AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಸಮುದಾಯದ ನಡುವೆ ಮಾರಾಮಾರಿ: ಬಾಳೆ ಗಿಡ, ಹುಲ್ಲಿನ ಮೆದೆ ನಾಶ

ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ಎರಡು ಸಮುದಾಯದ ನಡುವೆ ಮಾರಾಮಾರಿ ನಡೆದಿದೆ. ಘಟನೆಯಲ್ಲಿ ಎರಡು ಕಡೆಯವರಿಗೂ ಗಂಭೀರವಾಗಿ ಪೆಟ್ಟು ಬಿದ್ದಿದೆ. ಇದರ ಜೊತೆಗೆ ಒಂದು ಸಮುದಾಯದವರು ಮತ್ತೊಂದು ಸಮುದಾಯಕ್ಕೆ ಸೇರಿದವರ ಬಾಳೆ ಗಿಡಗಳನ್ನು ಕತ್ತರಿಸಿ ಹಾಕಿದ್ದಾರೆ.

ಎರಡು ಸಮುದಾಯದ ನಡುವೆ ಮಾರಾಮಾರಿ: ಬಾಳೆ ಗಿಡ, ಹುಲ್ಲಿನ ಮೆದೆ ನಾಶ
ಸುಟ್ಟು ಹೋಗಿರುವ ಹಲ್ಲು, ಉರುಳಿ ಬಿದ್ದರುವ ಆಟೋ
sandhya thejappa
| Updated By: ಸಾಧು ಶ್ರೀನಾಥ್​|

Updated on: Mar 01, 2021 | 6:08 PM

Share

ಮೈಸೂರು: ಇತ್ತೀಚಿಗೆ ವೈಯಕ್ತಿಕ ಜಗಳಗಳಿಗೆ ಜಾತಿ ಬಣ್ಣ ಕಟ್ಟುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ಜೊತೆಗೆ ಈ ರೀತಿ ಜಗಳಗಳಾದಾಗ ಬೆಳೆಗಳ ಮೇಲೆ ತಮ್ಮ ಕೋಪವನ್ನು ತೀರಿಸಿಕೊಳ್ಳುವ ಕೆಟ್ಟ ಮನಸ್ಥಿತಿಗೆ ಜನರು ತಲುಪಿದ್ದಾರೆ. ಇಂತಹದ್ದೇ ಒಂದು ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ಎರಡು ಸಮುದಾಯದ ನಡುವೆ ಮಾರಾಮಾರಿ ನಡೆದಿದೆ. ಘಟನೆಯಲ್ಲಿ ಎರಡು ಕಡೆಯವರಿಗೂ ಗಂಭೀರವಾಗಿ ಪೆಟ್ಟು ಬಿದ್ದಿದೆ. ಇದರ ಜೊತೆಗೆ ಒಂದು ಸಮುದಾಯದವರು ಮತ್ತೊಂದು ಸಮುದಾಯಕ್ಕೆ ಸೇರಿದವರ ಬಾಳೆ ಗಿಡಗಳನ್ನು ಕತ್ತರಿಸಿ ಹಾಕಿದ್ದಾರೆ. ಹುಲ್ಲಿನ ಮೆದೆಗೆ ಬೆಂಕಿ ಹಾಕಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ರೈತ ಬಾಲು ಅವರ ಹುಲ್ಲಿನ ಮೆದೆ ಭಸ್ಮವಾಗಿದೆ. ರೈತ ರೇವಣ್ಣ ಜಮೀನಿನಲ್ಲಿ ಬೆಳೆದಿದ್ದ ಬಾಳೆ ಗಿಡಗಳನ್ನು ಕತ್ತರಿಸಿ ಹಾಕಲಾಗಿದೆ. ಘಟನೆಯಲ್ಲಿ ಒಂದು ಸಮುದಾಯದ ಇಬ್ಬರ ಮೇಲೆ ಹಲ್ಲೆ ನಡೆದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳೆ ನಾಶಕ್ಕೆ ಕಾರಣ 15 ದಿನದ ಹಿಂದೆ ಗ್ರಾಮದಲ್ಲಿ ನಡೆದ ಬೈಕ್ ವಿಚಾರವಾಗಿ ನಡೆದ ಗಲಾಟೆ. ಒಂದು ಬೈಕ್ ಅಡವಿಟ್ಟುಕೊಳ್ಳುವ ಬಗ್ಗೆ ಎರಡು ಸಮುದಾಯದ ಯುವಕರ ನಡುವೆ ಗಲಾಟೆಯಾಗಿ ಕೈ ಕೈ ಮಿಲಾಯಿಸುವ ಹಂತ ತಲುಪಿತ್ತು. ನಂತರ ಎಲ್ಲವೂ ತಿಳಿಯಾಗಿತ್ತು. ಫೆಬ್ರವರಿ 27ಕ್ಕೆ ಮತ್ತೆ ಇದೇ ವಿಚಾರಕ್ಕೆ ಎರಡು ಸಮುದಾಯದವರ ನಡುವೆ ಗಲಾಟೆ ನಡೆದು ರಾದ್ಧಾಂತ ಆಗಿದೆ. ಒಂದು ಸಮುದಾಯದವರ ವಿರುದ್ಧ ಹಲ್ಲೆ ನಡೆಸಿದ ಹಾಗೂ ಬೆಳೆ ನಾಶ ಮಾಡಿದ ಆರೋಪ ಕೇಳಿ ಬಂದಿದೆ. ಆದರೆ ಆ ಆರೋಪವನ್ನು ಆ ಸಮುದಾಯದವರು ಸಾರಾಸಗಟಾಗಿ ನಿರಾಕರಿಸಿದ್ದಾರೆ.

ಗ್ರಾಮದಲ್ಲಿ ಪೊಲೀಸರ ಭದ್ರತೆ

ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮದಲ್ಲಿ ಪೊಲೀಸ್ ಬಿಗಿ ಬಂದೋ ಬಸ್ತ್ ಮಾಡಲಾಗಿದೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ

Baarack Sheep: ಈ ಪರಿ ಉಣ್ಣೆ ಬೆಳೆಸಿಕೊಂಡ ಕುರಿಯನ್ನು ಎಲ್ಲಾದರೂ ನೋಡಿದ್ದೀರಾ?

ಬಿಸಿಲ ನಾಡಲ್ಲಿ ಶೀತ ಪ್ರದೇಶದ ‘ಫಲ’! ಸ್ಟ್ರಾಬೆರಿ ಹಣ್ಣನ್ನು ವಿಶ್ವವಿದ್ಯಾಲಯದ ಆವರಣದಲ್ಲಿ ಬೆಳೆದು ಮಾದರಿಯಾದ ವಿಜಯಪುರ ವಿದ್ಯಾರ್ಥಿನಿಯರು

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?