AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದ ಅರ್ಚಕರ ಸಮುದಾಯ, ಸರ್ಕಾರದಿಂದ ಪರಿಹಾರಕ್ಕಾಗಿ ಮನವಿ

ಕಳೆದ 2 ತಿಂಗಳಿಂದ ದೇಗುಲಗಳತ್ತ ಜನರು ಬರುತ್ತಿಲ್ಲ. ಆದ್ರೂ ಸಂಪ್ರದಾಯದಂತೆ ನಾವು ಪೂಜೆ ಸಲ್ಲಿಸುತ್ತಿದ್ದೇವೆ. ಇದರಿಂದ ಬಾರಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದೇವೆ. ನಮ್ಮ ಬಳಿ ಆಸ್ಪತ್ರೆಗಳಿಗೆ ಹೋಗುವುದಕ್ಕೂ ಹಣ ಇಲ್ಲ. ಕನಿಷ್ಠ ಆಹಾರ ಕಿಟ್‌ಗಳನ್ನು ಕೂಡ ಯಾರೂ ನೀಡ್ತಿಲ್ಲ. ಹಲವು ಬಾರಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದೇವೆ. ಆದರೆ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಅರ್ಚಕರು ನೋವು ತೋಡಿಕೊಂಡಿದ್ದಾರೆ.

ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದ ಅರ್ಚಕರ ಸಮುದಾಯ, ಸರ್ಕಾರದಿಂದ ಪರಿಹಾರಕ್ಕಾಗಿ ಮನವಿ
ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದ ಅರ್ಚಕರ ಸಮುದಾಯ
ಆಯೇಷಾ ಬಾನು
|

Updated on: May 19, 2021 | 9:39 AM

Share

ಬೆಂಗಳೂರು: ಕೊರೊನಾ ಎರಡನೇ ಅಲೆಯಿಂದಾಗಿ ಅನೇಕ ಮಂದಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಲಾಕ್ಡೌನ್ನಿಂದ ಕೆಲಸ ಕಾರ್ಯಗಳಿಲ್ಲದೆ ಊಟಕ್ಕೂ ಪರದಾಡುವಂತ ಪರಿಸ್ಥಿತಿ ಎದುರಾಗಿದೆ. ಲಾಕ್‌ಡೌನ್‌ನಿಂದ ರಾಜ್ಯದ 35,000 ದೇಗುಲಗಳ ಅರ್ಚಕರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ.

ಕಳೆದ 2 ತಿಂಗಳಿಂದ ದೇಗುಲಗಳತ್ತ ಜನರು ಬರುತ್ತಿಲ್ಲ. ಆದ್ರೂ ಸಂಪ್ರದಾಯದಂತೆ ನಾವು ಪೂಜೆ ಸಲ್ಲಿಸುತ್ತಿದ್ದೇವೆ. ಇದರಿಂದ ಬಾರಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದೇವೆ. ನಮ್ಮ ಬಳಿ ಆಸ್ಪತ್ರೆಗಳಿಗೆ ಹೋಗುವುದಕ್ಕೂ ಹಣ ಇಲ್ಲ. ಕನಿಷ್ಠ ಆಹಾರ ಕಿಟ್‌ಗಳನ್ನು ಕೂಡ ಯಾರೂ ನೀಡ್ತಿಲ್ಲ. ಹಲವು ಬಾರಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದೇವೆ. ಆದರೆ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಅರ್ಚಕರು ನೋವು ತೋಡಿಕೊಂಡಿದ್ದಾರೆ.

ಒಂದು ವರ್ಷಕ್ಕೆ 48 ಸಾವಿರ ರೂ. ಹಣ ನೀಡುತ್ತಾರೆ. ಇದರಿಂದ ನಾವು ಹೇಗೆ ಜೀವನ ಮಾಡೋದೆಂದು ಅರ್ಚಕರೊಬ್ಬರು ಪ್ರಶ್ನೆ ಮಾಡಿದ್ದಾರೆ. ನಮಗೂ ಸಿಎಂ ಪ್ಯಾಕೇಜ್ ಘೋಷಿಸಿದ್ದರೆ ಒಳ್ಳೆಯದು ಎಂದು ಅಖಿಲ ಕರ್ನಾಟಕ ಹಿಂದೂ ದೇಗುಲಗಳ ಅರ್ಚಕರ ಸಂಘದಿಂದ ಮನವಿ ಮಾಡಿಕೊಂಡಿದ್ದಾರೆ. ಅರ್ಚಕರ ಸಂಘದ ಮುಖ್ಯ ಕಾರ್ಯದರ್ಶಿ ಎಸ್.ಕೆ.ಎನ್‌ ಧೀಕ್ಷಿತ್ ಹಾಗೂ ಸಹ ಕಾರ್ಯದರ್ಶಿ ವೇದ ಭ್ರಹ್ಮಶ್ರೀ ಉಮೇಶ್ ಶರ್ಮಾ ಈಗಾಗಲೇ ಮುಜರಾಯಿ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಪತ್ರವನ್ನೂ ಕೂಡಾ ಬರೆದು ಮನವಿ ಮಾಡಿಕೊಂಡಿದ್ದಾರೆ. ಆದರೆ ಇರುವರೆಗೂ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಅರ್ಚಕರು ಸಂಕಷ್ಟದಲ್ಲಿದ್ದಾರೆ.

ಇದನ್ನೂ ಓದಿ: ಕೊವಿಡ್ ಕೇರ್ ಸೆಂಟರ್​ನಲ್ಲಿ ಸುಗಮ ಸಂಗೀತ ಕಾರ್ಯಕ್ರಮ.. ಹಾಡು ಕೇಳಿ ನೋವು ಮರೆತ ಸೋಂಕಿತರು

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!