AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSC ಸೂಚಿಸಿದ ಆಸ್ಪತ್ರೆಯಿಂದ ತಪ್ಪು ಫಿಟ್ನೆಸ್ ಸರ್ಟಿಫಿಕೇಟ್, ಕೈತಪ್ಪಿದ ಹುದ್ದೆ! ಆದರೆ ಹೈಕೋರ್ಟ್ ನೀಡಿತು ಮಹತ್ವದ ಆದೇಶ

Karnataka High Court: ಅರ್ಹತೆಯುಳ್ಳ ಅಭ್ಯರ್ಥಿಗಳು ಮುಂದೆ ಹೀಗೆ ವಂಚಿತರಾಗಬಾರದು. ಕೆಪಿಎಸ್ಸಿ ತನ್ನಿಚ್ಛೆಯಂತೆ ವೈದ್ಯಕೀಯ ಪರೀಕ್ಷೆ ನಡೆಸಲು ಅವಕಾಶ ನೀಡಬಾರದು. ಆದ್ದರಿಂದ ನೇಮಕಾತಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಶಾಶ್ವತ ವೈದ್ಯಕೀಯ ಮಂಡಳಿ ರಚಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

KPSC ಸೂಚಿಸಿದ ಆಸ್ಪತ್ರೆಯಿಂದ ತಪ್ಪು ಫಿಟ್ನೆಸ್ ಸರ್ಟಿಫಿಕೇಟ್, ಕೈತಪ್ಪಿದ ಹುದ್ದೆ! ಆದರೆ ಹೈಕೋರ್ಟ್ ನೀಡಿತು ಮಹತ್ವದ ಆದೇಶ
ಕರ್ನಾಟಕ್​ ಹೈಕೋರ್ಟ್​
TV9 Web
| Updated By: ಸಾಧು ಶ್ರೀನಾಥ್​|

Updated on: May 26, 2022 | 9:44 PM

Share

ಬೆಂಗಳೂರು: ದೈಹಿಕ ಅರ್ಹತೆ ಇದ್ದರೂ ಬೌರಿಂಗ್ ಆಸ್ಪತ್ರೆ ನೀಡಿದ್ದ ತಪ್ಪು ವರದಿಯಿಂದಾಗಿ ಅಭ್ಯರ್ಥಿಯೊಬ್ಬರು ಹುದ್ದೆಯಿಂದ ವಂಚಿತರಾದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್, ಅರ್ಜಿದಾರನನ್ನು ಮತ್ತೆ ಹುದ್ದೆಗೆ ಪರಿಗಣಿಸುವಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ (KPSC) ಆದೇಶಿಸಿದೆ.

ಇದೇ ವೇಳೆ ಕೆಪಿಎಸ್ಸಿ ನಿಯೋಜಿತ ಆಸ್ಪತ್ರೆಗಳು ತಪ್ಪು ವರದಿಗಳನ್ನು ನೀಡುವುದನ್ನು ತಪ್ಪಿಸಲು ಹಾಗೂ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ ವೈದ್ಯಕೀಯ ಪ್ರಮಾಣಪತ್ರ ನೀಡುವಾಗ ಪಾದರ್ಶಕತೆ ಕಾಯ್ದುಕೊಳ್ಳಲು ಶಾಶ್ವತ ವೈದ್ಯಕೀಯ ಮಂಡಳಿಯನ್ನು ಸ್ಥಾಪಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ. ಹಾಸನದ ಬಿ.ಎನ್. ಶಿವನಂಜೇಗೌಡ ಎಂಬುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಬಿ.ವೀರಪ್ಪ ಹಾಗೂ ನ್ಯಾ ಎಸ್.ರಾಚಯ್ಯ ಅವರಿದ್ದ ವಿಭಾಗೀಯ ಪೀಠ ಈ ಮಹತ್ವದ ತೀರ್ಪು ನೀಡಿದೆ.

