AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಫೇಸ್‌ಬುಕ್​ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ ಲಕ್ಷಾಂತರ ರೂ ವಂಚಿಸಿದ್ದ ಮೇಟಗಳ್ಳಿ ಯುವತಿ ಸೆರೆ

Facebook fraud: ರವಿ ಎಂಬ ವ್ಯಕ್ತಿಗೆ ವಂಚನೆ ಮಾಡಲು ಮುಂದಾದ ಮೇಘಾ ಅಲಿಯಾಸ್​ ಹರಿಣಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಆತನು ರಿಕ್ವೆಸ್ಟ್ ಅನ್ನು ಅಕ್ಸೆಪ್ಟ್ ಮಾಡಿದ ಮೇಲೆ ವಂಚನೆಗಿಳಿದಿದ್ದಾಳೆ. ತಮ್ಮ ತಂದೆಗೆ 2 ಪೆಟ್ರೋಲ್ ಬಂಕ್ ಮತ್ತು ಬಾರ್ ಗಳು ಇರುವುದಾಗಿ ಹೇಳಿ, ಲಕ್ಷಾಂತರ ಹಣ ಪಡೆದು ವಂಚಿಸಿದ್ದಾಳೆ.

ಮೈಸೂರು: ಫೇಸ್‌ಬುಕ್​ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ ಲಕ್ಷಾಂತರ ರೂ ವಂಚಿಸಿದ್ದ ಮೇಟಗಳ್ಳಿ ಯುವತಿ ಸೆರೆ
ಮೈಸೂರು: ಫೇಸ್‌ಬುಕ್​ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ ಲಕ್ಷಾಂತರ ರೂ ವಂಚಿಸಿದ್ದ ಮೇಟಗಳ್ಳಿ ಯುವತಿ ಸೆರೆ
ಸಾಧು ಶ್ರೀನಾಥ್​
| Edited By: |

Updated on:Mar 17, 2021 | 12:02 PM

Share

ಮೈಸೂರು: ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿರುವ ಫೇಸ್‌ಬುಕ್​ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ ವಂಚಿಸುವ ಪ್ರಕರಣಗಳು ದಿನೆದಿನೇ ಹೆಚ್ಚಾಗುತ್ತಿವೆ. ಉನ್ನತ ಪೊಲೀಸ್​ ಅಧಿಕಾರಿಗಳಿಂದ ಹಿಡಿದು ಆಡಳಿತಾರೂಢ ಜನಪ್ರತಿನಿಧಿಗಳಿಗೂ ಫೇಸ್‌ಬುಕ್​ನಲ್ಲಿ ವಂಚನೆ ಪ್ರಕರಣಗಳು ಕಾಡತೊಡಗಿವೆ. ತಾಜಾ ಪ್ರಕರಣದಲ್ಲಿ ಮೈಸೂರಿನಲ್ಲಿ ಯುವತಿಯೊಬ್ಬಳು ನಕಲಿ ಖಾತೆ ತೆರೆದು ಜನರ ಅಸಲಿ ಖಾತೆಗೆ ಕನ್ನಹಾಕಿದ್ದಾಳೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮೇಘಾ ಅಲಿಯಾಸ್​ ಹರಿಣಿ ಎಂಬ ಮಹಿಳೆಯನ್ನು ಬಂಧಿಸಿದ್ದಾರೆ.

ಮೇಘಾ ಅಲಿಯಾಸ್​ ಹರಿಣಿ ಫೇಸ್‌ಬುಕ್ ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿಕೊಂಡು ಯುವಕರಿಗೆ ವಂಚನೆ ಮಾಡುತ್ತಿದ್ದಳು. ಈ ವಂಚನೆ ಪುರಾಣದಲ್ಲಿ ಲಕ್ಷಾಂತರ ರೂಪಾಯಿ ಹಣ ಹಾಗೂ ಆಭರಣಗಳನ್ನು ಲಪಟಾಯಿಸಿರುವುದೂ ಪತ್ತೆಯಾಗಿದೆ. ಯುವತಿ ಚಿನ್ನು ಗೌಡ ಎಂಬ ಹೆಸರಿನಲ್ಲಿ ನಕಲಿ ಪ್ರೊಫೈಲ್‌ ಸೃಷ್ಟಿಸಿಕೊಂಡು ವಂಚನೆಯಲ್ಲಿ ತೊಡಗಿದ್ದಳು. ಮೇಟಗಳ್ಳಿ ಪೊಲೀಸರ ಸಕಾಲಿಕ ಕಾರ್ಯಾಚರಣೆ ಮೂಲಕ ಯುವತಿ ಈಗ ಪೊಲೀಸ್​ ಬಂಧನದಲ್ಲಿದ್ದಾಳೆ.

Facebook fraud in mysore

ಮೇಘಾ ಅಲಿಯಾಸ್​ ಹರಿಣಿ

ರವಿ ಎಂಬ ವ್ಯಕ್ತಿಗೆ ವಂಚನೆ ಮಾಡಲು ಮುಂದಾದ ಮೇಘಾ ಅಲಿಯಾಸ್​ ಹರಿಣಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಆತನು ರಿಕ್ವೆಸ್ಟ್ ಅನ್ನು ಅಕ್ಸೆಪ್ಟ್ ಮಾಡಿದ ಮೇಲೆ ವಂಚನೆಗಿಳಿದಿದ್ದಾಳೆ. ಬೇರೆಯವರ ಫೋಟೋಗಳನ್ನು ತನ್ನದೇ ಫೋಟೋ ಎಂದು ಕಳುಹಿಸಿ ಪರಿಚಯ ಮಾಡಿಕೊಂಡಿದ್ದಾಳೆ. ತಮ್ಮ ತಂದೆಗೆ 2 ಪೆಟ್ರೋಲ್ ಬಂಕ್ ಮತ್ತು ಬಾರ್​ಗಳು ಇರುವುದಾಗಿ ಹೇಳಿ, ಲಕ್ಷಾಂತರ ಹಣ ಪಡೆದು ವಂಚಿಸಿದ್ದಾಳೆ. ಪ್ರಕರಣ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಫೇಸ್​ಬುಕ್​ ಸ್ನೇಹಿತನ ಜೊತೆ ಪ್ರೀತಿಗೆ ಬಿದ್ದಿದ್ದ ಯುವತಿ ಅವನದೇ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Published On - 11:03 am, Wed, 17 March 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!