AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSC ಸೂಚಿಸಿದ ಆಸ್ಪತ್ರೆಯಿಂದ ತಪ್ಪು ಫಿಟ್ನೆಸ್ ಸರ್ಟಿಫಿಕೇಟ್, ಕೈತಪ್ಪಿದ ಹುದ್ದೆ! ಆದರೆ ಹೈಕೋರ್ಟ್ ನೀಡಿತು ಮಹತ್ವದ ಆದೇಶ

Karnataka High Court: ಅರ್ಹತೆಯುಳ್ಳ ಅಭ್ಯರ್ಥಿಗಳು ಮುಂದೆ ಹೀಗೆ ವಂಚಿತರಾಗಬಾರದು. ಕೆಪಿಎಸ್ಸಿ ತನ್ನಿಚ್ಛೆಯಂತೆ ವೈದ್ಯಕೀಯ ಪರೀಕ್ಷೆ ನಡೆಸಲು ಅವಕಾಶ ನೀಡಬಾರದು. ಆದ್ದರಿಂದ ನೇಮಕಾತಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಶಾಶ್ವತ ವೈದ್ಯಕೀಯ ಮಂಡಳಿ ರಚಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

KPSC ಸೂಚಿಸಿದ ಆಸ್ಪತ್ರೆಯಿಂದ ತಪ್ಪು ಫಿಟ್ನೆಸ್ ಸರ್ಟಿಫಿಕೇಟ್, ಕೈತಪ್ಪಿದ ಹುದ್ದೆ! ಆದರೆ ಹೈಕೋರ್ಟ್ ನೀಡಿತು ಮಹತ್ವದ ಆದೇಶ
ಕರ್ನಾಟಕ್​ ಹೈಕೋರ್ಟ್​
TV9 Web
| Edited By: |

Updated on: May 26, 2022 | 9:44 PM

Share

ಬೆಂಗಳೂರು: ದೈಹಿಕ ಅರ್ಹತೆ ಇದ್ದರೂ ಬೌರಿಂಗ್ ಆಸ್ಪತ್ರೆ ನೀಡಿದ್ದ ತಪ್ಪು ವರದಿಯಿಂದಾಗಿ ಅಭ್ಯರ್ಥಿಯೊಬ್ಬರು ಹುದ್ದೆಯಿಂದ ವಂಚಿತರಾದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್, ಅರ್ಜಿದಾರನನ್ನು ಮತ್ತೆ ಹುದ್ದೆಗೆ ಪರಿಗಣಿಸುವಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ (KPSC) ಆದೇಶಿಸಿದೆ.

ಇದೇ ವೇಳೆ ಕೆಪಿಎಸ್ಸಿ ನಿಯೋಜಿತ ಆಸ್ಪತ್ರೆಗಳು ತಪ್ಪು ವರದಿಗಳನ್ನು ನೀಡುವುದನ್ನು ತಪ್ಪಿಸಲು ಹಾಗೂ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ ವೈದ್ಯಕೀಯ ಪ್ರಮಾಣಪತ್ರ ನೀಡುವಾಗ ಪಾದರ್ಶಕತೆ ಕಾಯ್ದುಕೊಳ್ಳಲು ಶಾಶ್ವತ ವೈದ್ಯಕೀಯ ಮಂಡಳಿಯನ್ನು ಸ್ಥಾಪಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ. ಹಾಸನದ ಬಿ.ಎನ್. ಶಿವನಂಜೇಗೌಡ ಎಂಬುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಬಿ.ವೀರಪ್ಪ ಹಾಗೂ ನ್ಯಾ ಎಸ್.ರಾಚಯ್ಯ ಅವರಿದ್ದ ವಿಭಾಗೀಯ ಪೀಠ ಈ ಮಹತ್ವದ ತೀರ್ಪು ನೀಡಿದೆ.

