AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಬಹುತೇಕ ಮದ್ಯದ ಅಂಗಡಿಗಳಲ್ಲಿ ಮದ್ಯ ಖಾಲಿ ! ಮದ್ಯ ಸರಬರಾಜು ಇಲ್ಲದೆ ಪರದಾಡುತ್ತಿರುವ ಅಂಗಡಿ ಮಾಲಿಕರು

ಬೆಂಗಳೂರು ನಗರದಲ್ಲಿ ಕಳೆದ ಒಂದು ವಾರಾದಿಂದ ಸರ್ವರ್ ತೊಂದರೆಯಿಂದ ಮದ್ಯದ ಅಂಗಡಿಗಳಿಗೆ  ಮದ್ಯ ಸರಬರಾಜು ಆಗುತ್ತಿಲ್ಲ.

ಬೆಂಗಳೂರಿನ ಬಹುತೇಕ ಮದ್ಯದ ಅಂಗಡಿಗಳಲ್ಲಿ ಮದ್ಯ ಖಾಲಿ !  ಮದ್ಯ ಸರಬರಾಜು ಇಲ್ಲದೆ ಪರದಾಡುತ್ತಿರುವ ಅಂಗಡಿ ಮಾಲಿಕರು
ಸಾಂಧರ್ಬಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: Jul 07, 2022 | 4:41 PM

Share

ಬೆಂಗಳೂರು: ಕಳೆದ ಒಂದು ವಾರಾದಿಂದ ಸರ್ವರ್ ತೊಂದರೆಯಿಂದ (Server Problem) ನಗರದ ಮದ್ಯದ ಅಂಗಡಿಗಳಿಗೆ (Alcohol  Shops) ಮದ್ಯ ಸರಬರಾಜು ಆಗುತ್ತಿಲ್ಲ. ಹೀಗಾಗಿ ನಗರದ ಬಹುತೇಕ ಮದ್ಯದ ಅಂಗಡಿಗಳಲ್ಲಿ ಮದ್ಯ ಖಾಲಿಯಾಗಿದೆ. ಹೀಗಾಗಿ ಮದ್ಯದ ಅಂಗಡಿಯ ಮಾಲಿಕರು ಶಾಂತಿನಗರದ (Shanti Nagar) ಬಳಿ ಇರುವ ಕೆ.ಎಸ್.ಬಿ.ಸಿ.ಎಲ್ (KSBCL) ಕಛೇರಿಗೆ ಬಂದು ಅಂಗಡಿಗಳಲ್ಲಿ ಮದ್ಯದ ಸ್ಟಾಕ್ ಇಲ್ಲವೆಂದು ಆಕ್ರೋಶ ಹೊರಹಾಕುತ್ತಿದ್ದಾರೆ. ಸರ್ವರ್ ತೊಂದರೆಯಿಂದಾಗಿ ವ್ಯಾಪಾರಿಗಳಿಗೆ ನಷ್ಟವಾಗಿದೆ. ಜೊತೆಗೆ ಸರ್ಕಾರಕ್ಕು ಕೂಡ ಕೋಟ್ಯಾಂತರ ರುಪಾಯಿ ನಷ್ಟವಾಗುತ್ತಿದೆ.

K.S.B.C.L ಅಧಿಕಾರಿಗಳು ಮತ್ತು ಮದ್ಯ ಮಾರಾಟಗಾರರ ನಡುವೆ ಮಾತಿನ ಚಕಮಕಿ ನಡೆದಿದ್ದು, ಮಾತುಕತೆಯಲ್ಲಿ ಸುಮಾರು ಮುನ್ನೂರಕ್ಕೂ ಹೆಚ್ಚು ಮಾದ್ಯಮ ಮಾರಾಟಗಾರರು ಭಾಗಿಯಾಗಿದ್ದಾರೆ. ಮಾದ್ಯಮ ಮಾರಾಟಗಾರರ ಪ್ರಶ್ನೆಗಳಿಗೆ ಅಧಿಕಾರಿಗಳಿಗೆ ಉತ್ತರ ಕೊಡಲು ಆಗುತ್ತಿಲ್ಲ. ಸದ್ಯ ಮಾತುಕತೆ ಸ್ಥಳಕ್ಕೆ ವ್ಯವಸ್ಥಾಪಕ ನಿರ್ದೇಶಕ P.C ಜಾಫರ್ ಆಗಮಿಸಿದ್ದು, ಮದ್ಯದ ಮಾರಾಟಗಾರರ ಅಸೋಸಿಯೇಷನ್​​ನ ಜೊತೆ ಕಳೆದ ಮೂರು ಗಂಟೆಯಿಂದ ಚರ್ಚೆ ಮಾಡುತ್ತಿದ್ದಾರೆ.

ಕರ್ನಾಟಕದಲ್ಲಿ ಶನಿವಾರದಿಂದ ಮದ್ಯ ಮಾರಾಟ ಬಂದ್ ಏಕೆ ಗೊತ್ತಾ? 

