತಿ ಮೂಡಿಸಲಾಗ್ತಿದೆ. ಸೋಂಕಿನ ಲಕ್ಷಣ ಕಂಡು ಬಂದ್ರೆ ಟೆಸ್ಟ್ ಮಾಡಿಸಿಕೊಳ್ಳುವಂತೆ ಆರೋಗ್ಯ ಸಿಬ್ಬಂದಿ ಜಾಗೃತಿ ಮೂಡಿಸುತ್ತಿದ್ದಾರೆ.

ಮನೆ, ಅಂಗಡಿ ಸೀಲ್​ಡೌನ್ ಮಂಜಾಗ್ರತೆಯಾಗಿ ಸೋಂಕಿತನ ಮನೆ, ಅಂಗಡಿ ಸೀಲ್​ಡೌನ್ ಮಾಡಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಹಿನ್ನೆಲೆಯಲ್ಲಿ ಸಂಬಂಧಿಕರಿಂದ ಬೀಗ ಹಾಕಲಾಗಿದೆ. ಆರೋಗ್ಯ ಸಿಬ್ಬಂದಿಯಿಂದ ಸ್ಥಳೀಯರ ಗಂಟಲುದ್ರವ ಪರೀಕ್ಷೆ ಮಾಡಲಾಗುತ್ತಿದ್ದು ಈಗಾಗಲೇ 10ಕ್ಕೂ ಹೆಚ್ಚು ಜನರಿಗೆ ಗಂಟಲುದ್ರವ ಪರೀಕ್ಷೆ ಮಾಡಲಾಗಿದೆ. ಸೋಂಕಿತ ಶಿವಮೊಗ್ಗಕ್ಕೆ ಬಂದು 15 ದಿನಗಳ ಬಳಿಕ ಹೊಸ ವೈರಸ್ ದೃಢವಾಗಿದೆ.

ಇದನ್ನೂ ಓದಿ: Covid 19 Vaccine: ಭಾರತದ ಕೊರೊನಾ ಲಸಿಕೆ ವಾಪಾಸ್​ ಮಾಡುವ ವಿಚಾರ ಸತ್ಯಕ್ಕೆ ದೂರ: ದಕ್ಷಿಣ ಆಫ್ರಿಕಾ

Published On - 12:14 pm, Thu, 11 March 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