ಪ್ರಕರಣದ ಹಿನ್ನೆಲೆ: ಹಾಸನದ ಶಿವನಂಜೇಗೌಡ ಎಂಬುವರು 2019ರಲ್ಲಿ ಮೋಟಾರು ವಾಹನ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ದೇಹದಾರ್ಢ್ಯ ಪರೀಕ್ಷೆ ನಡೆಸಿದ್ದ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ವೈದ್ಯರು, ಶಿವನಂಜೇಗೌಡರಿಗೆ ಬಣ್ಣದ ದೃಷ್ಟಿ ದೋಷವಿದೆ. ನಿಗದಿತ ಎತ್ತರಕ್ಕಿಂತ ಅರ್ಧ ಸೆಂ.ಮೀ. ಕಡಿಮೆ ಇದ್ದಾರೆ ಎಂದು ಸರ್ಟಿಫಿಕೇಟ್ ನೀಡಿದ್ದರು. ಈ ಪ್ರಮಾಣಪತ್ರ ಪರಿಗಣಿಸಿ ಕೆಪಿಎಸ್‌ಸಿ ಶಿವನಂಜೇಗೌಡರ ಅರ್ಜಿಯನ್ನು ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ, ಶಿವನಂಜೇಗೌಡ ಕೆಎಟಿಗೆ ಅರ್ಜಿ ಸಲ್ಲಿಸಿದ್ದರು. ಕೆಎಟಿ ಕೂಡ ಮನವಿ ಪರಿಗಣಿಸದ ಹಿನ್ನೆಲೆಯಲ್ಲಿ, ಹೈಕೋರ್ಟ್ ಮೆಟ್ಟಿಲೇರಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, 2022ರ ಏಪ್ರಿಲ್ 18ರಂದು ಶಿವನಂಜೇಗೌಡ ಅವರನ್ನು ಪರೀಕ್ಷಿಸಿ ಫಿಟ್ನೆಸ್ ಸರ್ಟಿಫಿಕೇಟ್ ನೀಡುವಂತೆ ಮಿಂಟೋ ಆಸ್ಪತ್ರೆಗೆ ನಿರ್ದೇಶಿಸಿತ್ತು. ಮಿಂಟೋ ಆಸ್ಪತ್ರೆ ವೈದ್ಯರು ಪರೀಕ್ಷೆ ನಡೆಸಿ ಸಲ್ಲಿಸಿದ್ದ ವರದಿಯಲ್ಲಿ ಶಿವನಂಜೇಗೌಡ ಅವರಿಗೆ ಬಣ್ಣದ ದೃಷ್ಟಿ ದೋಷವಿಲ್ಲ. ಹಾಗೆಯೇ, ಮೋಟಾರು ವಾಹನ ಇನ್ಸ್ಪೆಕ್ಟರ್ ಹುದ್ದೆಗೆ ನಿಗದಿ ಮಾಡಿರುವ ದೈಹಿಕ ಅರ್ಹತೆಯನ್ನು ಹೊಂದಿದ್ದಾರೆ ಎಂದು ಪ್ರಮಾಣಿಕರಿಸಿತ್ತು.

ಮಿಂಟೋ ವರದಿ ಪರಿಗಣಿಸಿದ ಹೈಕೋರ್ಟ್‌, ಅರ್ಹತೆ ಇದ್ದರೂ ಬೌರಿಂಗ್ ಆಸ್ಪತ್ರೆಯ ವೈದ್ಯರ ಯಡವಟ್ಟಿನಿಂದಾಗಿ ಅರ್ಜಿದಾರರು ಹುದ್ದೆ ಕಳೆದುಕೊಂಡಿರುವುದು ದುರಾದೃಷ್ಟಕರ. ಹೀಗಾಗಿ, ಅರ್ಜಿದಾರರನ್ನು ಮೋಟಾರು ವಾಹನ ಇನ್ಸ್ಪೆಕ್ಟರ್ ಹುದ್ದೆಗೆ ಮತ್ತೆ ಪರಿಗಣಿಸಬೇಕು ಎಂದು ಕೆಪಿಎಸ್ಸಿಗೆ ಆದೇಶಿಸಿದೆ.

ಇದೇ ವೇಳೆ, ಅರ್ಹತೆಯುಳ್ಳ ಅಭ್ಯರ್ಥಿಗಳು ಮುಂದೆ ಹೀಗೆ ವಂಚಿತರಾಗಬಾರದು. ಕೆಪಿಎಸ್ಸಿ ತನ್ನಿಚ್ಛೆಯಂತೆ ವೈದ್ಯಕೀಯ ಪರೀಕ್ಷೆ ನಡೆಸಲು ಅವಕಾಶ ನೀಡಬಾರದು. ಆದ್ದರಿಂದ ನೇಮಕಾತಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಶಾಶ್ವತ ವೈದ್ಯಕೀಯ ಮಂಡಳಿ ರಚಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