ಕಸ ಎಸೆದಿದ್ದಲ್ಲದೆ ನಗರ ಸಭೆ ಸಿಬ್ಬಂದಿಗೇ ಆವಾಜ್​: ಯುವಕನ ದ್ವಿಚಕ್ರ ವಾಹನ ​ವಶಕ್ಕೆ

Edited By:

Updated on: Oct 31, 2025 | 12:16 PM

ರಸ್ತೆಯಲ್ಲಿ ಕಸೆ ಎಸೆದಿದ್ದ ಕಾರಣ ದಂಡ ಕಟ್ಟು ಎಂದು ನಗರಸಭೆ ಸಿಬ್ಬಂದಿ ಹೇಳಿದರೆ ದಂಡ ಕಟ್ಟಲ್ಲ ಏನ್ ಮಾಡ್ತಿರೋ ಮಾಡ್ಕೊಳ್ಳಿ ಅಂತ ಆವಾಜ್​ ಹಾಕಿದ ಯುವಕನ ಬೈಕ್​ನ ವಶಪಡಿಸಿಕೊಳ್ಳಲಾದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ರಸ್ತೆಯಲ್ಲಿ ಕಸ ಸುರಿಯುವವರ ವಿರುದ್ಧ ನಗರಸಭೆ ದಂಡ ವಿಧಿಸುತ್ತಿದ್ದು, ನಗರದ ಕಂದವಾರ ರಸ್ತೆಯಲ್ಲಿ ಈ ಪ್ರಸಂಗ ನಡೆದಿದೆ.

ಚಿಕ್ಕಬಳ್ಳಾಪುರ, ಅಕ್ಟೋಬರ್​ 31: ಎಲ್ಲೆಂದರಲ್ಲಿ ಕಸ ಎಸೆಯುವವರ ಮನೆ ಬಾಗಿಲಿಗೇ ಕಸದ ರಾಶಿ ಸುರಿಯಲು ಗ್ರೇಟರ್​ ಬೆಂಗಳೂರು ಪ್ರಾಧಿಕಾರ ಮುಂದಾಗಿದ್ದರೆ, ಇತ್ತ ಚಿಕ್ಕಬಳ್ಳಾಪುರದಲ್ಲಿ ರಸ್ತೆಗೆ ತಂದು ಕಸ (Garbage )ಸುರಿದ ಯುವಕನ ಬೈಕ್ ವಶಪಡಿಸಿಕೊಳ್ಳಲಾಗಿದೆ. ರಸ್ತೆಯಲ್ಲಿ ಕಸ ಸುರಿಯುವವರ ವಿರುದ್ಧ ನಗರಸಭೆ ದಂಡ ವಿಧಿಸುತ್ತಿದ್ದು, ದಂಡ ಕಟ್ಟದ ಯುವಕನ ಬೈಕ್​ನ ನಗರಸಭೆ ಸಿಬ್ಬಂದಿ ವಶಕ್ಕೆ ಪಡೆದಿರುವ ಘಟನೆ ನಗರದ ಕಂದವಾರ ರಸ್ತೆಯಲ್ಲಿ ನಡೆದಿದೆ. ಬೈಕ್​ನಲ್ಲಿ ಕಸದ ಕವರ್ ತಂದು ರಸ್ತೆಗೆ ಯುವಕ ಸುರಿಯುತ್ತಿದ್ದ ವೇಳೆ ಆ ಬಗ್ಗೆ ಚಿಕ್ಕಬಳ್ಳಾಪುರ ನಗರಸಭೆ ಸಿಬ್ಬಂದಿ ಪ್ರಶ್ನೆ ಮಾಡಿದ್ದಾರೆ. ಕಸ ಹಾಕಿದ್ದಕ್ಕೆ ದಂಡ ಕಟ್ಟುವಂತೆ ಹೇಳಿದ್ದಾರೆ. ಈ ವೇಳೆ ದಂಡ ಕಟ್ಟಲ್ಲ ಏನ್ ಮಾಡ್ತಿರೋ ಮಾಡ್ಕೊಳ್ಳಿ ಅಂತ ಯುವಕನ ಆವಾಜ್ ಹಾಕಿದ್ದಾನೆ. ಹೀಗಾಗಿ ಆತನ ಬೈಕ್ ಸೀಜ್​ ಮಾಡಿ ಪಾಠ ಕಲಿಸಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

 

Published on: Oct 31, 2025 12:10 PM
Follow Us
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More