AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿತೀಯ ಪಿಯುಸಿ ಪರೀಕ್ಷೆ ರದ್ದು; ಪ್ರತಿಷ್ಠಿತ ಕಾಲೇಜುಗಳಲ್ಲಿ ಹೆಚ್ಚಿದ ಸೀಟು ಬೇಡಿಕೆ

ಕಾಲೇಜುಗಳಲ್ಲಿ ಸೀಟ್​ಗಾಗಿ ಬೇಡಿಕೆ ಹೆಚ್ಚಾಗಿರುವ ಕಾರಣ ಪ್ರವೇಶ ಪರೀಕ್ಷೆ ನಡೆಸುವುದಕ್ಕೆ ಕಾಲೇಜುಗಳು ನಿರ್ಧರಿಸಿದೆ. ಆದರೆ ಸರ್ಕಾರದ ಸೂಚನೆಗಾಗಿ ಕಾಯುತ್ತಿವೆ. ವಿದ್ಯಾರ್ಥಿಗಳ ಪದವಿ ಕೋರ್ಸ್​ಗಳಿಗೆ ತಮ್ಮದೇ ಮಾನದಂಡ ಅನುಸರಿಸಲು ಕೆಲ ಪ್ರತಿಷ್ಠಿತ ಕಾಲೇಜುಗಳು ಮುಂದಾಗಿವೆ.

ದ್ವಿತೀಯ ಪಿಯುಸಿ ಪರೀಕ್ಷೆ ರದ್ದು; ಪ್ರತಿಷ್ಠಿತ ಕಾಲೇಜುಗಳಲ್ಲಿ ಹೆಚ್ಚಿದ ಸೀಟು ಬೇಡಿಕೆ
ಪ್ರಾತಿನಿಧಿಕ ಚಿತ್ರ
TV9 Web
| Updated By: sandhya thejappa|

Updated on: Jun 07, 2021 | 1:30 PM

Share

ಬೆಂಗಳೂರು: ಮೂರನೇ ಅಲೆಯಲ್ಲಿ ಕೊರೊನಾ ಸೋಂಕು ಮಕ್ಕಳಿಗೆ ಹೆಚ್ಚು ಹರಡುತ್ತೆ ಎಂದು ತಜ್ಞರು ಹೇಳಿದ್ದಾರೆ. ಅಕ್ಟೋಬರ್ ಅಥವಾ ನವೆಂಬರ್ ಹೊತ್ತಿಗೆ ಕೊರೊನಾ ಮೂರನೇ ಅಲೆ ಬಂದು ಅಪ್ಪಳಿಸುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಸರ್ಕಾರ ಹೆಚ್ಚು ಜವಾಬ್ದಾರಿಯಿಂದ ಇರಬೇಕು ಅಂತ ತಿಳಿಸಿದೆ. ಹೀಗಾಗಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಿದೆ. ಪರೀಕ್ಷೆಯನ್ನು ರದ್ದುಗೊಳಿಸಿದ ಹಿನ್ನೆಲೆ ಬೆಂಗಳೂರಿನ ಪ್ರತಿಷ್ಠಿತ ಕಾಲೇಜುಗಳಲ್ಲಿ ಸೀಟ್​ಗಾಗಿ ಬೇಡಿಕೆ ಹೆಚ್ಚಾಗಿದೆ.

ಕಾಲೇಜುಗಳಲ್ಲಿ ಸೀಟ್​ಗಾಗಿ ಬೇಡಿಕೆ ಹೆಚ್ಚಾಗಿರುವ ಕಾರಣ ಪ್ರವೇಶ ಪರೀಕ್ಷೆ ನಡೆಸುವುದಕ್ಕೆ ಕಾಲೇಜುಗಳು ನಿರ್ಧರಿಸಿದೆ. ಆದರೆ ಸರ್ಕಾರದ ಸೂಚನೆಗಾಗಿ ಕಾಯುತ್ತಿವೆ. ವಿದ್ಯಾರ್ಥಿಗಳ ಪದವಿ ಕೋರ್ಸ್​ಗಳಿಗೆ ತಮ್ಮದೇ ಮಾನದಂಡ ಅನುಸರಿಸಲು ಕೆಲ ಪ್ರತಿಷ್ಠಿತ ಕಾಲೇಜುಗಳು ಮುಂದಾಗಿವೆ. ಪ್ರವೇಶ ಪರೀಕ್ಷೆ ಮೂಲಕ ಆಯ್ಕೆ ಮಾಡಲು ಕಾಲೇಜುಗಳು ಸಿದ್ಧತೆ ಮಾಡಿಕೊಂಡಿವೆ. ಸೀಟು ನೀಡಲು ಪಿಯು ಅಂಕವನ್ನು ಪರಿಗಣಿಸುವುದಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ. ಪ್ರವೇಶ ಪರೀಕ್ಷೆ ಆಧಾರದ ಮೇಲೆ ಸೀಟು ನೀಡಲಾಗುತ್ತದೆ.

ಎನ್.ಎಂ.ಕೆ.ಆರ್.ವಿ ಕಾಲೇಜು, ಮೌಂಟ್ ಕಾರ್ಮಲ್, ಶೇಷಾದ್ರಿ ಪುರಂ ಸೇರಿದಂತೆ ಹಲವು ಪ್ರತಿಷ್ಠಿತ ಕಾಲೇಜುಗಳು ಈ ಮಾನದಂಡ ಅನುಸರಿಸಲು ಮುಂದಾಗಿವೆ. ಸೀಟು ಬೇಡಿಕೆ ಬಗ್ಗೆ ಟಿವಿ9 ಗೆ ಪ್ರತಿಕ್ರಿಯಿಸಿದ ಬೆಂಗಳೂರು ವಿವಿ ಕುಲಪತಿ ಪ್ರೋ.ಕೆ.ಆರ್.ವೇಣುಗೋಪಾಲ್, ಈ ಬಾರಿ ಸೀಟುಗಳಿಗೆ ಹೆಚ್ಚು ಬೇಡಿಕೆ ಬರುತ್ತಿದೆ. ಪರೀಕ್ಷೆ ರದ್ದಾದ ಕಾರಣ ಪ್ರವೇಶ ಪರೀಕ್ಷೆಯನ್ನು ನಡೆಸಿ ಆ ಬಳಿಕ ಸೀಟು ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತದೆ. ಆದರೆ ಸರ್ಕಾರದ ಸೂಚನೆಗಾಗಿ ಕಾಯುತ್ತಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ

ದ್ವಿತೀಯ ಪಿಯುಸಿ ಪರೀಕ್ಷೆ ಶುಲ್ಕವನ್ನು ವಾಪಸ್ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪೋಷಕರ ಸಮನ್ವಯ ಸಮಿತಿ ಆಗ್ರಹ

ಬಗೆಹರಿಯುತ್ತಿಲ್ಲ ದ್ವಿತೀಯ ಪಿಯುಸಿ ಫಲಿತಾಂಶ ವಿಚಾರ; ಶಿಕ್ಷಣ ಇಲಾಖೆಗೆ ಸಲಹೆ, ಸವಾಲು ತಿಳಿಸಿದ ರುಪ್ಸಾ

(Due to the cancellation of the second PUC exam the demand for seats in prestigious colleges has increased)

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್