ಪ್ರಕರಣದ ಹಿನ್ನೆಲೆ: ಹಾಸನದ ಶಿವನಂಜೇಗೌಡ ಎಂಬುವರು 2019ರಲ್ಲಿ ಮೋಟಾರು ವಾಹನ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ದೇಹದಾರ್ಢ್ಯ ಪರೀಕ್ಷೆ ನಡೆಸಿದ್ದ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ವೈದ್ಯರು, ಶಿವನಂಜೇಗೌಡರಿಗೆ ಬಣ್ಣದ ದೃಷ್ಟಿ ದೋಷವಿದೆ. ನಿಗದಿತ ಎತ್ತರಕ್ಕಿಂತ ಅರ್ಧ ಸೆಂ.ಮೀ. ಕಡಿಮೆ ಇದ್ದಾರೆ ಎಂದು ಸರ್ಟಿಫಿಕೇಟ್ ನೀಡಿದ್ದರು. ಈ ಪ್ರಮಾಣಪತ್ರ ಪರಿಗಣಿಸಿ ಕೆಪಿಎಸ್‌ಸಿ ಶಿವನಂಜೇಗೌಡರ ಅರ್ಜಿಯನ್ನು ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ, ಶಿವನಂಜೇಗೌಡ ಕೆಎಟಿಗೆ ಅರ್ಜಿ ಸಲ್ಲಿಸಿದ್ದರು. ಕೆಎಟಿ ಕೂಡ ಮನವಿ ಪರಿಗಣಿಸದ ಹಿನ್ನೆಲೆಯಲ್ಲಿ, ಹೈಕೋರ್ಟ್ ಮೆಟ್ಟಿಲೇರಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, 2022ರ ಏಪ್ರಿಲ್ 18ರಂದು ಶಿವನಂಜೇಗೌಡ ಅವರನ್ನು ಪರೀಕ್ಷಿಸಿ ಫಿಟ್ನೆಸ್ ಸರ್ಟಿಫಿಕೇಟ್ ನೀಡುವಂತೆ ಮಿಂಟೋ ಆಸ್ಪತ್ರೆಗೆ ನಿರ್ದೇಶಿಸಿತ್ತು. ಮಿಂಟೋ ಆಸ್ಪತ್ರೆ ವೈದ್ಯರು ಪರೀಕ್ಷೆ ನಡೆಸಿ ಸಲ್ಲಿಸಿದ್ದ ವರದಿಯಲ್ಲಿ ಶಿವನಂಜೇಗೌಡ ಅವರಿಗೆ ಬಣ್ಣದ ದೃಷ್ಟಿ ದೋಷವಿಲ್ಲ. ಹಾಗೆಯೇ, ಮೋಟಾರು ವಾಹನ ಇನ್ಸ್ಪೆಕ್ಟರ್ ಹುದ್ದೆಗೆ ನಿಗದಿ ಮಾಡಿರುವ ದೈಹಿಕ ಅರ್ಹತೆಯನ್ನು ಹೊಂದಿದ್ದಾರೆ ಎಂದು ಪ್ರಮಾಣಿಕರಿಸಿತ್ತು.

ಮಿಂಟೋ ವರದಿ ಪರಿಗಣಿಸಿದ ಹೈಕೋರ್ಟ್‌, ಅರ್ಹತೆ ಇದ್ದರೂ ಬೌರಿಂಗ್ ಆಸ್ಪತ್ರೆಯ ವೈದ್ಯರ ಯಡವಟ್ಟಿನಿಂದಾಗಿ ಅರ್ಜಿದಾರರು ಹುದ್ದೆ ಕಳೆದುಕೊಂಡಿರುವುದು ದುರಾದೃಷ್ಟಕರ. ಹೀಗಾಗಿ, ಅರ್ಜಿದಾರರನ್ನು ಮೋಟಾರು ವಾಹನ ಇನ್ಸ್ಪೆಕ್ಟರ್ ಹುದ್ದೆಗೆ ಮತ್ತೆ ಪರಿಗಣಿಸಬೇಕು ಎಂದು ಕೆಪಿಎಸ್ಸಿಗೆ ಆದೇಶಿಸಿದೆ.

ಇದೇ ವೇಳೆ, ಅರ್ಹತೆಯುಳ್ಳ ಅಭ್ಯರ್ಥಿಗಳು ಮುಂದೆ ಹೀಗೆ ವಂಚಿತರಾಗಬಾರದು. ಕೆಪಿಎಸ್ಸಿ ತನ್ನಿಚ್ಛೆಯಂತೆ ವೈದ್ಯಕೀಯ ಪರೀಕ್ಷೆ ನಡೆಸಲು ಅವಕಾಶ ನೀಡಬಾರದು. ಆದ್ದರಿಂದ ನೇಮಕಾತಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಶಾಶ್ವತ ವೈದ್ಯಕೀಯ ಮಂಡಳಿ ರಚಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​