AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಸಮುದಾಯದ ನಡುವೆ ಮಾರಾಮಾರಿ: ಬಾಳೆ ಗಿಡ, ಹುಲ್ಲಿನ ಮೆದೆ ನಾಶ

ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ಎರಡು ಸಮುದಾಯದ ನಡುವೆ ಮಾರಾಮಾರಿ ನಡೆದಿದೆ. ಘಟನೆಯಲ್ಲಿ ಎರಡು ಕಡೆಯವರಿಗೂ ಗಂಭೀರವಾಗಿ ಪೆಟ್ಟು ಬಿದ್ದಿದೆ. ಇದರ ಜೊತೆಗೆ ಒಂದು ಸಮುದಾಯದವರು ಮತ್ತೊಂದು ಸಮುದಾಯಕ್ಕೆ ಸೇರಿದವರ ಬಾಳೆ ಗಿಡಗಳನ್ನು ಕತ್ತರಿಸಿ ಹಾಕಿದ್ದಾರೆ.

ಎರಡು ಸಮುದಾಯದ ನಡುವೆ ಮಾರಾಮಾರಿ: ಬಾಳೆ ಗಿಡ, ಹುಲ್ಲಿನ ಮೆದೆ ನಾಶ
ಸುಟ್ಟು ಹೋಗಿರುವ ಹಲ್ಲು, ಉರುಳಿ ಬಿದ್ದರುವ ಆಟೋ
sandhya thejappa
| Edited By: |

Updated on: Mar 01, 2021 | 6:08 PM

Share

ಮೈಸೂರು: ಇತ್ತೀಚಿಗೆ ವೈಯಕ್ತಿಕ ಜಗಳಗಳಿಗೆ ಜಾತಿ ಬಣ್ಣ ಕಟ್ಟುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ಜೊತೆಗೆ ಈ ರೀತಿ ಜಗಳಗಳಾದಾಗ ಬೆಳೆಗಳ ಮೇಲೆ ತಮ್ಮ ಕೋಪವನ್ನು ತೀರಿಸಿಕೊಳ್ಳುವ ಕೆಟ್ಟ ಮನಸ್ಥಿತಿಗೆ ಜನರು ತಲುಪಿದ್ದಾರೆ. ಇಂತಹದ್ದೇ ಒಂದು ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ಎರಡು ಸಮುದಾಯದ ನಡುವೆ ಮಾರಾಮಾರಿ ನಡೆದಿದೆ. ಘಟನೆಯಲ್ಲಿ ಎರಡು ಕಡೆಯವರಿಗೂ ಗಂಭೀರವಾಗಿ ಪೆಟ್ಟು ಬಿದ್ದಿದೆ. ಇದರ ಜೊತೆಗೆ ಒಂದು ಸಮುದಾಯದವರು ಮತ್ತೊಂದು ಸಮುದಾಯಕ್ಕೆ ಸೇರಿದವರ ಬಾಳೆ ಗಿಡಗಳನ್ನು ಕತ್ತರಿಸಿ ಹಾಕಿದ್ದಾರೆ. ಹುಲ್ಲಿನ ಮೆದೆಗೆ ಬೆಂಕಿ ಹಾಕಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ರೈತ ಬಾಲು ಅವರ ಹುಲ್ಲಿನ ಮೆದೆ ಭಸ್ಮವಾಗಿದೆ. ರೈತ ರೇವಣ್ಣ ಜಮೀನಿನಲ್ಲಿ ಬೆಳೆದಿದ್ದ ಬಾಳೆ ಗಿಡಗಳನ್ನು ಕತ್ತರಿಸಿ ಹಾಕಲಾಗಿದೆ. ಘಟನೆಯಲ್ಲಿ ಒಂದು ಸಮುದಾಯದ ಇಬ್ಬರ ಮೇಲೆ ಹಲ್ಲೆ ನಡೆದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳೆ ನಾಶಕ್ಕೆ ಕಾರಣ 15 ದಿನದ ಹಿಂದೆ ಗ್ರಾಮದಲ್ಲಿ ನಡೆದ ಬೈಕ್ ವಿಚಾರವಾಗಿ ನಡೆದ ಗಲಾಟೆ. ಒಂದು ಬೈಕ್ ಅಡವಿಟ್ಟುಕೊಳ್ಳುವ ಬಗ್ಗೆ ಎರಡು ಸಮುದಾಯದ ಯುವಕರ ನಡುವೆ ಗಲಾಟೆಯಾಗಿ ಕೈ ಕೈ ಮಿಲಾಯಿಸುವ ಹಂತ ತಲುಪಿತ್ತು. ನಂತರ ಎಲ್ಲವೂ ತಿಳಿಯಾಗಿತ್ತು. ಫೆಬ್ರವರಿ 27ಕ್ಕೆ ಮತ್ತೆ ಇದೇ ವಿಚಾರಕ್ಕೆ ಎರಡು ಸಮುದಾಯದವರ ನಡುವೆ ಗಲಾಟೆ ನಡೆದು ರಾದ್ಧಾಂತ ಆಗಿದೆ. ಒಂದು ಸಮುದಾಯದವರ ವಿರುದ್ಧ ಹಲ್ಲೆ ನಡೆಸಿದ ಹಾಗೂ ಬೆಳೆ ನಾಶ ಮಾಡಿದ ಆರೋಪ ಕೇಳಿ ಬಂದಿದೆ. ಆದರೆ ಆ ಆರೋಪವನ್ನು ಆ ಸಮುದಾಯದವರು ಸಾರಾಸಗಟಾಗಿ ನಿರಾಕರಿಸಿದ್ದಾರೆ.

ಗ್ರಾಮದಲ್ಲಿ ಪೊಲೀಸರ ಭದ್ರತೆ

ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮದಲ್ಲಿ ಪೊಲೀಸ್ ಬಿಗಿ ಬಂದೋ ಬಸ್ತ್ ಮಾಡಲಾಗಿದೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ

Baarack Sheep: ಈ ಪರಿ ಉಣ್ಣೆ ಬೆಳೆಸಿಕೊಂಡ ಕುರಿಯನ್ನು ಎಲ್ಲಾದರೂ ನೋಡಿದ್ದೀರಾ?

ಬಿಸಿಲ ನಾಡಲ್ಲಿ ಶೀತ ಪ್ರದೇಶದ ‘ಫಲ’! ಸ್ಟ್ರಾಬೆರಿ ಹಣ್ಣನ್ನು ವಿಶ್ವವಿದ್ಯಾಲಯದ ಆವರಣದಲ್ಲಿ ಬೆಳೆದು ಮಾದರಿಯಾದ ವಿಜಯಪುರ ವಿದ್ಯಾರ್ಥಿನಿಯರು

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!