AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋನ್ ಕಾಲ್​ನಿಂದ ಮುರಿದು ಬಿದ್ದ ಮದುವೆ: ವರ ಕಂಗಾಲು, ವಧುವಿಗೆ ಮತ್ತೊಂದು ಮದ್ವೆ!

ರಾಮನಗರ: ಅನಾಮಧೇಯ ಪೋನ್ ಕಾಲ್​ನಿಂದ ಮದುವೆ ಮುರಿದು ಬಿದ್ದ ಘಟನೆ ಚನ್ನಪಟ್ಟಣ ತಾಲೂಕಿನಲ್ಲಿ ಗ್ರಾಮವೊಂದರಲ್ಲಿ ನಿನ್ನೆ ನಡೆದಿದೆ. ಆದ್ರೆ, ಅದೇ ವಧುವಿಗೆ ಇಂದು ಬೆಳಗ್ಗೆ ಮತ್ತೊಬ್ಬ ಹುಡುಗನೊಂದಿಗೆ ಮದುವೆ ನೆರವೇರಿದೆ. ಅತ್ತ, ತನ್ನ ಮದುವೆ ನಡೆಯಲಿಲ್ಲವಲ್ಲಾ ಎಂದು ವರ ಕಂಗಾಲಾಗಿದ್ದಾನೆ. ಮದುವೆ ಗಂಡಿಗೆ ಮದುವೆಯಾಗಿದೆ, ಮಕ್ಕಳೂ ಇವೆಯಂತೆ! ನಿನ್ನೆ ಮದ್ವೆಯ ದಿನ ಏನಾಯಿತೆಂದ್ರೆ ಹೆಣ್ಣಿನ ಮನೆಯವರಿಗೆ ಅನಾಮಧೇಯ ಪೋನ್ ಕಾಲ್ ಬಂದಿದೆ. ಈ ಒಂದು ಕಾಲ್​ನಿಂದ ನಿನ್ನೆ ನಡೆಯಬೇಕಿದ್ದ ಮುದುವೆ ಮುರಿದು ಬಿದ್ದಿದೆ. ಅನಾಮಧೇಯ ಪೋನ್ ಕಾಲ್​ನಲ್ಲಿ […]

ಪೋನ್ ಕಾಲ್​ನಿಂದ ಮುರಿದು ಬಿದ್ದ ಮದುವೆ: ವರ ಕಂಗಾಲು, ವಧುವಿಗೆ ಮತ್ತೊಂದು ಮದ್ವೆ!
ಸಾಧು ಶ್ರೀನಾಥ್​
|

Updated on:Nov 22, 2019 | 10:46 AM

Share

ರಾಮನಗರ: ಅನಾಮಧೇಯ ಪೋನ್ ಕಾಲ್​ನಿಂದ ಮದುವೆ ಮುರಿದು ಬಿದ್ದ ಘಟನೆ ಚನ್ನಪಟ್ಟಣ ತಾಲೂಕಿನಲ್ಲಿ ಗ್ರಾಮವೊಂದರಲ್ಲಿ ನಿನ್ನೆ ನಡೆದಿದೆ. ಆದ್ರೆ, ಅದೇ ವಧುವಿಗೆ ಇಂದು ಬೆಳಗ್ಗೆ ಮತ್ತೊಬ್ಬ ಹುಡುಗನೊಂದಿಗೆ ಮದುವೆ ನೆರವೇರಿದೆ. ಅತ್ತ, ತನ್ನ ಮದುವೆ ನಡೆಯಲಿಲ್ಲವಲ್ಲಾ ಎಂದು ವರ ಕಂಗಾಲಾಗಿದ್ದಾನೆ.

ಮದುವೆ ಗಂಡಿಗೆ ಮದುವೆಯಾಗಿದೆ, ಮಕ್ಕಳೂ ಇವೆಯಂತೆ!

ನಿನ್ನೆ ಮದ್ವೆಯ ದಿನ ಏನಾಯಿತೆಂದ್ರೆ ಹೆಣ್ಣಿನ ಮನೆಯವರಿಗೆ ಅನಾಮಧೇಯ ಪೋನ್ ಕಾಲ್ ಬಂದಿದೆ. ಈ ಒಂದು ಕಾಲ್​ನಿಂದ ನಿನ್ನೆ ನಡೆಯಬೇಕಿದ್ದ ಮುದುವೆ ಮುರಿದು ಬಿದ್ದಿದೆ. ಅನಾಮಧೇಯ ಪೋನ್ ಕಾಲ್​ನಲ್ಲಿ ಮಾತನಾಡಿದ ವ್ಯಕ್ತಿ ಈಗಾಗಲೇ ಮದುವೆ ಗಂಡಿಗೆ ಮದುವೆಯಾಗಿದೆ ಮತ್ತು ಮಕ್ಕಳು ಸಹ ಇವೆ ಎಂದು ಹೇಳಿದ್ದಾರೆ.

ನಿನ್ನೆ ಸಾಯಂಕಾಲ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿಯ ಚೇತನ ಸಮುದಾಯ ಭವನದಲ್ಲಿ ನಡೆಯಬೇಕಿದ್ದ ಅರತಕ್ಷತೆ ಈ ದೂರವಾಣಿ ಕರೆಯಿಂದ ನಿಂತು ಹೋಗಿದೆ. ಆರು ತಿಂಗಳ ಹಿಂದೆ ಚನ್ನಪಟ್ಟಣ ನಗರದ ಎಲೆಕೇರಿ ಬಡಾವಣೆಯ ಭಾಗ್ಯಶ್ರೀ ಹಾಗೂ ಎಲೀಯೂರು ಗ್ರಾಮದ ಬಸವರಾಜುಗೆ ನಿಶ್ಚಿತಾರ್ಥ ನಡೆದಿತ್ತು.

ಅದರಂತೆ ನಿನ್ನೆ ಸಾಯಂಕಾಲ ಮದುವೆ ನಡೆಯಬೇಕಿತ್ತು. ದೂರವಾಣಿ ಕರೆಯಂತೆ ಅಂತಿಮವಾಗಿ ಹೆಣ್ಣಿನ ಮನೆಯವರು ಮದುವೆಯನ್ನು ನಿರಾಕರಿಸಿದ್ದಾರೆ. ಆದರೆ ಇಂದು ಬೇರೊಬ್ಬ ವರ ಆನಂದ್ ಎಂಬುವವ​ನೊಂದಿಗೆ ಮದುವೆ ನಡೆದಿದೆ.

ಈ ಪ್ರಕರಣ ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ವರ ಬಸವರಾಜು ತನ್ನ ಮೇಲಿರುವ ಆರೋಪವನ್ನು ಸಾಬೀತು ಪಡಿಸುವಂತೆ ಪಟ್ಟು ಹಿಡಿದಿದ್ದಾರೆ. ಮಧ್ಯರಾತ್ರಿಯವರೆಗೆ ಠಾಣೆಯಲ್ಲಿ ಈ ಹೈಡ್ರಾಮ ನಡೆದಿದೆ.

Published On - 10:34 am, Fri, 22 November 19

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!