AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ಸಮಸ್ಯೆ: ಮೆಟ್ರೋ ಹಳದಿ ಮಾರ್ಗದ ರೈಲಿನ ಸಂಚಾರದಲ್ಲಿ ವ್ಯತ್ಯಯ

ಒಂದು ರೈಲಿನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆ ಮೆಟ್ರೋ ಹಳದಿ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ ಕಂಡುಬಂದಿದೆ. ಪ್ರತಿ 19 ನಿಮಿಷಗಳ ಬದಲಾಗಿ 25 ನಿಮಿಷಗಳಿಗೆ ಒಂದರಂತೆ ರೈಲು ಸಂಚರಿಸುತ್ತಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಅಧಿಕಾರಿಗಳ ಮಾಹಿತಿ ನೀಡಿದ್ದಾರೆ.

ತಾಂತ್ರಿಕ ಸಮಸ್ಯೆ: ಮೆಟ್ರೋ ಹಳದಿ ಮಾರ್ಗದ ರೈಲಿನ ಸಂಚಾರದಲ್ಲಿ ವ್ಯತ್ಯಯ
ನಮ್ಮ ಮೆಟ್ರೋ
ಪ್ರಸನ್ನ ಹೆಗಡೆ
|

Updated on:Oct 12, 2025 | 12:52 PM

Share

ಬೆಂಗಳೂರು, ಅಕ್ಟೋಬರ್​ 12: ನಮ್ಮ ಮೆಟ್ರೋ ಹಳದಿ ಮಾರ್ಗದ ರೈಲು (Namma Metro) ಸಂಚಾರದಲ್ಲಿ ವ್ಯತ್ಯಯ ಕಂಡುಬಂದಿದೆ. ಆರ್.ವಿ.ರಸ್ತೆಯಿಂದ ಬೊಮ್ಮಸಂದ್ರ ನಡುವೆ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು, ಹಳದಿ ಮಾರ್ಗದಲ್ಲಿ ಸಂಚರಿಸುವ ಒಂದು ರೈಲಿನಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನಲೆ ಸಮಸ್ಯೆ ಆಗಿದೆ. ಹೀಗಾಗಿ ಹಳದಿ ಮಾರ್ಗದಲ್ಲಿ ಪ್ರತಿ 25 ನಿಮಿಷಕ್ಕೊಮ್ಮೆ ರೈಲು ಸಂಚರಿಸುತ್ತಿದೆ. ಸಾಮಾನ್ಯವಾಗಿ ಪ್ರತಿದಿನ ಪ್ರತಿ 19 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚರಿಸುತ್ತಿದ್ದವು.

ಆರ್.ವಿ.ರಸ್ತೆಯಿಂದ ಬೊಮ್ಮಸಂದ್ರದ ನಡುವಿನ ಹಳದಿ ಮಾರ್ಗದಲ್ಲಿ ಒಟ್ಟು 4 ರೈಲುಗಳು ಸಂಚಾರ ನಡೆಸುತ್ತಿದ್ದವು. ಆ ಪೈಕಿ 1 ರೈಲಿನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿರುವ ಕಾರಣ ಈಗ 3 ಮೆಟ್ರೋ ರೈಲುಗಳು ಮಾತ್ರ ಓಡಾಟ ನಡೆಸುತ್ತಿವೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

BMRCL ಮಾಹಿತಿ

ಶೀಘ್ರ 5ನೇ ರೈಲಿನ ಸಂಚಾರ

ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟಿಸಲ್ಪಟ್ಟಿದ್ದ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಶೀಘ್ರ ಮತ್ತೊಂದು ಹೊಸ ರೈಲಿನ ಸೇರ್ಪಡೆ ಆಗಲಿದೆ. ಆ ಮೂಲಕ ಸಂಚರಿಸಲಿರುವ ರೈಲುಗಳ ಸಂಖ್ಯೆಯನ್ನು 5ಕ್ಕೆ ಏರಿಸಲು BMRCL ಮುಂದಾಗಿದೆ. ಆರಂಭದಲ್ಲಿ 3 ಮೆಟ್ರೋ ರೈಲುಗಳಷ್ಟೇ ಈ ಮಾರ್ಗದಲ್ಲಿ ಸಂಚಾರ ನಡೆಸುತ್ತಿದ್ದವು. ಆ ಬಳಿಕ ಸೆಪ್ಟೆಂಬರ್ 10ರಂದು ರೈಲಿನ ಸಂಖ್ಯೆಯನ್ನು ನಾಲ್ಕಕ್ಕೆ ಏರಿಸಲಾಗಿತ್ತು. ಹೊಸದಾಗಿ ಸೇರ್ಪಡೆಯಾಗಲಿರುವ 5ನೇ ರೈಲಿನ ಬೊಗಿಗಳು ಕೋಲ್ಕತ್ತಾದ ಟೀಟಾಘರ್ ರೈಲ್ವೇ ಸಿಸ್ಟಮ್ ಲಿಮಿಟೆಡ್​ನಿಂದ ಹೊರಟು ಸೆಪ್ಟೆಂಬರ್ 19 ರಂದೇ ಬೆಂಗಳೂರನ್ನು ಈಗಾಗಲೇ ತಲುಪಿವೆ. ಎಲ್ಲಾ ಬೋಗಿಗಳ ಜೋಡಣೆಯಾದ ಬಳಿಕ 20 ದಿನಗಳ ಪರೀಕ್ಷೆ ನಡೆದು ಅಂತಿಮವಾಗಿ ರೈಲಿನ ಸಂಚಾರ ಅಧಿಕೃತವಾಗಿ ಆರಂಭವಾಗಲಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:29 pm, Sun, 12 October 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್