ಕರ್ನಾಟಕ ಸರ್ಕಾರವು ಮದ್ಯ ಪೂರೈಕೆ ವ್ಯವಸ್ಥೆಯಲ್ಲಿ ಆಗಿರುವ ಲೋಪಗಳನ್ನು 24 ಗಂಟೆಗಳ ಒಳಗೆ ಸರಿಪಡಿಸದಿದ್ದರೆ ಮುಂದಿನ ಶನಿವಾರದಿಂದ (ಜುಲೈ 9) ಮದ್ಯಮಾರಾಟ ಬಂದ್ ಮಾಡಲಾಗುವುದು ಎಂದು ಮದ್ಯ ಮಾರಾಟಗಾರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಸ್.ಗುರುಸ್ವಾಮಿ ಎಚ್ಚರಿಸಿದರು. ನಗರದಲ್ಲಿ ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ಯ ಖರೀದಿಗೆ ಅನುಸರಿಸಬೇಕಾದ ಪ್ರಕ್ರಿಯೆಯಲ್ಲಿ ಹತ್ತಾರು ಗೊಂದಲಗಳಿವೆ. ಸಕಾಲದಲ್ಲಿ ಮದ್ಯ ಪೂರೈಕೆಯಾಗದೆ ಬಾರ್ ಮಾಲೀಕರು ಸಂಕಷ್ಟ ಅನುಭವಿಸುವಂತಾಗಿದೆ. ನಮ್ಮನ್ನು ಏಕೆ ಹೀಗೆ ಗೋಳು ತೆಗೆಯುತ್ತಿದ್ದೀರಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಈ ಮೊದಲು ಕೆಎಸ್​ಬಿಸಿಎಲ್ ಅಕೌಂಟ್​ಗೆ ಹಣ ಹಾಕಿದರೆ ನಮಗೆ ಬೇಕಾದ ಮದ್ಯ ಸುಲಭವಾಗಿ ಸಿಗುತ್ತಿತ್ತು. ಬಿಲಿಂಗ್ ವ್ಯವಸ್ಥೆ ಮ್ಯಾನ್ಯುವಲ್ ಆಗಿ ಇತ್ತು. ಆದರೆ ಏಪ್ರಿಲ್ 4ರಿಂದ ಹೊಸ ಪದ್ಧತಿ ಆರಂಭವಾಯಿತು ಎಂದು ಅವರು ವಿವರಿಸಿದರು. ವೆಬ್ ಇಂಡೆಂಟಿಂಗ್ ವ್ಯವಸ್ಥೆ ಜಾರಿಯಾದ ನಂತರ ಎಲ್ಲವನ್ನೂ ಹಿಂದಿನ ದಿನವೇ ಪೂರ್ಣಗೊಳಿಸಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ಹೇಳಿದರು.

ಇದನ್ನು ಓದಿ: ಭಾವನೆಗಳ ಸುನಾಮಿ ಮೂಡ್​ಸ್ವಿಂಗ್ ಬಗ್ಗೆ ನಿಮಗೆಷ್ಟು ಗೊತ್ತು?

ಸಗಟು ಮದ್ಯ ಖರೀದಿದಾರರ ಸಂಕಷ್ಟಗಳನ್ನು ಎಳೆಎಳೆಯಾಗಿ ಬಿಡಿಸಿಟ್ಟ ಅವರು, ಮೊದಲು ವೆಬ್​ಸೈಟ್​ಗೆ ಲಾಗಿನ್ ಆಗಿ ನಮ್ಮಲ್ಲಿ ಬೇಡಿಕೆಯಿರುವ ಬ್ರಾಂಡ್​ಗಳ ಮದ್ಯ ಆಯ್ಕೆ ಮಾಡಿಕೊಳ್ಳಬೇಕು. ಆದರೆ ಲಾಗಿನ್ ಆಗುವ ಅವಧಿಯನ್ನು ಮೊದಲು ಬೆಳಿಗ್ಗೆ 9 ಗಂಟೆಗೆ ನಿಗದಿಪಡಿಸಿದ್ದರು. ನಂತರ ಸಂಜೆ 5ರಿಂದ 6 ಗಂಟೆಗೆ ಅವಕಾಶ ಮಾಡಿಕೊಟ್ಟರು ಎಂದು ಹೇಳಿದರು. ಈಗಂತೂ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಜುಲೈ 1ರಿಂದ ರಾಜ್ಯದಲ್ಲಿ ಎಲ್ಲಿಯೂ ಸಮರ್ಪಕ ರೀತಿಯಲ್ಲಿ ಮದ್ಯ ಖರೀದಿ ಸಾಧ್ಯವಾಗುತ್ತಿಲ್ಲ. ಒಂದೆಡೆ ಲೈಸೆನ್ಸ್​ಗಳು ನವೀಕರಣಗೊಂಡಿವೆ. ಇನ್ನೊಂದೆಡೆ ಸರ್ವ್ ವ್ಯವಸ್ಥೆ ಹಾಳಾಗಿದೆ. ಇಂದು (ಜುಲೈ 7) ಮುಂಜಾನೆಯಿಂದ ಇಡೀ ಪ್ರಕ್ರಿಯೆ ಸಂಪೂರ್ಣ ಸ್ಥಗಿತಗೊಂಡಿದೆ ಎಂದು ವಿಷಾದಿಸಿದರು.

ಇದನ್ನು ಓದಿ:  ಮಾಜಿ ಕಾರ್ಪೊರೇಟರ್‌ ಬಳಿಯೇ ಲಂಚ ಸ್ವೀಕರಿಸುತ್ತಿದ್ದ ಬಿಎಂಟಿಎಫ್ ಮಹಿಳಾ ಸಬ್​​ಇನ್ಸ್​​ಪೆಕ್ಟರ್​​​ ಎಸಿಬಿ ಬಲೆಗೆ ಬಿದ್ದರು!

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